ಶಂಕರಮೂರ್ತಿಗೆ ಜೆಡಿಎಸ್ ಬೆಂಬಲ, ಶಾಸಕರಿಗೆ ವಿಪ್ ಜಾರಿ
ಬೆಂಗಳೂರು, ಜೂನ್ 14: ಗುರುವಾರ ವಿಧಾನಪರಿಷತ್ ನಲ್ಲಿ ನಡೆಯಲಿರುವ ಅವಿಶ್ವಾಸ ನಿರ್ಣಯದ ಮೇಲಿನ ಮತದಾನದಲ್ಲಿ ಸಭಾಪತಿ ಡಿ.ಎಚ್ ಶಂಕರಮೂರ್ತಿಯವರನ್ನು ಬೆಂಬಲಿಸಲು ಜೆಡಿಎಸ್ ನಿರ್ಧರಿಸಿದೆ.
ನಾಳೆ ಪ್ರಶ್ನೋತ್ತರ ವೇಳೆ ಹಾಗೂ ಶೂನ್ಯವೇಳೆಯ ಬಳಿಕ ಅವಿಶ್ವಾಸ ನಿರ್ಣಯದ ಮೇಲೆ ಮತದಾನ ನಡೆಯಲಿದೆ. ಕಾಂಗ್ರೆಸ್ ನ ಒಬ್ಬರು ಸದಸ್ಯರಿಗೆ ಅವಿಶ್ವಾಸ ನಿರ್ಣಯದ ಮೇಲೆ ಚರ್ಚೆ ನಡೆಸಲು ಅವಕಾಶ ನೀಡಲಾಗಿದೆ. ಇದಾದ ನಂತರ ಮತದಾನ ನಡೆಯಲಿದೆ.
ಶಂಕರಮೂರ್ತಿ ವಿರುದ್ಧ ಕಾಂಗ್ರೆಸಿನಿಂದ ಅವಿಶ್ವಾಸ ನಿರ್ಣಯ
'ಬಿಜೆಪಿ ಜತೆ ಮೈತ್ರಿ ಮುಂದುವರಿಸಬೇಕು ಎಂದು ನಿರ್ಧರಿಸಿದ್ದೇವೆ,' ಎಂದು ಕುಮಾರಸ್ವಾಮಿ ಬೆಂಬಲ ನೀಡಿದ್ದಕ್ಕೆ ಸ್ಪಷ್ಟನೆ ನೀಡಿದ್ದಾರೆ.
ಪರಿಷತ್ ಸಭಾಪತಿ ಶಂಕರಮೂರ್ತಿ ಪದಚ್ಯುತಿಗೆ ಕಾಂಗ್ರೆಸ್ ತಂತ್ರ
ಪಕ್ಷದ ಎಲ್ಲಾ 13 ಶಾಸಕರಿಗೆ ಈ ಸಂಬಂಧ ವಿಪ್ ಜಾರಿಗೊಳಿಸಲಾಗಿದ್ದು ಮತದಾನದ ವೇಳೆ ಕಡ್ಡಾಯ ಹಾಜರಿರುವಂತೆ ಸೂಚನೆ ನೀಡಿದೆ.
Comments
English summary
JDS decided to support Legislative Council chairman D.H. Shankaramurthy in motion of confidence voting will be held on June 15.
Story first published: Wednesday, June 14, 2017, 20:42 [IST]