ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ಜೆಡಿಎಸ್ ಬಲ ವೃದ್ಧಿ!
ಬೆಂಗಳೂರು, ಮೇ 16: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಬೆಂಗಳೂರು ನಗರದ ಎರಡು ಹಾಗೂ ರಾಮನಗರ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಚಿವ ಡಿ.ಕೆ.ಶಿವಕುಮಾರ್ರಂತಹ ಘಟಾನುಘಟಿ ರಾಜಕಾರಣಿಗಳಿಗೆ ಮತ್ತೊಮ್ಮೆ ಒಲಿದಿದೆ.
ಇದೇ ಮೊದಲ ಬಾರಿಗೆ ಮಾಜಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ರಾಮನಗರ ಹಾಗೂ ಚನ್ನಪಟ್ಟಣ ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ರಾಮನಗರ ಜಿಲ್ಲೆಯ ಮೇಲೆ ಹಿಡಿತ ಮತ್ತೊಮ್ಮೆ ಸಾಧಿಸಿದ್ದಾರೆ. ಒಕ್ಕಲಿಗ ಮತಗಳೇ ಪ್ರಮುಖವಾಗಿರುವ ಇಡೀ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಜೆಡಿಎಸ್ ಬಂಡಾಯದ ಏಳು ಮಂದಿ ಶಾಸಕರ ಪೈಕಿ ಎಚ್.ಸಿ.ಬಾಲಕೃಷ್ಣ ಮಾಗಡಿಯಲ್ಲಿ ಪರಾಭವಗೊಂಡಿದ್ದಾರೆ. ಸಿನಿಮಾ ನಿರ್ಮಾಪಕ ಕಂ ಶಾಸಕ ಮುನಿರತ್ನ ಪ್ರತಿನಿಧಿಸುವ ರಾಜರಾಜೇಶ್ವರಿನಗರ ಚುನಾವಣೆ ಮುಂದಕ್ಕೆ ಹೋಗಿದೆ.
ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿರುವ ಸಿನಿಮಾ ನಿರ್ಮಾಪಕ ಕಮ್ ಶಾಸಕ ಮುನಿರತ್ನ ನಾಯ್ಡು ಪ್ರತಿನಿಧಿಸುವ ಕ್ಷೇತ್ರ ರಾಜರಾಜೇಶ್ವರಿ ನಗರದ ಚುನಾವಣೆ ಅಕ್ರಮದ ಆರೋಪದ ಹಿನ್ನೆಲೆಯಲ್ಲಿ ಚುನಾವಣೆ ಮುಂದೂಡಲಾಗಿದೆ.

ಎಚ್ಡಿಕ ಕುಮಾರಸ್ವಾಮಿ ವಿರುದ್ಧ ಯೋಗೀಶ್ವರ್ ಸೋಲು
ಒಮ್ಮೆ ಬಿಜೆಪಿ, ಒಮ್ಮೆ ಕಾಂಗ್ರೆಸ್, ಮತ್ತೊಮ್ಮೆ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿ ಆಯ್ಕೆಯಾಗಿ ಇದೀಗ ಮತ್ತೊಮ್ಮೆ ಬಿಜೆಪಿಯಿಂದಲೇ ಚನ್ನಪಟ್ಟಣದಲ್ಲಿ ಸ್ಪರ್ಧಿಸಿದ್ದ ಸಿ.ಪಿ.ಯೋಗೀಶ್ವರ್ ಸೋಲಿನ ರುಚಿ ಕಂಡಿದ್ದಾರೆ. ರಾಮನಗರ ಜಿಲ್ಲೆಯ ರಾಜಕಾರಣದ ಮೇಲಿನ ಯೋಗೀಶ್ವರ್ ಹಿಡಿತ ತಪ್ಪಿಸಲೆಂದೇ ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಯೋಗೀಶ್ವರ್ ವಿರುದ್ಧ ಸ್ಪರ್ಧಿಸಿದ್ದರು. ಸಚಿವ ಎಚ್.ಎಂ.ರೇವಣ್ಣ ಕೂಡ ಕಣದಲ್ಲಿದ್ದರೂ ಹೆಚ್ಚು ಸದ್ದು ಮಾಡಲಿಲ್ಲ.

ಬಿಜೆಪಿ ಕಾಂಗ್ರೆಸ್ ಸೋಲಿಸಿದ ಕುಮಾರಸ್ವಾಮಿ
ರಾಜ್ಯದಲ್ಲಿ ಶತಾಯಗತಾಯ ಸಾಮರ್ಥ್ಯ ಸಾಬೀತು ಮಾಡಲೆಂದೇ ಪಣ ತೊಟ್ಟಿದ್ದ ಜೆಡಿಎಸ್ನ ಸಿಎಂ ಅಭ್ಯರ್ಥಿ ಹಾಗೂ ರಾಜ್ಯ ಜೆಡಿಎಸ್ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ರಾಮನಗರದಿಂದ ಮತ್ತೊಮ್ಮೆ ಗೆಲುವು ಸಾಧಿಸಿದ್ದಾರೆ. ಬಿಜೆಪಿಯಿಂದ ಎಚ್.ಲೀಲಾವತಿ ಹಾಗೂ ಕಾಂಗ್ರೆಸ್ನಿಂದ ಎಚ್.ಎ.ಇಕ್ಬಾಲ್ ಹುಸೇನ್ ಕಣದಲ್ಲಿದ್ದರು.

ನಂದಿನಿಗೌಡ ವಿರುದ್ಧ ಡಿಕೆಶಿ ಗೆಲುವು
ವಿಧಾನಸಭೆ ಚುನಾವಣೆಯ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷರೂ ಆದ ಸಚಿವ ಡಿ.ಕೆ.ಶಿವಕುಮಾರ್ ಕನಕಪುರ ಕ್ಷೇತ್ರದಿಂದ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. ವೋಟ್ ಬ್ಯಾಂಕ್ ಇಲ್ಲದ ಬಿಜೆಪಿಯಿಂದ ಒಕ್ಕಲಿಗ ಸಮುದಾಯದವರೇ ಆದ ನಂದಿನಿ ಗೌಡ ಕಣದಲ್ಲಿದ್ದರು.

ಮಾಗಡಿಯಲ್ಲಿ ಎಚ್ಸಿ ಬಾಲಕೃಷ್ಣ ಸೋಲು
ಈಚೆಗಷ್ಟೇ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಸಿಡಿದೆದ್ದು, ಕಾಂಗ್ರೆಸ್ ಸೇರ್ಪಡೆಗೊಂಡ ಎಚ್.ಸಿ.ಬಾಲಕೃಷ್ಣ ಮಾಗಡಿ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದಾರೆ. ಜೆಡಿಎಸ್ನ ಎ.ಮಂಜುನಾಥ್ ಗೆಲುವಿನ ನಗೆ ಬೀರಿದ್ದಾರೆ.

ಕಾಂಗ್ರೆಸ್ನ ಆರ್ಕೆ ರಮೇಶ್ ಸೋಲು
ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿಯ ಎಂ.ಕೃಷ್ಣಪ್ಪ ಮತ್ತೊಮ್ಮೆ ಗೆದ್ದಿದ್ದಾರೆ. 2008ರಲ್ಲಿ ಕಾಂಗ್ರೆಸ್ ವಿರುದ್ಧ, 2013ರಲ್ಲಿ ಜೆಡಿಎಸ್ ಕೃಷ್ಣಪ್ಪ ಗೆಲುವು ಸಾಧಿಸಿದ್ದರು. ಒಕ್ಕಲಿಗ ಮತಗಳೇ ಈ ಕ್ಷೇತ್ರದಲ್ಲಿ ನಿರ್ಣಾಯಕವಾಗಿದ್ದವು. ಕಾಂಗ್ರೆಸ್ನಿಂದ ಆರ್.ಕೆ.ರಮೇಶ್, ಜೆಡಿಎಸ್ನಿಂದ ಡಾ.ಆರ್.ಪ್ರಭಾಕರ್ ರೆಡ್ಡಿ ಕಣದಲ್ಲಿದ್ದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications