ಪಕ್ಷ ಸಂಘಟಿಸಲು ರಾಜ್ಯ ಪ್ರವಾಸಕ್ಕೆ ಜೆಡಿಎಸ್ ನಾಯಕರು: ಎಚ್ ಡಿಕೆ
ಬೆಂಗಳೂರು, ಡಿಸೆಂಬರ್ 14 : ರಾಜ್ಯದಲ್ಲಿ ಮುಂದಿನ ಚುನಾವಣೆಗೆ ಪಕ್ಷವನ್ನು ಸಂಘಟಿಸಲು ಜೆಡಿಎಸ್ ನಾಯಕರ ದಂಡು ರಾಜ್ಯ ಪ್ರವಾಸ ಮಾಡಲಿದೆ. ಒಟ್ಟು 12 ನಾಯಕರನ್ನೊಳಗೊಂಡ 5 ತಂಡಗಳು ರಾಜ್ಯ ಪ್ರವಾಸ ನಡೆಸಲಿವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ತಿಳಿಸಿದ್ದಾರೆ.
ಹಿಂದಿನ ವಿಧಾನ ಚುನಾವಣೆಗಳಲ್ಲಿ ಅತ್ಯಲ್ಪ ಮತಗಳ ಅಂತರದಲ್ಲಿ ಅನೇಕ ಕಡೆಗಳಲ್ಲಿ ಸೋತಿದ್ದೇವೆ. 350- 5,000 ಮತಗಳ ಅಂತರದಲ್ಲಿ ಸೋತಿರುವ ಕ್ಷೇತ್ರಗಳ ಸಂಖ್ಯೆ ಮೂವತ್ತಕ್ಕೂ ಹೆಚ್ಚಿದೆ. ಹೀಗಾಗಿ ಆ ಕ್ಷೇತ್ರಗಳಲ್ಲಿ ಪಕ್ಷವನ್ನು ಬಲಪಡಿಸಲು ಕಾರ್ಯತಂತ್ರ ರೂಪಿಸುವುದು ಜಿಲ್ಲಾ ಪ್ರವಾಸದ ಉದ್ದೇಶ. ಈ ಪ್ರವಾಸ ಡಿಸೆಂಬರ್ 19-23ರ ವರೆಗೆ ನಡೆಯಲಿದೆ ಎಂದು ಹೆಚ್ ಡಿಕೆ ಹೇಳಿದರು.[ನ.2ಕ್ಕೆ ಕೇಂದ್ರ ಬರ ಅಧ್ಯಯನ ತಂಡ ರಾಜ್ಯ ಪ್ರವಾಸ]

ಈ ತಂಡಗಳಿಂದ ಜನರ ಸಮಸ್ಯೆಗಳ ಮಾಹಿತಿ ಸಂಗ್ರಹಿಸಲಿವೆ. ಅಲ್ಲದೆ 28 ವಿಧಾನಸಭಾ ಕ್ಷೇತ್ರಗಳ ಮುಖಂಡರ ಸಭೆಯನ್ನು ಡಿಸೆಂಬರ್ 17-18 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದರು.
ಪಕ್ಷದಲ್ಲಿ 10 ಮಂದಿ ಪ್ರಧಾನ ಕಾರ್ಯದರ್ಶಿಗಳು, 10 ಮಂದಿ ಜಂಟಿ ಕಾರ್ಯದರ್ಶಿಗಳು , 10 ಮಂದಿ ಕಾರ್ಯದರ್ಶಿಗಳು, ಮೂವರು ಉಪಾಧ್ಯಕ್ಷರು ಮತ್ತು ಒಬ್ಬ ಹಿರಿಯ ಉಪಾಧ್ಯಕ್ಷರನ್ನು ನೇಮಕ ಮಾಡಲು ಉದ್ದೇಶಿಸಲಾಗಿದೆ. ಜನವರಿ ತಿಂಗಳಲ್ಲಿ ದಲಿತ ಮಹಿಳೆಯರು, ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗಗಳ ಸಮಾವೇಶ ನಡೆಸಲೂ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ತಿಳಿಸಿದರು.
ಪ್ರವಾಸಕ್ಕೆ ಅಣಿಯಾದ ತಂಡಗಳು
* ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಶರವಣ ಮತ್ತು ಕುಪೇಂದ್ರರೆಡ್ಡಿ ನೇತೃತ್ವದ ತಂಡ ಪ್ರವಾಸ
* ಶ್ರೀಮಂತ್ ಪಾಟೀಲ ನೇತೃತ್ವದ ತಂಡವು ಮುಂಬೈ ಕರ್ನಾಟಕ ಪ್ರದೇಶದ ಜಿಲ್ಲೆಗಳಲ್ಲಿ ಪರ್ಯಟನೆ
* ಮಧು ಬಂಗಾರಪ್ಪ ನೇತೃತ್ವದ ತಂಡವು ದಕ್ಷಿಣ ಕನ್ನಡ ಮತ್ತು ಸುತ್ತಮುತ್ತಲಿನ ಜಿಲ್ಲೆಗಳು
* ಬಂಡೆಪ್ಪ ಕಾಶಂಪೂರ್ ನೇತೃತ್ವದ ತಂಡವು ಹೈದ್ರಾಬಾದ್ ಕರ್ನಾಟಕ
* ಜಿ.ಟಿ.ದೇವೇಗೌಡ ನೇತೃತ್ವದ ತಂಡವು ಮೈಸೂರು ವಿಭಾಗದಲ್ಲಿ ಪ್ರವಾಸ ಮಾಡಲಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications