ಜೆಡಿಎಸ್ ಶಾಸಕಾಂಗ ಸಭೆ: ಆಪರೇಷನ್ ಕಮಲ ಪ್ರಮುಖ ಚರ್ಚೆ ವಿಷಯ
ಬೆಂಗಳೂರು, ಡಿಸೆಂಬರ್ 04: ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಿದ ಬೆನ್ನಲ್ಲೇ ಇದೀಗ ಜೆಡಿಎಸ್ ಪಕ್ಷ ಸಹ ಶಾಸಕಾಂಗ ಸಭೆ ನಡೆಸುತ್ತಿದೆ. ಇಂದು ಸಂಜೆ ನಗರದಲ್ಲಿ ಜೆಡಿಎಸ್ ಪಕ್ಷದ ಶಾಸಕಾಂಗ ಸಭೆ ನಡೆಯಲಿದೆ.
ಕಳೆದ ವಾರವೇ ಜೆಡಿಎಸ್ ಶಾಸಕಾಂಗ ಸಭೆ ನಿಗದಿ ಆಗಿತ್ತು. ಆದರೆ ಅಂಬರೀಶ್ ಅವರು ಕಾಲವಾದ ಕಾರಣ ಸಭೆಯನ್ನು ರದ್ದು ಮಾಡಲಾಗಿತ್ತು. ಈಗ ಇಂದು ಸಭೆ ನಿಗದಿಪಡಿಸಲಾಗಿದ್ದು, ಎಲ್ಲ ಜೆಡಿಎಸ್ ಶಾಸಕರು ಸಭೆಯಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಕೋರಲಾಗಿದೆ.
ನಾಳೆ (ಡಿಸೆಂಬರ್ 05) ಸಂಪುಟ ವಿಸ್ತರಣೆ ನಡೆಯುತ್ತಿದ್ದು, ಕಾಂಗ್ರೆಸ್ನಲ್ಲಿ ಮಹತ್ವದ ಬೆಳವಣಿಗೆಗಳು ನಡೆಯಲಿದೆ. ರಾಜ್ಯ ರಾಜಕಾರಣದಲ್ಲಿಯೂ ಮಹತ್ವದ ಬದಲಾವಣೆ ಸಾಧ್ಯತೆ ಇದೆ ಹಾಗಾಗಿ ಇಂದಿನ ಶಾಸಕಾಂಗ ಸಭೆ ಮಹತ್ವದ್ದಾಗಿದೆ.

ಬಿಜೆಪಿಯು ಈಗಾಗಲೇ ಆಪರೇಷನ್ ಕಮಲ ಆರಂಭಿಸಿದೆ ಹಲವು ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ಸಂಪರ್ಕ ಮಾಡಲಾಗಿದೆ. ಹಾಗಾಗಿ ಇಂದಿನ ಸಭೆಯಲ್ಲಿ ಜೆಡಿಎಸ್ ಶಾಸಕರಿಗೆ ಬಿಜೆಪಿಯಿಂದ ಅಂತರ ಕಾಯ್ದುಕೊಳ್ಳುವಂತೆ ಒತ್ತಿ ಹೇಳಲಾಗುತ್ತದೆ ಎನ್ನಲಾಗಿದೆ.
ಅಧಿವೇಶನದ ಬಗ್ಗೆ ಚರ್ಚೆ
ಎಚ್ಡಿಡಿ-ಎಚ್ಡಿಕೆ ನೇತೃತ್ವದಲ್ಲಿ ಸಭೆ
ದೇವೇಗೌಡ ಹಾಗೂ ಕುಮಾರಸ್ವಾಮಿ ನೇತೃತ್ವದಲ್ಲಿ ಶಾಸಕರ ಸಭೆ ನಡೆಯಲಿದೆ. ಸಭೆಯಲ್ಲಿ ಡಿಸೆಂಬರ್ 10 ರಿಂದ ಪ್ರಾರಂಭವಾಗುವ ಬೆಳಗಾವಿ ಅಧಿವೇಶನದ ಬಗ್ಗೆಯೂ ಮಾತನಾಡಲಾಗುತ್ತದೆ. ಅಧಿವೇಶನದಲ್ಲಿ ಜೆಡಿಎಸ್ ಶಾಸಕರು ನಿಭಾಯಿಸಬೇಕಾದ ಜವಾಬ್ದಾರಿಗಳ ಹಂಚಿಕೆ ಸಹ ಆಗಲಿದೆ.
ಸಿಎಂ ನಾಳೆ ಶೃಂಗೇರಿಗೆ ಹೋಗಬೇಕಿತ್ತು
ಶೃಂಗೇರಿ ಭೇಟಿ ರದ್ದು
ಪಕ್ಷದ ಶಾಸಕಾಂಗ ಸಭೆ ಇರುವ ಕಾರಣ ಕುಮಾರಸ್ವಾಮಿ ಅವರು ತಮ್ಮ ಶೃಂಗೇರಿ ಭೇಟಿಯನ್ನು ರದ್ದು ಮಾಡಿದ್ದಾರೆ. ಸಭೆಯು ದೀರ್ಘವಾಗಿ ನಡೆಯುವ ಸಾಧ್ಯತೆ ಇರುವ ಕಾರಣ ಭೇಟಿ ರದ್ದು ಮಾಡಿದ್ದಾರೆ. ಸಿಎಂ ಅವರು ನಾಳೆ ಶೃಂಗೇರಿಗೆ ಭೇಟಿ ನೀಡಿ ಶಾರದಾಂಬೆ ದರ್ಶನ ಪಡೆಯಬೇಕಿತ್ತು.
ಕೈ ಶಾಸಕರ ಸಮಸ್ಯೆ ಆಲಿಸಲಿದ್ದಾರೆ ಎಚ್ಡಿಕೆ
ಕೈ ಶಾಸಕರ ಸಭೆಯಲ್ಲಿ ಎಚ್ಡಿಕೆ ಭಾಗಿ
ಕಾಂಗ್ರೆಸ್ ಪಕ್ಷ ಸಹ ಸಂಪುಟ ವಿಸ್ತರಣೆ ಬಳಿಕ ಶಾಸಕಾಂಗ ಸಭೆ ಕರೆದಿದ್ದು, ವಿಶೇಷವಾಗಿ ಈ ಬಾರಿ ಕೈ ಶಾಸಕಾಂಗ ಸಭೆಯಲ್ಲಿ ಕುಮಾರಸ್ವಾಮಿ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕಾಂಗ್ರೆಸ್ ಶಾಸಕರ ಸಮಸ್ಯೆಗಳನ್ನು ಕುಮಾರಸ್ವಾಮಿ ಅವರು ಅಂದು ಆಲಿಸಲಿದ್ದಾರೆ.
ಸರ್ಕಾರ ರಚನೆ ಬಗ್ಗೆ ಮಹತ್ವದ ಮಾತುಕತೆ
ಬಿಜೆಪಿ ಶಾಸಕಾಂಗ ಸಭೆಯಲ್ಲಿ ಹಲವು ಚರ್ಚೆ
ಇತ್ತೀಚೆಗಷ್ಟೆ ಬಿಜೆಪಿ ಶಾಸಕಾಂಗ ಸಭೆ ನಡೆದಿತ್ತು. ಸಭೆಯಲ್ಲಿ ಅಧಿವೇಶನದಲ್ಲಿ ಬಿಜೆಪಿ ಹೋರಾಟ ಸೇರಿದಂತೆ ಸರ್ಕಾರ ರಚನೆ ಪ್ರಯತ್ನ, ಲೋಕಸಭೆ ಮತ್ತು ವಿಧಾನಸಭೆ ಉಪಚುನಾವಣೆ ಸೋಲು, ಮುಂದಿನ ಲೋಕಸಭೆ ಚುನಾವಣೆ ತಯಾರಿ ಮತ್ತು ಟಿಕೆಟ್ ಹಂಚಿಕೆ ಕುರಿತು ಮಾತುಕತೆಯಾಯಿತು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications