ಕೊಲಂಬೋದಲ್ಲಿ ಜೆಡಿಎಸ್ ಸಭೆ: ಖರ್ಚು ಯಾರದ್ದು?
ಬೆಂಗಳೂರು, ಜೂ.11: ಅಕ್ಕಪಕ್ಕದ ರಾಜ್ಯಗಳಲ್ಲಿ ಐಷಾರಾಮಿ ರೆಸಾರ್ಟುಗಳತ್ತ ರಾಜಕೀಯ ಗುಳೆ ಹೋಗುವುದು ನಮ್ಮ ರಾಜಕಾರಣಿಗಳಿಗೆ ಹೊಸದೇನೂ ಅಲ್ಲ. ಆದರೆ ಈ ಬಾರಿ ಜಾತ್ಯಾತೀತ ಜನತಾದಳ ಪಕ್ಷದ ನಾಯಕರು ಪಕ್ಕದ ಕೊಲಂಬೋಕ್ಕೆ ತೆರಳುತ್ತಿರುವುದು ಹಲವರ ಹುಬ್ಬೇರಿಸಿದೆ. ಪಕ್ಷದ ಶಾಸಕರು ಇಂದು ಬುಧವಾರ ಬೆಂಗಳೂರಿನಲ್ಲಿ ಸಭೆ ಸೇರಿ ತಮ್ಮ ವಿದೇಶ ಪ್ರವಾಸದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.
ಅಂದಹಾಗೆ ಜೆಡಿಎಸ್ ನಾಯಕರಿಗೆ ತಾವೂ ವಿದೇಶಿ ನೆಲೆಯಲ್ಲಿ ರಾಜಕೀಯ ಸಭೆಗಳನ್ನು ನಡೆಸುವಂತಾಗಬೇಕು ಎಂಬ ಸುಪ್ತ ಬಯಕೆಯಿತ್ಥಾದರೂ ಹಣಕಾಸು ಮುಗ್ಗಟ್ಟು ಅವರನ್ನು ಕಟ್ಟಿಹಾಕುತ್ತಿತ್ತು. (ಪಕ್ಷಕ್ಕೆ ಜೀವ ತುಂಬಲು ವಿದೇಶ ಪ್ರವಾಸಕ್ಕೆ ಹೊರಟ ಜೆಡಿಎಸ್)
ಆದರೆ ಇದೀಗ ರಾಜ್ಯಸಭೆ ಚುನಾವಣೆ ಜೆಡಿಎಸ್ ಪಕ್ಷಕ್ಕೆ ಬಯಸೆ ಬಂದ ಭಾಗ್ಯದಂತಾಗಿದೆ. ಮೂಲತಃ ಕಾಂಗ್ರೆಸ್ಸಿನವರೇ ಆದರೂ ರಿಯಲ್ ಎಸ್ಟೇಟ್ ಧಣಿ ಕುಪೇಂದ್ರ ರೆಡ್ಡಿ ಈ ಬಾರಿ ತುಸು ಕಾಂಗ್ರೆಸ್ ನೆರವಿನೊಂದಿಗೆ ತಮ್ಮ ಪಕ್ಷದ ಅಭ್ಯರ್ಥಿಯಾಗಿ ರಾಜ್ಯಸಭೆ ಅಖಾಡಕ್ಕೆ ಇಳಿದಿರುವುದು ಜೆಡಿಎಸ್ ಪಕ್ಷಕ್ಕೆ ವರವಾಗಿ ಪರಿಣಮಿಸಿದೆ.

ಏಕೆಂದರೆ ಪಕ್ಷದ ಒಳ ಮೂಲಗಳ ಪ್ರಕಾರ ಕುಪೇಂದ್ರ ರೆಡ್ಡಿ ಅವರು ಜೆಡಿಎಸ್ಸಿನ ಕೊಲಂಬೊ ಸಭೆಯ ಅಷ್ಟೂ ಖರ್ಚು ವೆಚ್ಚವನ್ನು ತಾವೇ ನೋಡಿಕೊಳ್ಳುವುದಾಗಿ ವಾಗ್ದಾನ ಮಾಡಿದ್ದಾರೆ ಎಂದು ತಿಳಿದುಬಂದಿದೆ. (ರಾಜ್ಯಸಭೆ ಚುನಾವಣೆ ಕುಪೇಂದ್ರ ರೆಡ್ಡಿ ಜೆಡಿಎಸ್ ಅಭ್ಯರ್ಥಿ)
39 ಮಂದಿ ಶಾಸಕರೊಂದಿಗೆ ವಿಧಾನಸಭೆಯಲ್ಲಿ ಜೆಡಿಎಸ್ ನಾಯಕರಾಗಿರುವ ಕುಮಾರಸ್ವಾಮಿ ಅವರು ಪಕ್ಷದ ಇತರೆ ಕೆಲ ನಾಯಕರೊಂದಿಗೆ ಶ್ರೀಲಂಕಾದ ಕೊಲಂಬೋದಲ್ಲಿ ಮೂರು ದಿನಗಳ ಕಾಲ ಮುಕ್ತವಾಗಿ ಸಮಾಲೋಚನೆ ನಡೆಸಲಿದ್ದಾರೆ.
ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಬ್ಯಾಕ್ ಟು ಬ್ಯಾಕ್ ಎಂಬಂತೆ ಸೋತು ಕಳೆಗುಂದಿರುವ ಜಾತ್ಯಾತೀತ ಜನತಾದಳ ಪಕ್ಷಕ್ಕೆ ಚೈತನ್ಯ ತುಂಬಲು, ಪಕ್ಷ ಸಂಘಟನೆಯನ್ನು ಬಲಪಡಿಸಲು ಮತ್ತು ಶಾಸಕರ ವಿಶ್ವಾಸ ಗಳಿಸುವ ನಿಟ್ಟಿನಲ್ಲಿ ಜೆಡಿಎಸ್ ಅಧಿನಾಯಕರು ಇದೇ 15ನೇ ತಾರೀಕಿನಿಂದ ವಿದೇಶ ಪ್ರವಾಸಕ್ಕೆ ಹೊರಟಿದ್ದಾರೆ.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications