Suraj Revanna: ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ; ಪರಪ್ಪನ ಅಗ್ರಹಾರಕ್ಕೆ ಶಿಫ್ಟ್
ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಸೆನ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿತ್ತು. ಇಂದು ಭಾನುವಾರ ಆಗಿರುವ ಕಾರಣ ಪೊಲಿಸರು ಸೂರಜ್ ರೇವಣ್ಣ ಅವರನ್ನು 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶ ಶಿವಕುಮಾರ್ ಅವರ ಮುಂದೆ ಹಾಜರುಪಡಿಸಿದ್ದರು. ವಾದ ಆಲಿಸಿದ ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಕೊಟ್ಟಿದ್ದಾರೆ.
ಸೂರಜ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿರುವುದರಿಂದ ಅವರನ್ನು ಹಾಸನದಿಂದ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿತ್ತು. ವೈದ್ಯಕೀಯ ಪರೀಕ್ಷೆ ಮಾಡಿಸಿದ ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.

ತಾವೇ ಪೊಲೀಸ್ ಠಾಣೆಗೆ ಹೋಗಿದ್ದ ಸೂರಜ್
ತಮ್ಮ ವಿರುದ್ಧ ದಾಖಲಾಗಿದ್ದ ದೂರಿನ ಬಗ್ಗೆ ಹಾಸನದ ಸೆನ್ ಠಾಣೆಯಲ್ಲಿ ವಿಚಾರಣೆಗಾಗಿ ಸೂರಜ್ ರೇವಣ್ಣ ಹೋಗಿದ್ದರು. ಶನಿವಾರ ರಾತ್ರಿ ಸೂರಜ್ ರೇವಣ್ಣರನ್ನು ಪೊಲೀಸರು ವಿಚಾರಣೆ ಮಾಡಿದ್ದರು.
ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಜೆಡಿಎಸ್ ಕಾರ್ಯಕರ್ತ ಸೂರಜ್ ಮೇಲೆ ದೂರು ಕೊಟ್ಟಿದ್ದರು.
ಪ್ರತಿದೂರು ಕೊಟ್ಟವ ನಾಪತ್ತೆ
ಸೂರಜ್ ಪರ, ಸಂತ್ರಸ್ಥನ ವಿರುದ್ದ ದೂರು ನೀಡಿದ್ದ ಸೂರಜ್ ಆಪ್ತ ಶಿವಕುಮಾರ್ ಸೂರಜ್ ತಂಡದ ಸಂಪರ್ಕಕ್ಕೆ ಸಿಗದೆ ಎಸ್ಕೇಪ್ ಆಗಿರುವುದು ಅನುಮಾನಕ್ಕೆ ಕಾರಣವಾಗಿದೆ. ಸೂರಜ್ ರೇವಣ್ಣ ವಿರುದ್ಧ ದೂರು ನೀಡಿದ್ದ ಸಂತ್ರಸ್ತನ ವಿರುದ್ಧ ಶಿವಕುಮಾರ್ ದೂರು ಕೊಟ್ಟಿದ್ದರು.
5 ಕೋಟಿ ರೂಪಾಯಿ ನೀಡುವಂತೆ ಸಂತ್ರಸ್ತ ಸೂರಜ್ ರೇವಣ್ಣ ಅವರಿಗೆ ಬೆದರಿಕೆ ಹಾಕಿದ್ದ, ಅವರು ಹಣ ಕೊಡದ ಕಾರಣ ಮರ್ಯಾದೆ ತೆಗೆಯಲು ಈ ರೀತಿ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಶಿವಕುಮಾರ್ ಸಂತ್ರಸ್ತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ಕೊಟ್ಟಿದ್ದರು.
ಆದರೆ ದೂರ ನೀಡಿದ ಬಳಿಕ ಅವರು ಹೊಳೆನರಸೀಪುರ ಠಾಣೆಯಿಂದ ಓಡಿ ಹೋಗಿದ್ದಾರೆ. ಅಲ್ಲದೆ ಬೆಂಬಲಿಗರ ಸಂಪರ್ಕಕ್ಕೂ ಕೂಡ ಅವರು ಸಿಗುತ್ತಿಲ್ಲ ಎನ್ನಲಾಗಿದೆ. ಜೊತೆಯಲ್ಲೇ ಇದ್ದು ಸೂರಜ್ ರೇವಣ್ಣರಿಗೆ ಶಿವಕುಮಾರ್ ಹಳ್ಳ ತೋಡಿದ್ರಾ ಎನ್ನುವ ಅನುಮಾನ ವ್ಯಕ್ತವಾಗಿದೆ. ಅಲ್ಲದೆ ಶಿವಕುಮಾರ್ ಬಿಜೆಪಿ ನಾಯಕರ ಜೊತೆಗಿರುವ ವಿಡಿಯೋ ವೈರಲ್ ಆಗುತ್ತಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು












Click it and Unblock the Notifications