ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗೆಲುವಿಗೆ ಪ್ರಶಾಂತ್ ಕಿಶೋರ್ ಮೊರೆ ಹೋದ ಜೆಡಿಎಸ್

|
Google Oneindia Kannada News

ಬೆಂಗಳೂರು, ಫೆಬ್ರವರಿ 25: ಸತತ ಸೋಲುಗಳಿಂದ ಹೀನಾಯ ಸ್ಥಿತಿಯಲ್ಲಿರೋ ಜೆಡಿಎಸ್ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಹೊಸ ಅಸ್ತ್ರದೊಂದಿಗೆ ಹೆಜ್ಜೆ ಇಡಲು ಭರ್ಜರಿ ಪ್ಲಾನ್ ಮಾಡಿದೆ.

2023 ರ ಚುನಾವಣೆಯಲ್ಲಿ ಜೆಡಿಎಸ್ ಪೂರ್ಣ ಬಹುಮತದೊಂದಿಗೆ ಅಧಿಕಾರದ ಗದ್ದುಗೆ ಹಿಡಿಯಲು ಚುನಾವಣಾ ಚಾಣಕ್ಯ ಎಂದೇ ಖ್ಯಾತಿಯಾಗಿರುವ ಪ್ರಶಾಂತ್ ಕಿಶೋರ್ ಅವರ ಮೊರೆ ಹೋಗಿದೆ.

ಇದೇನು ರಾವಣ ರಾಜ್ಯನಾ? RSS ಪಥಸಂಚಲನಕ್ಕೆ ಎಚ್ಡಿಕೆ ಫುಲ್ ಗರಂ ಇದೇನು ರಾವಣ ರಾಜ್ಯನಾ? RSS ಪಥಸಂಚಲನಕ್ಕೆ ಎಚ್ಡಿಕೆ ಫುಲ್ ಗರಂ

2014 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಗೆಲುವು, 2019 ರಲ್ಲಿ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಗೆಲುವು ಸೇರಿದಂತೆ ಹಲವು ಚುನಾವಣೆಗಳಲ್ಲಿ ಪ್ರಶಾಂತ್ ಕಿಶೋರ್ ತಂತ್ರಗಾರಿಕೆ ಭರ್ಜರಿ ಯಶಸ್ಸು ಕಂಡಿತ್ತು.

JDS Party Already Preparing For The 2023 Election

ಈ ಯಶಸ್ಸಿನಿಂದ ಆಕರ್ಷಿತರಾಗಿರೋ ಮಾಜಿ ಸಿಎಂ ಕುಮಾರಸ್ವಾಮಿ ಖುದ್ದು ಪ್ರಶಾಂತ್ ಕಿಶೋರ್ ಜೊತೆ 2023 ರ ಚುನಾವಣೆ ಬಗ್ಗೆ ಮಾತುಕತೆ ನಡೆಸಿದ್ದಾರೆ. ಈಗಾಗಲೇ ಒಂದು ಸುತ್ತಿನ ಮಾತುಕತೆಯಾಗಿದ್ದು, ಎಲ್ಲವೂ ಅಂದುಕೊಂಡಂತೆ ನಡೆದರೆ 2023 ರ ಚುನಾವಣೆಯಲ್ಲಿ ಜೆಡಿಎಸ್ ಗೆ ಪ್ರಶಾಂತ್ ಕಿಶೋರ್ ಚುನಾವಣೆ ರಣತಂತ್ರ ಕೈಜೋಡಿಸಲಿದೆ.

ನಿಖಿಲ್ ಲಗ್ನ ಪತ್ರಿಕೆಯಲ್ಲಿ ಎಚ್ಡಿಕೆ ಭಾವುಕ ಸಂದೇಶವೇನಿದೆ?ನಿಖಿಲ್ ಲಗ್ನ ಪತ್ರಿಕೆಯಲ್ಲಿ ಎಚ್ಡಿಕೆ ಭಾವುಕ ಸಂದೇಶವೇನಿದೆ?

ಪ್ರಶಾಂತ್ ಕಿಶೋರ್ ಜೊತೆ ಮಾತುಕತೆ ನಡೆಸಿರುವ ಬಗ್ಗೆ ಸ್ವತಃ ಮಾಜಿ ಸಿಎಂ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತಾನಾಡಿದ ಅವರು, ಪ್ರಶಾಂತ್ ಕಿಶೋರ್ ಜೊತೆ ಪ್ರಾಥಮಿಕ ಹಂತದ ಮಾತುಕತೆ ನಡೆದಿದೆ. ಚುನಾವಣೆಗೆ ತುಂಬ ಸಮಯ ಇದೆ. ಮತ್ತೊಂದು ಬಾರಿ ಚರ್ಚೆ ಮಾಡಿ 2023ರ ಚುನಾವಣೆಗೆ ಬಳಸಿಕೊಳ್ಳುವ ಬಗ್ಗೆ ನಿರ್ಧಾರ ಮಾಡೋದಾಗಿ ತಿಳಿಸಿದ್ದಾರೆ.

English summary
JDS Party Step up with a new weapon to win the upcoming assembly elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X