ಜೆಡಿಎಸ್ ವಕ್ತಾರ ರಮೇಶ್ ಬಾಬು ಟ್ವಿಟ್ಟರ್ ಸ್ವರೂಪ ಬದಲು ಸ್ಪಷ್ಟನೆ
ಬೆಂಗಳೂರು, ನವೆಂಬರ್15: ಜೆಡಿಎಸ್ ಮುಖಂಡ, ಮಾಜಿ ಪ್ರಧಾನಿ ಎಚ್. ಡಿ ದೇವೇಗೌಡರ ಅನುಯಾಯಿ, ಮಾಜಿ ಎಂಎಲ್ಸಿ, ವಕೀಲ ರಮೇಶ್ ಬಾಬು ಅವರು ಸಾಮಾಜಿಕ ಜಾಲ ತಾಣ ಟ್ವಿಟ್ಟರ್ ನಲ್ಲಿ ದೇವೇಗೌಡರ ವಿರುದ್ಧ ''ಸಾಂಕೇತಿಕ"ವಾಗಿ ಪ್ರತಿಭಟನೆ ನಡೆಸಿದ್ದಾರೆ.
ಜಾತ್ಯಾತೀತ ಜನತಾ ದಳ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಷ್ಟ್ರೀಯ ವಕ್ತಾರರೂ ಆಗಿರುವ ರಮೇಶ್ ಬಾಬು ಅವರು ಪಕ್ಷದ ವರಿಷ್ಠ ದೇವೇಗೌಡರ ವಿರುದ್ಧವೇ ಪ್ರತಿಭಟನೆ ಹೇಗೆ ಸಾಧ್ಯ? ಎಂದು ಹಲವಾರು ಮಂದಿ ಹುಬ್ಬೇರಿಸಿದ್ದಾರೆ.
ಕೆಲವರು ಊಹಾಪೋಹಾ ಸುದ್ದಿ ಹಬ್ಬಿಸಲು ಯತ್ನಿಸುತ್ತಿದ್ದಾರೆ ಇದಕ್ಕೆಲ್ಲ ಫುಲ್ ಸ್ಟಾಪ್ ಹಾಕಲು ರಮೇಶ್ ಬಾಬು ಅವರಿಗೆ ಒನ್ಇಂಡಿಯಾ ಕನ್ನಡ ಪ್ರತಿನಿಧಿ ಕರೆ ಮಾಡಿದಾಗ ಅವರು ಕೊಟ್ಟ ಸ್ಪಷ್ಟನೆ ಹೀಗಿತ್ತು:
"ವಿಧಾನ ಪರಿಷತ್ ಪದವೀಧರ ಹಾಗೂ ಶಿಕ್ಷಕರ ಕೇತ್ರಗಳಿಗೆ ನಡೆಯುವ ಚುನಾವಣೆಗೆ ಇನ್ನೂ ಸಮಯವಿದೆ. ಈಗ ಪ್ರಕಟವಾಗಿರುವುದನ್ನು ತಾತ್ಕಾಲಿಕ ಪಟ್ಟಿ ಎನ್ನಬಹುದು. ಬಿ ಫಾರಂ ಮೇ ತಿಂಗಳಲ್ಲಿ ನೀಡಬಹುದು ಜೂನ್ ನಲ್ಲಿ ಅಂತಿಮ ಪಟ್ಟಿ ನಿರೀಕ್ಷಿಸಬಹುದು. ಟ್ವಿಟ್ಟರ್ ನಲ್ಲಿ ಬದಲಾವಣೆ ಬಗ್ಗೆ ಹೆಚ್ಚಿನ ಅರ್ಥ ಕಲ್ಪಿಸುವುದು ಬೇಡ. ಇದೊಂದು ಸಾಂಕೇತಿಕ ಪ್ರತಿಭಟನೆ ಎಂದು ತಿಳಿದುಕೊಳ್ಳಬಹುದು. ನೋಡೋಣ ಇನ್ನೂ ಅವಕಾಶವಿದೆ'' ಎಂದರು.

ವಿಧಾನ ಪರಿಷತ್ ಪದವೀಧರ ಹಾಗೂ ಶಿಕ್ಷಕರ ಕೇತ್ರಗಳಿಗೆ ನಡೆಯುವ ಚುನಾವಣೆಗೆ ಜೆಡಿಎಸ್ ವತಿಯಿಂದ ಟಿಕೆಟ್ ಪ್ರಕಟಿಸಲಾಗಿದೆ. ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಆರ್. ಚೌಡರೆಡ್ಡಿ ತೂಪಲ್ಲಿ, ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಎ.ಪಿ. ರಂಗನಾಥ್, ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ಶಿವಶಂಕರ್ ಕಲ್ಲೂರ ಹಾಗೂ ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ತಿಮ್ಮಯ್ಯ ಪುರ್ಲೆ ಟಿಕೆಟ್ ಪಡೆದಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications