ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್ ಇಂದು ರಾಜೀನಾಮೆ?
Recommended Video
ಬೆಂಗಳೂರು, ಜೂನ್ 4: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್ ಇಂದು ಪ್ರೆಸ್ಕ್ಲಬ್ನಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದು ರಾಜೀನಾಮೆ ಕುರಿತು ಘೋಷಿಸುವ ಸಾಧ್ಯತೆ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಲೋಕಸಭೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಘೋಷಣೆ ಬಳಿಕ ಜೆಡಿಎಸ್ ಮುಖಂಡನ ನಡೆಯ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್ ಅವರು ಮಂಗಳವಾರ ರಾಜೀನಾಮೆ ನೀಡುವ ಎಲ್ಲಾ ಸಾಧ್ಯತೆಗಳಿವೆ ಎನ್ನುವ ಮಾತುಗಳು ಕೇಳಿಬಂದಿವೆ.
ಕುಮಾರಸ್ವಾಮಿ-ವಿಶ್ವನಾಥ್ ಭೇಟಿ: ರಾಜೀನಾಮೆ ಕುರಿತು ಚರ್ಚೆ?
ಮಂಗಳವಾರ ಸಂಜೆ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಶಾಸಕರ ಸಭೆ ಕರೆಯಲಾಗಿದೆ.ಅದಕ್ಕೂ ಮುನ್ನವೇ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ.
ಬೆಳಗ್ಗೆ 11 ಗಂಟೆಗೆ ತಮ್ಮ ಪಕ್ಷದ ಕಚೇರಿಯ ಬದಲು ಬೆಂಗಳೂರು ಪ್ರೆಸ್ಕ್ಲಬ್ನಲ್ಲಿ ಪತ್ರಿಕಾಗೋಷ್ಠಿ ನಡೆಸುತ್ತಿದ್ದು, ತಮ್ಮ ಮುಂದಿನ ನಿಲುವಿನ ಕುರಿತು ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ತಿಳಿದುಬಂದಿದೆ.
ನಿಖಿಲ್ ಕುಮಾರಸ್ವಾಮಿ ಭೇಟಿಯಾದ ಎಚ್.ವಿಶ್ವನಾಥ್
ಪತ್ರಿಕಾಗೋಷ್ಠಿಯಲ್ಲೇ ಎಲ್ಲವನ್ನೂ ಬಹಿರಂಗಪಡಿಸುತ್ತೇನೆ ಎಂದಷ್ಟೇ ತಮ್ಮನ್ನು ಸಂಪರ್ಕಿಸಿದವರಿಗೆ ಹೇಳಿದ್ದಾರೆ, ಆರೋಗ್ಯ ಸಮಸ್ಯೆ ಕಾರಣ ಪಕ್ಷವನ್ನು ಸಂಘಟಿಸಲು ಅಸಾಧ್ಯವೆಂದು ಈ ಹಿಂದೆಯೂ ರಾಜೀನಾಮೆ ನೀಡಲು ಮುಂದಾಗಿದ್ದರು.