ಜೂ.22ರಂದು ಜೆಡಿಎಸ್ ಜನತಾ ಸೇವಕ ಕಾರ್ಯಕ್ರಮ ಆರಂಭ

ಬೆಂಗಳೂರು, ಜೂನ್ 9: ಜನತಾ ಜಲಧಾರೆ ಕಾರ್ಯಕ್ರಮ ಅಭೂತಪೂರ್ವ ಯಶಸ್ಸು ಕಂಡ ನಂತರ ಜೆಡಿಎಸ್‍, ಇದೀಗ ರಾಜಧಾನಿ ಬೆಂಗಳೂರಿನಲ್ಲಿ 'ಜನತಾ ಸೇವಕ' ಎಂಬ ವಿನೂತನ ಕಾರ್ಯಕ್ರಮ ಮಾಡಲು ನಿರ್ಧರಿಸಿದೆ.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, "ಜನತಾ ಸೇವಕ ವಾಹನ" ಹೆಸರಿನಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಬೆಂಗಳೂರಿನಲ್ಲಿ15 ವಾಹನಗಳು ಸಂಚಾರ ಮಾಡುತ್ತವೆ. ಒಂದು ತಿಂಗಳು ವಾಹನ ಸಂಚಾರ ಮಾಡಿ ಜನರ ಸಮಸ್ಯೆ ಬಗ್ಗೆ ಜನಾಭಿಪ್ರಾಯ ಮೂಡಿಸುತ್ತೇವೆ ಎಂದು ತಿಳಿಸಿದರು.

ಜೂ.22ರಂದು ಜನತಾ ಸೇವಕ ಕಾರ್ಯಕ್ರಮಕ್ಕೆ ಚಾಲನೆ: ಬೆಂಗಳೂರು ನಗದಲ್ಲಿರುವ ಸಮಸ್ಯೆಗಳ ಬಗ್ಗೆ ಅರಿಯಲು ಹಾಗೂ ಜನಾಭಿಪ್ರಾಯ ಮೂಡಿಸಲು ಜನತಾ ಸೇವಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಸವನಗುಡಿ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಜೂನ್ 22ರಂದು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು ಎಂದು ಹೆಚ್ ಡಿಕೆ ಮಾಹಿತಿ ನೀಡಿದರು. ಜನತಾ ಸೇವಕ ಎಂಬ ವಾಹನದ ಮೂಲಕ ಬೆಂಗಳೂರು ಪ್ರವಾಸ ಮಾಡಲಾಗುತ್ತದೆ. 15 ವಾಹನಗಳು ನಗರದ ಗಲ್ಲಿ, ಗಲ್ಲಿಗೂ ಹೋಗುತ್ತವೆ. ಜನರಿಗೆ ನಾವೇನು ಕೊಡುತ್ತಿದ್ದೇವೆ. ರಾಷ್ಟ್ರೀಯ ಪಕ್ಷಗಳು ಲೂಟಿ ಮಾಡುತ್ತಿರುವ ಬಗ್ಗೆ ತಿಳಿಸಲಾಗುವುದು ಎಂದರು.

JDS will launch JDS Janatha sevaka vahana public awareness programme

ಬೆಂಗಳೂರಿನಲ್ಲಿ ಮುಂದಿನ ಚುನಾವಣೆಯಲ್ಲಿ 12-13 ಸ್ಥಾನ ಗೆಲ್ಲಲು ಚಾಲೆಂಜ್ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ 123 ಗುರಿ ಹೇಗೆ‌ ಮುಟ್ಟುತ್ತೇನೆಂಬುದು ನಿಮಗೆ ಗೊತ್ತಾಗುತ್ತದೆ ಎಂದು ಮಾಧ್ಯಮದವರಿಗೆ ಹೇಳಿದರು.

ಜೆಡಿಎಸ್‍ ಮುಗಿಸಲು ಸಾಧ್ಯವಿಲ್ಲ: ಯಾರ ಕೈಯಲ್ಲೂ ಜೆಡಿಎಸ್‍ ಅನ್ನು ಮುಗಿಸಲು ಸಾಧ್ಯವಿಲ್ಲ. ಲಕ್ಷಾಂತರ ಕಾರ್ಯಕರ್ತರು ಇದ್ದಾರೆ. ವಿಧಾನ ಪರಿಷತ್ ನದು ಏನಾಯಿತು. ಎಲ್ಲಿ ಸಿದ್ದರಾಮಯ್ಯ ನವರದ್ದು ವರ್ಕ್ ಆಯ್ತು?. 2023 ಕ್ಕೆ ಕಾಂಗ್ರೆಸ್‌ನ ಕೊನೆ ದಿನಗಳು ಬರುತ್ತವೆ. ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಕೊನೆಯ ದಿನಗಳು ಪ್ರಾರಂಭವಾಗುತ್ತದೆ ಎಂದು ಸಿದ್ದರಾಮಯ್ಯ ವಿರುದ್ಧ ಹೆಚ್ ಡಿಕೆ ವಾಗ್ದಾಳಿ ನಡೆಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+