ಜೆಡಿಎಸ್ ಜತೆ ಮೈತ್ರಿಗೆ ಸಿದ್ಧ ಎಂದ ಜೆಡಿಯು ನಾಯಕ ಶರದ್ ಯಾದವ್
ಬೆಂಗಳೂರು, ಮಾರ್ಚ್ 30: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ನಿಟ್ಟಿನಲ್ಲಿ ಜೆಡಿಎಸ್ ಪಕ್ಷದೊಂದಿಗೆ ಜೆಡಿಯು ಮೈತ್ರಿ ಮಾಡಿಕೊಳ್ಳಲಿದೆ ಎಂದು ಜೆಡಿಯು ರಾಷ್ಟ್ರೀಯ ನಾಯಕ ಶರದ್ ಯಾದವ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಅವರು, ಎಷ್ಟು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತೇವೆ ಒಂದು ದಿನದೊಳಗೆ ನಿರ್ಧರಿಸಿ ತೀರ್ಮಾನ ತಿಳಿಸಲಿದ್ದೇವೆ. ಜೆಡಿಯು ಬಾಣದ ಚಿಹ್ನೆ ಕುರಿತಂತೆ ಕೋರ್ಟ್ನಲ್ಲಿ ತಕರಾರು ಇದೆ. ಸೋಮವಾರ ಈ ವಿಚಾರ ಇತ್ಯರ್ಥವಾಗಲಿದ್ದು, ಹೊಸ ಚಿಹ್ನೆಯೊಂದಿಗೆ ರಾಜ್ಯದ ವಿಧಾನಸಭೆ ಚುನಾವಣೆಗೆ ಹೊಸ ಜೆಡಿಯು ಬಣಕ್ಕೆ ಇಲ್ಲಿಂದಲೇ ಚಾಲನೆ ನೀಡಲಿದ್ದೇವೆ ಎಂದು ಸ್ಪಷ್ಟಪಡಿಸಿದರು
ಎಷ್ಟು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತೇವೆ ಎಂಬೆಲ್ಲ ವಿಚಾರವನ್ನು 24 ಗಂಟೆಯೊಳಗೆ ನಿರ್ಧರಿಸಿ ತೀರ್ಮಾನ ಕೈಗೊಳ್ಳಲಿದ್ದೇವೆ. ಸೋಮವಾರ ಅಧಿಕೃತವಾಗಿ ಹೊಸ ಬಣದೊಂದಿಗೆ ಸ್ಪರ್ಧೆ ವಿಚಾರವನ್ನು ತಿಳಿಸಲಿದ್ದೇವೆ ಎಂದು ವಿವರಿಸಿದರು.

ಕರ್ನಾಟಕದಲ್ಲಿ ಕೋಮುವಾದಿ ಶಕ್ತಿಯಾದ ಬಿಜೆಪಿಯನ್ನು ಕಿತ್ತೊಗೆಯುವುದು ಬಹಳ ಮುಖ್ಯವಾಗಿದೆ. ಆ ಕಾರಣಕ್ಕಾಗಿ ನಾವು ಜೆಡಿಎಸ್ ಅಥವಾ ಕಾಂಗ್ರೆಸ್ ಸೇರಿದಂತೆ ಯಾವುದೇ ಪಕ್ಷದೊಂದಿಗೆ ಕೈ ಜೋಡಿಸಲು ಸಿದ್ಧ. ಕಾಂಗ್ರೆಸ್ನಲ್ಲಿ ಅವಕಾಶಗಳು ಮುಗಿದುಹೋಗಿವೆ. ಹಾಗಾಗಿ ಜೆಡಿಎಸ್ ನೊಂದಿಗೆ ಮೈತ್ರಿ ಸಾಧಿಸಲು ಇಚ್ಚಿಸಿದ್ದೇವೆ. ಈ ನಿಟ್ಟಿನಲ್ಲಿ ಮಾತುಕತೆ ನಡೆಸಿ 24 ಗಂಟೆಯೊಳಗೆ ನಿರ್ಧಾರಕ್ಕೆ ಬರಲಿದ್ದೇವೆ ಎಂಬ ಮಾಹಿತಿ ನೀಡಿದರು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕಾರ್ಯಕರ್ತರ ಸಭೆ ನಡೆಸಿ ಎಲ್ಲ ತೀರ್ಮಾನ ಕೈಗೊಳ್ಳಲಿದ್ದೇವೆ. ಬಿಜೆಪಿಯನ್ನು ಕರ್ನಾಟಕದಲ್ಲಿ ಸೋಲಿಸಲೇಬೇಕು. 2019ರ ಫೈನಲ್ ಚುನಾವಣೆಗೆ ರಾಜ್ಯದ ವಿಧಾನಸಭಾ ಚುನಾವಣೆ ಸೆಮಿಫೈನಲ್ ಎನಿಸಿದೆ. ಈ ನಿಟ್ಟಿನಲ್ಲಿ ಬಿಜೆಪಿ ವಿರುದ್ಧ ಜನಾದೇಶ ನೀಡಬೇಕಾಗಿದೆ ಎಂದು ಹೇಳಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications