JEE advanced Results 2024: ಜೆಇಇ ಅಡ್ವಾನ್ಸ್ಡ್ ಫಲಿತಾಂಶದಲ್ಲಿ ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳ ಅದ್ಭುತ ಸಾಧನೆ
JEE advanced Results 2024: ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯ ಫಲಿತಾಂಶ ಭಾನುವಾರ (ಜೂನ್ 10) ಪ್ರಕಟವಾಗಿದ್ದು, ಭಾರತದ ಟಾಪ್ 20ರ ರ್ಯಾಂಕ್ ಪಟ್ಟಿಯಲ್ಲಿ ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳು ಸ್ಥಾನವನ್ನು ಪಡೆದುಕೊಂಡಿದ್ದಾರೆ. ಹಾಗಾದರೆ ಇವರ ಹಿನ್ನೆಲೆ ಏನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಶಾನ್ ಥಾಮಸ್ ಕೋಶಿ ಎಂಬ ವಿದ್ಯಾರ್ಥಿ 360ಕ್ಕೆ 325 ಅಂಕಗಳನ್ನು ಗಳಿಸಿದ್ದು, ಅಮೋಘ್ ಅಗರ್ವಾಲ್ 360ಕ್ಕೆ 322 ಅಂಕಗಳನ್ನು ಗಳಿಸುವ (ಜೆಇಇ ಮೇನ್ಸ್ನಲ್ಲಿ ಶೇಕಡಾ 100ರಷ್ಟು ಅಂಕ) ಮೂಲಕ ಭಾರತದ ಟಾಪ್ 20ರ ರ್ಯಾಂಕ್ ಪಟ್ಟಿಯಲ್ಲಿದ್ದಾರೆ.

ಪ್ರೋಗ್ರಾಮಿಂಗ್ ಬಗ್ಗೆ ಒಲವು ಹೊಂದಿರುವ ಶಾನ್ ಥಾಮಸ್ ಕೋಶಿ ಅವರು ತನ್ನ ಬಿಡುವಿನ ವೇಳೆಯಲ್ಲಿ ಉಪಯುಕ್ತ ಅಪ್ಲಿಕೇಶನ್ಗಳನ್ನು ಕ್ರಿಯೆಟ್ ಮಾಡುತ್ತಿರುತ್ತಿರುತ್ತಾರೆ. ಇನ್ನು ಶಾನ್ ಅವರ ತಾಯಿ, ಇನ್ಫೋಸಿಸ್ ಉದ್ಯೋಗಿ ರೋಸ್ ಮೇರಿ ಜಾನ್ ಈ ಬಗ್ಗೆ ಪ್ರತಿಕ್ರಯಿಸಿದ್ದು, "ಮಗ ಶಾನ್ ಪ್ರೋಗ್ರಾಮಿಂಗ್ ಅನ್ನು ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದಾರೆ. ಅಲ್ಲದೆ, ಇತ್ತೀಚೆಗಷ್ಟೇ ಎಲ್ಲಾ ಫೋಟೋಗಳನ್ನು PDF ಫಾರ್ಮ್ಯಾಟ್ಗೆ ಸ್ವಯಂಚಾಲಿತವಾಗಿ ಏಕೀಕರಿಸುವ ಅಪ್ಲಿಕೇಶನ್ ಅನ್ನು ಕ್ರಿಯೇಟ್ ಮಾಡಿದ್ದಾರೆ," ಎಂದು ಹೇಳಿದರು.
" ಅಲ್ಲದೆ, ಹಣಕಾಸು ಅಪ್ಲಿಕೇಶನ್ ಅನ್ನು ಸಹ ಕ್ರಿಯೇಟ್ ಮಾಡಿದ್ದು, ಈ ಮೂಲಕವೇ ತಮ್ಮ ಖರ್ಚುವೆಚ್ಚಗಳನ್ನು ನೋಡಿಕೊಳ್ಳುತ್ತಿದ್ದರು," ಎಂದು ಶಾನ್ ತಾಯಿ ಹೇಳಿದ್ದಾರೆ. ಇನ್ನು ಶಾನ್ GEAR ಇಂಟರ್ನ್ಯಾಶನಲ್ ಸ್ಕೂಲ್ನ ವಿದ್ಯಾರ್ಥಿಯಾಗಿದ್ದಾರೆ. ಅವರ ತಂದೆ ನಿಶಿಲ್ ಕೋಶಿ IIT ಖರಗ್ಪುರದ ಹಳೆಯ ವಿದ್ಯಾರ್ಥಿಯಾಗಿದ್ದು, ಅವರು 1993ರಲ್ಲಿ AIR 257 ಅನ್ನು ಗಳಿಸಿದ್ದರು. ಇದೀಗ ಸ್ಟಾರ್ಟ್ಅಪ್ ಹೊಂದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ತನ್ನ ತಂದೆಯ ಶ್ರಮದಿಂದ ಸ್ಫೂರ್ತಿ ಪಡೆದ ಬೆಂಗಳೂರಿನ ವಿದ್ಯಾರ್ಥಿ ಶಾನ್ ಅವರು ಐಐಟಿ-ಬಾಂಬೆಯನ್ನು ಆಯ್ಕೆ ಮಾಡಿಕೊಳ್ಳಲು ಮತ್ತು ಎಲೆಕ್ಟ್ರಾನಿಕ್ಸ್ ಅನ್ನು ಮುಂದುವರಿಸಲು ನಿರ್ಧರಿಸಿದ್ದಾರೆ. ಈ ಮೂಲಕ ರೊಬೊಟಿಕ್ಸ್ ಕ್ಷೇತ್ರದಲ್ಲಿ ಕೆಲಸ ಮಾಡಲು ಮುಂದಾಗಿದ್ದಾರೆ.
ಟಾಪ್ 20ರಲ್ಲಿ ಸ್ಥಾನ ಪಡೆದ ಬೆಂಗಳೂರಿನ ಮತ್ತೊಬ್ಬ ವಿದ್ಯಾರ್ಥಿ ಅಮೋಘ್ ಅಗರ್ವಾಲ್ ಆಗಿದ್ದಾರೆ. ಸಾಫ್ಟ್ವೇರ್ ಕಂಪನಿಯೊಂದರ ಸಹ ಸಂಸ್ಥಾಪಕ ಸಲೀಲ್ ಅಗರ್ವಾಲ್ ಮತ್ತು ಗೃಹಿಣಿ ಆವಂತಿಕಾ ಅವರ ಪುತ್ರ ಅಮೋಘ್ ಪ್ರತಿಕ್ರಿಯಿಸಿದ್ದು, "ಎರಡು ವರ್ಷಗಳ ನನ್ನ ಕಠಿಣ ಪರಿಶ್ರಮಕ್ಕೆ ಕೊನೆಗೂ ಫಲ ಸಿಕ್ಕಿದೆ. ನಾನು ಅತ್ಯುತ್ತಮ IITಗಳಲ್ಲಿ ಒಂದಕ್ಕೆ ಅರ್ಜಿ ಸಲ್ಲಿಸುತ್ತೇನೆ," ಎಂದು ಹೇಳಿದ್ದಾರೆ.
ಕಾವೇರಿ ಭವನದ ನಾರಾಯಣ ಸಿಒ ಶಾಲೆಯ ವಿದ್ಯಾರ್ಥಿ ಅಮೋಘ್ "ತಮ್ಮ ಶಿಕ್ಷಕರ ಮಾರ್ಗದರ್ಶನಗಳನ್ನು ಅನುಸರಿದ್ದಕ್ಕೆ ಈ ಸಾಧನೆ ಮಾಡಲು ಸಾಧ್ಯವಾಯಿತು. ತನಗೆ ಬೆಂಬಲ ಬೇಕಾದಾಗ ಅವರನ್ನು ಸಂಪರ್ಕಿಸುತ್ತೇನೆ," ಎಂದರು. ಇನ್ನು "ನಾನು ನನ್ನ ಸಾಮರ್ಥ್ಯಕ್ಕೆ ತಕ್ಕಂತೆ ಅಧ್ಯಯನ ಮಾಡಿದ್ದೇನೆ ಮತ್ತು ನನ್ನ ಹಾಕಿಕೊಂಡ ವೇಳಾಪಟ್ಟಿಯನ್ನು ಸರಿಯಾಗಿ ಪಾಲಿಸಿದ್ದಕ್ಕೆ ಈ ಸಾಧನೆ ಮಾಡಲು ಸಾಧ್ಯವಾಯಿತು. ನಾನು ಕೆಲವೊಮ್ಮೆ ನನ್ನ ಮನಸ್ಸನ್ನು ರಿಫ್ರೆಶ್ ಮಾಡಿಕೊಳ್ಳಲು ಕ್ರೀಡೆಗಳನ್ನು ಆಡುತ್ತಿದ್ದೆ," ಎಂದು ಹೇಳಿದರು.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers












Click it and Unblock the Notifications