ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು: ರಾತ್ರಿ ಕಳ್ಳರ ಕೈಚಳಕ- 12 ಲಕ್ಷ ಕಳ್ಳತನ

By Ashwath
|
Google Oneindia Kannada News

 stolen
ಬೆಂಗಳೂರು, ಜು.6: ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಮನೆಯ ಕಿಟಕಿ ಗಾಜು ಒಡೆದು ಒಳನುಗ್ಗಿದ ಕಳ್ಳರು 12 ಲಕ್ಷ ರೂ. ನಗದು ಮತ್ತು 440 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ತಿಲಕ್‌‌ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಜಯನಗರ 4ನೇ 'ಟಿ' ಬ್ಲಾಕ್‌ ನಿವಾಸಿ ಕೃಷ್ಣಾ ಅಯ್ಯರ್‌‌‌ ಮನೆಯಲ್ಲಿ ಕಳ್ಳತನವಾಗಿದ್ದು ಪೊಲೀಸರಿಗೆ ದೂರು ನೀಡಿದ್ದಾರೆ.

ಕೃಷ್ಣಾ ಅಯ್ಯರ್‌ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಶುಕ್ರವಾರ ಸಂಜೆ ಸಮಾರಂಭವೊಂದರಲ್ಲಿ ಪಾಲ್ಗೊಳ್ಳಲು ಜೆ.ಪಿ.ನಗರದ ಪುಟ್ಟೇನಹಳ್ಳಿಯ ಕಲ್ಯಾಣ ಮಂಟಪಕ್ಕೆ ಹೋಗಿದ್ದರು. ಈ ಸಂದರ್ಭದಲ್ಲಿ ಕಿಟಕಿ ಗಾಜು ಒಡೆದ ಕಳ್ಳರು ಬೀರುವಿನಲ್ಲಿಟ್ಟಿದ್ದ 12 ಲಕ್ಷ ರೂ. ಮತ್ತು 440 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.[ಮೇಲ್ಮನೆ ಚುನಾವಣೆ: ಜೆಡಿಎಸ್‌ನಿಂದ ಕೋಟಿ ಕೋಟಿ ಡೀಲ್‌?]

ಕೃಷ್ಣಾ ಅಯ್ಯರ್‌ ಕಾರ್ಯಕ್ರಮ ಮುಗಿಸಿ ರಾತ್ರಿ ಮನೆಗೆ ಬಂದಾಗ ಕಳ್ಳತನ ನಡೆದಿರುವುದು ಗೊತ್ತಾಗಿದೆ.

English summary
Thieves struck at the residence in Jayanagr ,4th T Block when no one was at home and made away with some jewellery, police said today. House owner Krishna Iyer filed a complaint and Tilaknagar and are searching for the culprits. 440 gold Ornaments and Rs 12 lakh cash stolen.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X