ಜ್ಞಾನಭಾರತಿ ಸಾಮೂಹಿಕ ಅತ್ಯಾಚಾರ ಪ್ರಕರಣ: 7 ಆರೋಪಿಗಳಿಗೆ ಜೀವಾವಧಿ ಶಿಕ್ಷೆ
ಬೆಂಗಳೂರು, ಅಕ್ಟೋಬರ್ 22: ಜ್ಞಾನಭಾರತಿ ಆವರಣದಲ್ಲಿ 2012ರಲ್ಲಿ ನಡೆದಿದ್ದ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಆರೋಪಿಗಳಿಗೆ ಕೋರ್ಟ್ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ.
ಜ್ಞಾನಭಾರತಿ ಆವರಣದಲ್ಲಿ 2012ರಲ್ಲಿ ನಡೆದಿದ್ದ ಕಾನೂನು ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ 7 ದೋಷಿಗಳಿಗೆ ಅಧೀನ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ಕಾಯಂಗೊಳಿಸಿದೆ.
ರಾಷ್ಟ್ರೀಯ ಕಾನೂನು ಶಾಲೆಯಲ್ಲಿ ಕಾನೂನು ಪದವಿ ವ್ಯಾಸಂಗ ಮಾಡುತ್ತಿದ್ದ ನೇಪಾಳ ಮೂಲದ ಯುವತಿ, 2012ರ ಅ.13ರಂದು ಜ್ಞಾನಭಾರತಿ ಆವರಣದಲ್ಲಿ ತನ್ನ ಪ್ರಿಯಕರನ ಜತೆ ಕಾರಿನಲ್ಲಿ ಕುಳಿತು ಮಾತನಾಡುತ್ತಿದ್ದಳು.

ಜೀವಾವಧಿ ಶಿಕ್ಷೆ ರದ್ದುಪಡಿಸಲು ಕೋರಿ ದೊಡ್ಡ ಈರಯ್ಯ ಸೇರಿ 7 ದೋಷಿಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ವಿ.ವೀರಪ್ಪ ಮತ್ತು ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ದ ವಿಭಾಗೀಯ ಪೀಠ ಬುಧವಾರ ವಜಾಗೊಳಿಸಿತು.
ಜ್ಞಾನಭಾರತಿ ಕ್ಯಾಂಪಸ್ನಲ್ಲಿರುವ ಹಳೆ ಪರೀಕ್ಷಾ ಭವನದ ಬಳಿ ರಾತ್ರಿ ಶ್ರೀಗಂಧ ಕಳವಿಗೆ ಬಂದ ಎಂಟು ಆರೋಪಿಗಳು, ಯುವತಿಯ ಗೆಳೆಯ ನಿರ್ಮಲ್ ಮೇಲೆ ಹಲ್ಲೆ ನಡೆಸಿದ್ದರು. ನಂತರ ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿ ಪರಾರಿಯಾಗಿದ್ದರು. ಈ ಸಂಬಂಧ ಜ್ಞಾನಭಾರತಿ ಠಾಣೆಗೆ ಯುವತಿ ದೂರು ನೀಡಿದ್ದಳು.












Click it and Unblock the Notifications