ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಆರ್. ಆರ್. ನಗರ ಉಪ ಚುನಾವಣೆ; ಜೆಡಿಎಸ್ ಅಭ್ಯರ್ಥಿ ಘೋಷಣೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 13: ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಪಕ್ಷ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಸುಪ್ರೀಂಕೋರ್ಟ್ ಮಂಗಳವಾರ ಉಪ ಚುನಾವಣೆ ನಡೆಸಲು ಒಪ್ಪಿಗೆ ನೀಡಿತ್ತು.

ಮಂಗಳವಾರ ಎಚ್. ಡಿ. ಕುಮಾರಸ್ವಾಮಿ ಅವರು, "ಜ್ಞಾನ ಭಾರತಿ ಕೃಷ್ಣಮೂರ್ತಿ ಪಕ್ಷದ ಅಭ್ಯರ್ಥಿಯಾಗಿದ್ದಾರೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತನಿಗೆ ಟಿಕೆಟ್ ಕೊಟ್ಟಿದ್ದೇವೆ. ಎಲ್ಲರೂ ಅವರನ್ನು ಬೆಂಬಲಿಸಬೇಕು" ಎಂದು ಹೇಳಿದರು.

ಆರ್. ಆರ್. ನಗರ ಚುನಾವಣೆ; ಮುನಿರಾಜು ಗೌಡ ಜೊತೆ ಚರ್ಚೆ ಆರ್. ಆರ್. ನಗರ ಚುನಾವಣೆ; ಮುನಿರಾಜು ಗೌಡ ಜೊತೆ ಚರ್ಚೆ

"ಜ್ಞಾನ ಭಾರತಿ ಕೃಷ್ಣಮೂರ್ತಿ ತಂದೆ ನಮ್ಮ ಪಕ್ಷಕ್ಕಾಗಿ ದುಡಿದವರು. ಸ್ವಂತ ದುಡಿಮೆಯಿಂದ ಕೃಷ್ಣಮೂರ್ತಿ ಬೆಳೆದು ಬಂದಿದ್ದಾರೆ. ಹೀಗಾಗಿ ಅವರಿಗೆ ಟಿಕೆಟ್ ಕೊಡುತ್ತಿದ್ದೇವೆ" ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಆರ್. ಆರ್. ನಗರ ಉಪ ಚುನಾವಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ ಆರ್. ಆರ್. ನಗರ ಉಪ ಚುನಾವಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ

Jnana Bharathi Krishnamurthy Rajarajeshwari Nagar By Election Candidate

ಉಪ ಚುನಾವಣೆಗಾಗಿ ಜ್ಞಾನ ಭಾರತಿ ಕೃಷ್ಣಮೂರ್ತಿ ಅಕ್ಟೋಬರ್ 14ರಂದು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರಗಳನ್ನು ಸಲ್ಲಿಸಲು ಅಕ್ಟೋಬರ್ 16 ಕೊನೆಯ ದಿನವಾಗಿದೆ.

ಉಪ ಚುನಾವಣೆಯಲ್ಲಿ ಡಿ. ಕೆ. ರವಿ ಹೆಸರು ಬಳಕೆ; ಕುಸುಮಾ ಸ್ಪಷ್ಟನೆ ಉಪ ಚುನಾವಣೆಯಲ್ಲಿ ಡಿ. ಕೆ. ರವಿ ಹೆಸರು ಬಳಕೆ; ಕುಸುಮಾ ಸ್ಪಷ್ಟನೆ

ಆರ್. ಆರ್. ನಗರಕ್ಕೆ ಜೆಡಿಎಸ್ ಅಭ್ಯರ್ಥಿಗಳಾಗಲು ಮೂವರ ನಡುವೆ ಪೈಪೋಟಿ ಇತ್ತು. ಬೆಂಗಳೂರು ನಗರ ಘಟಕದ ಅಧ್ಯಕ್ಷ ಆರ್. ಪ್ರಕಾಶ್, ಆರ್. ಆರ್. ನಗರ ಕ್ಷೇತ್ರದ ಅಧ್ಯಕ್ಷ ಬೆಟ್ಟಸ್ವಾಮಿ, ಜ್ಞಾನ ಭಾರತಿ ಕೃಷ್ಣಮೂರ್ತಿ ಹೆಸರು ಕೇಳಿ ಬಂದಿತ್ತು.

2018ರ ಚುನಾವಣೆಯಲ್ಲಿ ಆರ್. ಆರ್. ನಗರ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ 60 ಸಾವಿರಕ್ಕೂ ಅಧಿಕ ಮತಗಳನ್ನು ಪಡೆದು 2ನೇ ಸ್ಥಾನಗಳಿಸಿತ್ತು. ಕಾಂಗ್ರೆಸ್‌ನ ಮುನಿರತ್ನ ಅವರು ಗೆಲುವು ಸಾಧಿಸಿದ್ದರು.

ಬಿಜೆಪಿ ಅಭ್ಯರ್ಥಿ ಯಾರು? : ಆರ್. ಆರ್. ನಗರ ಕ್ಷೇತ್ರಕ್ಕೆ ಬಿಜೆಪಿ ಇನ್ನೂ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಮುನಿರತ್ನ ಮತ್ತು ಮುನಿರಾಜು ಗೌಡ ನಡುವೆ ಟಿಕೆಟ್‌ಗಾಗಿ ಪೈಪೋಟಿ ಇದೆ. ಕಾಂಗ್ರೆಸ್‌ನಿಂದ ಕುಸುಮಾ ಹನುಮಂತರಾಯಪ್ಪ ಅಭ್ಯರ್ಥಿಯಾಗಿದ್ದಾರೆ.

"ರಾಜರಾಜೇಶ್ವರಿ ನಗರ ಚುನಾವಣೆನ್ನು ನಮ್ಮ ಪಕ್ಷ ಗಂಭೀರವಾಗಿ ತೆಗೆದುಕೊಂಡಿದೆ. ಆರ್. ಆರ್. ನಗರ ಮೊದಲಿನಿಂದಲೂ ಜೆಡಿಎಸ್ ಪ್ರಭಾವ ಇರುವ ಕ್ಷೇತ್ರ. ಕ್ಷೇತ್ರದಲ್ಲಿ ಗೆಲುವು ಸಾಧಿಸುವುದು ನಮ್ಮ ಗುರಿ" ಎಂದು ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಸುಪ್ರೀಂಕೋರ್ಟ್ ಒಪ್ಪಿಗೆ : ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದೆ. ಉಪ ಚುನಾವಣೆ ನಡೆಸಲು ಅವಕಾಶ ನೀಡಬಾರದು ಎಂದು ಸಲ್ಲಿಕೆಯಾಗಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.

Recommended Video

Chinaದು ಯಾಕೋ ಅತಿ ಆಯ್ತು ಎಂದ Rajnath singh | Oneindia Kannada

ಬಿಜೆಪಿಯ ಮುನಿರಾಜು ಗೌಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಮಂಗಳವಾರ ತೀರ್ಪು ಪ್ರಕಟಿಸಿದೆ. ಇದರಿಂದಾಗಿ ಮಾಜಿ ಶಾಸಕ ಮುನಿರತ್ನಗೆ ನೆಮ್ಮದಿ ಸಿಕ್ಕಿದೆ.

English summary
JD(S) announced candidate for Rajarajeshwari Nagar by election scheduled on November 3, 2020. Jnana Bharathi Krishnamurthy party candidate for by poll.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X