ಮಾರಣಾಂತಿಕ ಹಲ್ಲೆಗೆ ಒಳಗಾದ ಮಹಿಳೆ ಚಿಕಿತ್ಸಾ ವೆಚ್ಚ ಭರಿಸಿದ ಪೊಲೀಸರು!
ಬೆಂಗಳೂರು, ಡಿಸೆಂಬರ್ 19: ಮಾರಣಾಂತಿಕ ಹಲ್ಲೆಗೆ ಒಳಗಾಗಿದ್ದ ಬಡ ಮಹಿಳೆಗೆ ಜೀವ ಉಳಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ವೆಚ್ಚವನ್ನು ಪಾವತಿಸಿ ಜ್ಞಾನ ಭಾರತಿ ಠಾಣೆ ಪೊಲೀಸರುಮಾನವೀಯತೆ ಮೆರೆದಿದ್ದಾರೆ.
ಎರಡು ದಿನಗಳ ಹಿಂದೆ ಜ್ಞಾನ ಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಜ್ಞಾನಗಂಗಾ ನಗರದಲ್ಲಿ ಘೋರ ಅಪರಾಧ ವರದಿಯಾಗಿತ್ತು. ನಿರ್ಮಾಣ ಹಂತದ ಕಟ್ಟಡದಲ್ಲಿ ವಾಸವಿದ್ದ ಹನುಮಂತಮ್ಮ ಎಂಬ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ಅಮ್ಮನ ಮೇಲೆ ಹಲ್ಲೆ ಮಾಡುವುದನ್ನು ತಡೆಯಲು ಹೋದ ಹನ್ನೆರಡು ವರ್ಷದ ಬಾಲಕನ ಮೇಲೆ ಕಿರಾತಕ ಹಲ್ಲೆ ಮಾಡಿದ್ದ. ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಬಾಲಕ ಮೃತಪಟ್ಟಿದ್ದ. ತಲೆಯ ಮೇಲೆ ಕಲ್ಲು ಎತ್ತಿಹಾಕಿದ್ದರಿಂದ ಹನುಮಂತಮ್ಮ ಕೂಡ ಗಂಭೀರವಾಗಿ ಗಾಯಗೊಂಡಿದ್ದರು. ಕೂಲಿ ಮಾಡುತ್ತಿದ್ದ ಆ ಮಹಿಳೆಗೆ ಚಿಕಿತ್ಸೆ ಪಡೆಯುವ ಶಕ್ತಿ ಇರಲಿಲ್ಲ.

ಹನ್ನೆರಡು ವರ್ಷದ ಮಗನನ್ನು ಕಳೆದಕೊಂಡು ಜೀವನ್ಮರಣ ಹೋರಾಟ ನಡೆಸುತ್ತಿದ್ದ ಆ ಮಹಿಳೆಯನ್ನು ಪೊಲೀಸರೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪೊಲೀಸ್ ಇನ್ಸ್ಪೆಕ್ಟರ್ ಲಕ್ಷ್ಮಣ ನಾಯಕ್ ಒಂದು ಲಕ್ಷ ರೂಪಾಯಿ ಚಿಕಿತ್ಸಾ ವೆಚ್ಚ ಪಾವತಿಸಿ ಮಾನವೀಯತೆ ಮೆರೆದಿದ್ದಾರೆ. ಸಂತ್ರಸ್ತ ಮಹಿಳೆ ಹನುಮಂತಮ್ಮ ಚೇತರಿಸಿಕೊಳ್ಳುತ್ತಿದ್ದಾರೆ.

Recommended Video
ಈ ಕೃತ್ಯ ಎಸಗಿರುವ ಆರೋಪಿ ಗಾದಿಲಿಂಗಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಚಿನ್ನ ಇರಬಹುದು ಎಂದು ಭಾವಿಸಿ ಹನುಮಂತಮ್ಮನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಮಾರಣಾಂತಿಕ ಹಲ್ಲೆ ಮಾಡಿದ್ದ. ಅಡ್ಡ ಬಂದ ಹನ್ನೆರಡು ವರ್ಷದ ಬಾಲಕನನ್ನು ಹತ್ಯೆ ಮಾಡಿದ್ದ. ಘಟನೆ ಸಂಬಂಧ ಸಿಸಿಟಿವಿ ದೃಶ್ಯ ಆಧರಿಸಿ ಗಾದಿಲಿಂಗಪ್ಪನನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.
-
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications