16 ಸಾವಿರ ಟೆಕ್ಕಿ ನೇಮಕ: ಇನ್ಫಿ ನಾರಾಯಣ ಮೂರ್ತಿ

ಇದನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಆರ್ಥಿಕ ವರ್ಷದ ವೇಳೆಗೆ ಭಾರಿ ಸಂಖ್ಯೆಯಲ್ಲಿ ಸಾಫ್ಟ್ ವೇರ್ ಇಂಜಿನಿಯರುಗಳನ್ನು ನೇಮಕ ಮಾಡಿಕೊಳ್ಳುವುದಾಗಿ ಕಂಪನಿಯ ಕಾರ್ಯವಾಹಕ ಅಧ್ಯಕ್ಷ ಎನ್ ಆರ್ ನಾರಾಯಣ ಮೂರ್ತಿ ಅವರು ತಿಳಿಸಿದ್ದಾರೆ.
ಸುಮಾರು ಹದಿನಾರು ಸಾವಿರ ಮಂದಿ ಇಂಜಿನಿಯರುಗಳ ಅಗತ್ಯ ಬೀಳಲಿದೆ. ಹಾಗಾಗಿ ಈ ನೇಮಕಾತಿ ನಡೆದಿದೆ. ಮುಂದಿನ ವರ್ಷಕ್ಕಾಗಿ ಈಗಾಗಲೇ ನೇಮಕಾತಿ ಪ್ರಕ್ರಿಯೆ ಆರಂಭಗೊಂಡಿದೆ ಎಂದು ದೇಶದ ಎರಡನೆಯ ಅತಿ ದೊಡ್ಡ ಐಟಿ ಕಂಪನಿಯ ಕಾರ್ಯವಾಹಕ ಅಧ್ಯಕ್ಷ ನಾರಾಯಣ ಮೂರ್ತಿ ಅವರು ಹೇಳಿದ್ದಾರೆ.
ಆದರೆ ಮುಂದಿನ ನೇಮಕಾತಿಯನ್ನು ಕಡಿತಗೊಳಿಸುವುದಾಗಿ Infosys CEO ಎಸ್ ಡಿ ಶಿಬುಲಾಲ್ ಅವರು ಕಳೆದ ಏಪ್ರಿಲ್ ತಿಂಗಳಲ್ಲಿ ಹೇಳಿದ್ದರು. 2014ರ ಆರ್ಥಿಕ ವರ್ಷಕ್ಕೆ 10 ಸಾವಿರ ಇಂಜಿನಿಯರುಗಳು ಸಾಕಾಗಬಹುದು. ಇದರಲ್ಲಿ 2013ನೇ ಸಾಲಿನಲ್ಲಿ ಆಯ್ಕೆಗೊಂಡಿರುವ 5 ಸಾವಿರ ಮಂದಿ ಹೊಸಬರೂ ಸೇರುತ್ತಾರೆ ಎಂದು ತಿಳಿಸಿದ್ದರು.
ಆದರೆ ಕಂಪನಿಗೆ ಸಿಗಲಿರುವ ಪ್ರಾಜೆಕ್ಟುಗಳು ಮತ್ತು ಬೇಡಿಕೆಯನ್ನು ಮನಗಂಡು ನೇಮಕಾತಿಯನ್ನು ಹೆಚ್ಚು ಮಾಡುವುದಾಗಿ ಹೇಳಿದ್ದರು. ಇದಕ್ಕೆ ಹೋಲಿಸಿದಲ್ಲಿ, ಕಂಪನಿಯ ಕಾರ್ಯವಾಹಕ ಅಧ್ಯಕ್ಷ ಮೂರ್ತಿ ಅವರು ಹೇಳಿರುವಂತೆ ಇನ್ಫಿ ಈ ಬಾರಿ ಹೆಚ್ಚು ಮಂದಿಯನ್ನು ನೇಮಕ ಮಾಡಿಕೊಳ್ಳುವುದು ಖಾತ್ರಿಯಾಗಿದೆ. (ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನಲ್ಲಿ ಉದ್ಯೋಗ)
ಆದರೆ ಇದು ದೇಶದ ಅತಿ ದೊಡ್ಡ ಐಟಿ ಕಂಪನಿಯಾದ TCS ನೇಮಕಾತಿಗಿಂತ ಅರ್ಧದಷ್ಟು ಕಡಿಮೆಯಾಗಿದೆ. ಮುಂದಿನ ವರ್ಷದ ವೇಳೆಗೆ 25 ಸಾವಿರ ಮಂದಿ ಹೊಸ ಇಂಜಿನಿಯರಿಂಗ್ ಪದವೀಧರರನ್ನು ನೇಮಿಸಿಕೊಳ್ಳುವುದಾಗಿ TCS CEO ಎನ್ ಚಂದ್ರಶೇಖರನ್ ತಿಳಿಸಿದ್ದಾರೆ.
ಅರ್ಥಾತ್, ಐಟಿ ಕ್ಷೇತ್ರಕ್ಕೆ ಮತ್ತೆ ಬೇಡಿಕೆ ಕುದುರಿದ್ದು ಸಾಫ್ಟ್ ವೇರ್ ಇಂಜಿನಿಯರುಗಳಿಗೆ ಉತ್ತಮ ಭವಿಷ್ಯವಿದೆ ಎಂಬುದು ಚೇತೋಹಾರಿ ಸುದ್ದಿಯಾಗಿದೆ. Nasscom ಸಹ ಇದನ್ನೇ ಹೇಳಿದ್ದು ಪ್ರಸಕ್ತ ಸಾಲಿನಲ್ಲಿ ಶೇ. 14ರಷ್ಟು ಐಟಿ ರಫ್ತು ನಡೆಯಲಿದೆ ಎಂದಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications