Bengaluru: ಬೆಂಗಳೂರಿನ ಈ ಪಾರ್ಕ್ನಲ್ಲಿ ಜಾಗಿಂಗ್ ನಿಷೇಧ!
ಬೆಂಗಳೂರು ನಗರದ ಪ್ರತಿಷ್ಠಿತ ಏರಿಯಾದಲ್ಲಿ ಒಂದಾಗಿರುವ ಇಂದಿರಾ ನಗರದ ಪಾರ್ಕ್ ಒಂದರಲ್ಲಿ ಜಾಗಿಂಗ್ ನಿಷೇಧ ಮಾಡಿರುವುದು ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಜಾಗಿಂಗ್ ನಿಷೇಧ ಮಾಡಿರುವುದಕ್ಕೆ ಬೇಸರ ವ್ಯಕ್ತಪಡಿಸಿ ವ್ಯಕ್ತಿಯೊಬ್ಬರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಹೀಗೆ ಮಾಡುತ್ತಿರುವುದರ ಹಿಂದಿನ ಉದ್ದೇಶವನ್ನು ಪ್ರಶ್ನಿಸಿದ ಅವರು, ವ್ಯವಸ್ಥೆಯನ್ನು ಟೀಕಿಸಿದ್ದಾರೆ.
ಸಹನಾ ಎನ್ನುವವರು ತಮ್ಮ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಜಾಗಿಂಗ್ ನಿಷೇಧಿಸಲಾಗಿದೆ, ವಾಕಿಂಗ್ ಮಾಡಿ, ಗೇಮಿಂಗ್ ಚಟುವಟಿಕೆ ನಿಷೇಧಿಸಲಾಗಿದೆ ಎನ್ನುವ ಪಾರ್ಕ್ನ ನಿಯಮಗಳಿರುವ ಫೋಟೊ ಹಂಚಿಕೊಂಡಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಅದರಲ್ಲೂ ಆರೋಗ್ಯ ಕಾಪಾಡಿಕೊಳ್ಳಲು ಜಾಗಿಂಗ್ ಮಾಡಬಾರದು ಎಂದರೆ ಹೇಗೆ ಎಂದು ಪ್ರಶ್ನೆ ಮಾಡಿದ್ದಾರೆ.

"ಇದು ತಮಾಷೆಯ ವಿಷಯವಲ್ಲ, ಇಂದಿರಾನಗರ ಉದ್ಯಾನವನದಲ್ಲಿ ಜಾಗಿಂಗ್ ಬೇಡ? ಮುಂದೇನು, ಉದ್ಯಾನವನಗಳಲ್ಲಿ ಪಾಶ್ಚಿಮಾತ್ಯ ಬಟ್ಟೆ ಧರಿಸಬಾರದು? ಜಾಗಿಂಗ್ ಮಾಡುವವರು ಉದ್ಯಾನವನಗಳಿಗೆ ಏನು ಮಾಡಿದ್ದಾರೆ?" ಎಂದು ಅವರು ಕೇಳಿದ್ದಾರೆ, ಬೆಂಗಳೂರಿನ ಸಾರ್ವಜನಿಕ ಸ್ಥಳಗಳನ್ನು ಸರ್ಕಾರ ಅಥವಾ ಉದ್ಯಾನವನ ನಿರ್ವಹಣೆಯನ್ನು ನಿರ್ವಹಿಸುವ ಸ್ಥಳೀಯ ಗುಂಪುಗಳು ಹೇಗೆ ನಿಯಂತ್ರಿಸುತ್ತಿವೆ ಎಂಬ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.
ಪೋಸ್ಟ್ ವೈರಲ್, ವ್ಯಾಪಕ ಚರ್ಚೆ
ಅವರ ಪೋಸ್ಟ್ ಸೋಷಿಯಲ್ ಮೀಡಿಯಾದಲ್ಲಿ ಗಮನ ಸೆಳೆಯಿತು, ಇದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಹಲವರು ಈ ಕ್ರಮವನ್ನು ವಿರೋಧಿಸಿದ್ದರೆ ಇನ್ನಷ್ಟು ಮಂದಿ ಸಮರ್ಥನೆ ಮಾಡಿಕೊಂಡಿದ್ದಾರೆ. ಕೆಲವರು ಸಹನಾ ಅವರ ಹತಾಶೆಗೆ ಸಹಾನುಭೂತಿ ವ್ಯಕ್ತಪಡಿಸಿದ್ದು, ಇಂತಹ ನಿಷೇಧವನ್ನು ಅಸಂಬಂಧ ಮತ್ತು ಹಾಸ್ಯಾಸ್ಪದ ಎಂದು ಟೀಕಿಸಿದ್ದಾರೆ.
ಇನ್ನಷ್ಟು ಮಂದಿ ಆಡಳಿತ ವರ್ಗದ ಕ್ರಮವನ್ನು ಸಮರ್ಥನೆ ಮಾಡಿದ್ದು, ವಾಕಿಂಗ್ ಮಾಡುವ ಮಾರ್ಗ ಕಿರಿದಾಗಿರುವ ಕಾರಣ ಜಾಗಿಂಗ್ ಮಾಡಲು ನಿಷೇಧ ಹೇರಿರಬಹುದು ಎಂದು ಹೇಳಿದರು. ಕೋರಮಂಗಲದಲ್ಲಿರುವ ಪಾರ್ಕ್ ಒಂದರಲ್ಲಿ ಕೂಡ ಇದೇ ನಿಯಮವಿರುವ ಉದ್ಯಾನವಿದೆ, ಜಾಗ ಕಡಿಮೆ ಇರುವ ಕಾರಣ ಸಂಘರ್ಷ ತಪ್ಪಿಸಲು ಇಂತಹ ಕ್ರಮ ಕೈಗೊಳ್ಳುತ್ತಾರೆ, ಇದು ನನಗೆ ತಡವಾಗಿ ಅರ್ಥವಾಯಿತು ಎಂದು ಬಳಕೆದಾರರೊಬ್ಬರು ಪ್ರತಿಕ್ರಿಯೆ ನೀಡಿದ್ದಾರೆ.
ಇನ್ನೊಬ್ಬರು ಇದನ್ನು ಉದಾಹರಣೆ ಸಹಿತ ವಿವರಿಸಿದ್ದಾರೆ, ಸೈಕಲ್ ಲೇನ್ನಲ್ಲಿ ಪಾದಚಾರಿ ಮಾರ್ಗವನ್ನು ಒಂದೇ ಮಾಡಲಾಗದು, ಎರಡೂ ಬೇರೆ ಬೇರೆ ಇರಬೇಕು, ಇದು ಕೂಡ ಹಾಗೆ ಜಾಗಿಂಗ್ ಮಾಡುವವರಿಂದ ವಾಕಿಂಗ್ ಮಾಡುವವರಿಗೆ ಸಮಸ್ಯೆಯಾಗುತ್ತದೆ ಎಂದು ಇಂತಹ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications