ಭಾನುವಾರ ಜೋಗಿ, ಸಿಂಧು ರಾವ್ ಪುಸ್ತಕ ಬಿಡುಗಡೆ
ಬೆಂಗಳೂರು, ಫೆಬ್ರವರಿ 04 : ಭಾನುವಾರ ಫೆಬ್ರವರಿ 5, ಮಧ್ವನವಮಿಯಂದು ಎರಡು ಗಮ್ಮತ್ತಾದ ಕಥಾಸಂಕನಗಳು ಕನ್ನಡ ಕಥಾಪ್ರಿಯರಿಗೆ ರಸದೌತಣ ಬಡಿಸಲಿವೆ. ಅಕ್ಷರದೌತಣಕ್ಕೂ ಮೊದಲು 9.30ಕ್ಕೆ ಲಘು ಉಪಹಾರವೂ ಇರುತ್ತದೆ.
ಒಂದು, ಖ್ಯಾತ ಅಂಕಣಕಾರ, ಪತ್ರಕರ್ತ, ಕತೆಕಾದಂಬರಿಕಾರ ಜೋಗಿ ಊರ್ಫ್ ಗಿರೀಶ್ ರಾವ್ ಅವರ 'B ಕ್ಯಾಪಿಟಲ್' ಎಂಬ ಪುಸ್ತಕ ಮತ್ತು ಯುವ ಬರಹಗಾರ್ತಿ ಸಿಂಧು ರಾವ್ ಟಿ ಅವರ 'ಸರ್ವಋತು ಬಂದರು' ಎಂಬ ಕಥಾಸಂಕಲನ ಬಿಡುಗಡೆಗೊಳ್ಳಲಿವೆ.[ಕಾದಂಬರಿ ವಿಮರ್ಶೆ: ಉತ್ತರಕಾಂಡದ ಹೆಸರಿನಲ್ಲಿ ಉತ್ತರಪೂರ್ವಕಾಂಡದ ಕತೆ]

ಅಂಕಿತ ಪುಸ್ತಕ ಪ್ರಕಟಿಸುತ್ತಿರುವ ಈ ಎರಡು ಪುಸ್ತಕಗಳು ಬಸವನಗುಡಿಯ ವಾಡಿಯಾರ್ ರಸ್ತೆಯಲ್ಲಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ ಸಭಾಂಗಣದಲ್ಲಿ ಸರಿಯಾಗಿ 10.30ಕ್ಕೆ ಅತಿಥಿಗಳು, ಪುಸ್ತಕಪ್ರಿಯರ ಸಮ್ಮುಖದಲ್ಲಿ ಲೋಕಾರ್ಪಣೆಗೊಳ್ಳಲಿವೆ.
ಖ್ಯಾತ ಕವಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿದ್ಧಲಿಂಗಯ್ಯ, ಕಿರುತೆರೆ ನಿರ್ದೇಶಕ ಟಿಎನ್ ಸೀತಾರಾಮ್, 'ನಾನು ಅವನಲ್ಲ, ಅವಳು' ಚಿತ್ರದ ನಿರ್ದೇಶಕ ಬಿಎಸ್ ಲಿಂಗದೇವರು ಮತ್ತು 'ಕಿರಿಕ್ ಪಾರ್ಟಿ'ಯ ನಾಯಕ ರಕ್ಷಿತ್ ಶೆಟ್ಟಿ ಅವರು ಉಪಸ್ಥಿತರಿರಲಿದ್ದಾರೆ.
ಇವರೊಂದಿಗೆ ಕಾರ್ಯಕ್ರಮದ ಕೇಂದ್ರಬಿಂದುವಾಗಿರುವ ಜೋಗಿ ಮತ್ತು ಸಿಂಧು ರಾವ್ ಅವರು ಇರಲಿದ್ದಾರೆ. ಎರಡೂ ಪುಸ್ತಕಗಳ ಬೆಲೆ 130 ರುಪಾಯಿ. ಭಾನುವಾರ ಬಹುಶಃ ಸ್ವಲ್ಪ ಕಡಿಮೆ ಬೆಲೆ ಸಿಕ್ಕರೂ ಸಿಗಬಹುದು. ಸ್ನೇಹಿತರನ್ನು ಭೇಟಿಯಾಗಲು, ಅತಿಥಿಗಳ ಮಾತುಗಳನ್ನು ಸವಿಯಲು ಖಂಡಿತ ಕಾರ್ಯಕ್ರಮಕ್ಕೆ ಬನ್ನಿ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications