ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲೋಕಾಯುಕ್ತ ಆದೇಶ: ಚಿಕ್ಕಬಾಣಾವರ ಕೆರೆ ಒತ್ತುವರಿ ಜಂಟಿ ಸಮೀಕ್ಷೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 27: ಬೆಂಗಳೂರಿನ ಚಿಕ್ಕಬಾಣಾವರ ಕೆರೆಯ ಒತ್ತುವರಿಗೆ ಸಂಬಂಧಿಸಿದಂತೆ ಭೂದಾಖಲೆಗಳ ಜಂಟಿ ನಿರ್ದೇಶಕರು, ಜಲಮಂಡಳಿ ಅಧಿಕಾರಿಗಳ ಸಂಯೋಗದಲ್ಲಿ ಶನಿವಾರ ಕೆರೆಯ ಸಮೀಕ್ಷೆ ನಡೆಸಿದರು.

ಲೋಕಾಯುಕ್ತ ನಿರ್ದೇಶನ: ಅರಕೆರೆ ಜಂಟಿ ಸಮೀಕ್ಷೆ ನಡೆಸಿದ ಅಧಿಕಾರಿಗಳು ಲೋಕಾಯುಕ್ತ ನಿರ್ದೇಶನ: ಅರಕೆರೆ ಜಂಟಿ ಸಮೀಕ್ಷೆ ನಡೆಸಿದ ಅಧಿಕಾರಿಗಳು

ಈ ವೇಳೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಗೈರು ಹಾಜರಾಗಿದ್ದರು.ಬೆಂಗಳೂರಿನ ಕೆರೆಗಳ ಒತ್ತುವರಿ ಕುರಿತಂತೆ ಜಂಟಿ ಸಮೀಕ್ಷೆಗೆ ಸೂಚನೆ ನೀಡಬೇಕೆಂದು ಕೋರಿ ಯುನೈಟೆಡ್ ಬೆಂಗಳೂರು ಫೋರಂನ ಸದಸ್ಯರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಲೋಕಾಯುಕ್ತರು, ಭೂದಾಖಲೆಗಳ ಜಂಟಿ ನಿರ್ದೇಶಕರಿಗೆ ಸಮೀಕ್ಷೆ ನಡೆಸುವಂತೆ ಆದೇಶ ನೀಡಿದ್ದರು.

ಯುನೈಟೆಡ್ ಬೆಂಗಳೂರು ದೂರಿನ ಪರಿಶೀಲನೆ ಮಾಡಿದ ಲೋಕಾಯುಕ್ತ ನ್ಯಾಯಮೂರ್ತಿ ಯುನೈಟೆಡ್ ಬೆಂಗಳೂರು ದೂರಿನ ಪರಿಶೀಲನೆ ಮಾಡಿದ ಲೋಕಾಯುಕ್ತ ನ್ಯಾಯಮೂರ್ತಿ

Joint survey conducted at Chikka Banavara lake

14 ವರ್ಷಗಳ ನಂತರ ತುಂಬಿತು ಮಲ್ಲಯ್ಯನ ಕೆರೆ, ತಂಡೋಪತಂಡವಾಗಿ ಬಂದ ರೈತರು 14 ವರ್ಷಗಳ ನಂತರ ತುಂಬಿತು ಮಲ್ಲಯ್ಯನ ಕೆರೆ, ತಂಡೋಪತಂಡವಾಗಿ ಬಂದ ರೈತರು

ಈ ಹಿನ್ನೆಲೆಯಲ್ಲಿ ಈಗಾಗಲೇ ಬೆಂಗಳೂರಿನ ಅರಕೆರೆ ಸೇರಿದಂತೆ ಹಲವಾರು ಕೆರೆಗಳ ಒತ್ತುವರಿಗೆ ಸಂಬಂಧಿಸಿದಂತೆ ಸಮೀಕ್ಷೆ ಕೈಗೊಳ್ಳಲಾಗಿತ್ತು. ಶನಿವಾರ ಚಿಕ್ಕಬಾಣಾವಾರ ಕೆರೆಯ ಸಮೀಕ್ಷೆ ನಡೆಸಲಾಗಿದ್ದು, ಈ ಹಿಂದಿನಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಗೈರಾಗಿರುವುದು ಕಂಡುಬಂತು. ಸಮೀಕ್ಷೆ ನಡೆಸುವ ವೇಳೆ ಯುನೈಟೆಡ್ ಬೆಂಗಳೂರು ತಂಡದ ಸದಸ್ಯರು ಹಾಜರಿದ್ದರು.

English summary
Following petition filed by the United Bengaluru forum, Lokayukta had directed to conducted joint survey of Bengaluru lakes. On Saturday the same was conducted in Chikka Banavara lake.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X