ಪ್ರಾಣ ತೆಗೆದ ಜಾಲಿ ರೈಡ್ ಮೋಜು, ಅಪಘಾತವಾಗಿದ್ದು ಹೇಗೆ?
Recommended Video

ಬೆಂಗಳೂರು, ಸೆಪ್ಟೆಂಬರ್ 18 : ಮೂವರು ಪಿಯುಸಿ ವಿದ್ಯಾರ್ಥಿಗಳ ಮೋಜಿನ ಜಾಲಿ ರೈಡ್ ಒಬ್ಬನ ಸಾವಿನಲ್ಲಿ ಅಂತ್ಯವಾಗಿದೆ. ಲೈಸೆನ್ಸ್ ಇಲ್ಲದಿದ್ದರೂ ಮಕ್ಕಳಿಗೆ ಕಾರು ಕೊಡಿಸಿದ್ದ ತಪ್ಪಿಗೆ ವಿದ್ಯಾರ್ಥಿಗಳ ಪೋಷಕರು ಜೈಲು ಪಾಲಾಗಿದ್ದಾರೆ.
ಹೊಸೂರು ರಸ್ತೆಯ ರೂಪೇನಾ ಅಗ್ರಹಾರ ಬಳಿ ಸಂಭವಿಸಿದ ಅಪಘಾತದಲ್ಲಿ ಅರ್ಫಾನ್ ಸಲೀಂ (17) ಮೃತಪಟ್ಟಿದ್ದಾನೆ. ಶ್ರೀನಿವಾಸ್ (16) ಮತ್ತು ಅನಿರುದ್ಧ್ (16) ಗಾಯಗೊಂಡಿದ್ದಾರೆ. ಮೂವರು ನಗರದಲ್ಲಿ ಆಗಾಗ ಜಾಲಿ ರೈಡ್ ಹೋಗುತ್ತಿದ್ದರು. ಶನಿವಾರ ಜಾಲಿ ರೈಡ್ ಹೋದ ಸಂದರ್ಭದಲ್ಲಿ ಕಾರು ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ.
ಅಜಾಗರೂಕತೆಯಿಂದ ವಾಹನ ಸಂಚಾರ ನಡೆಸಿ ಜೀವಕ್ಕೆ ಕುತ್ತು ತಂದ ಆರೋಪದಡಿ ಶ್ರೀನಿವಾಸ್ ಮತ್ತು ಅನಿರುದ್ಧ್ ವಶಕ್ಕೆ ಪಡೆದುಕೊಂಡ ಮಡಿವಾಳ ಸಂಚಾರಿ ಪೊಲೀಸರು ಇಬ್ಬರನ್ನು ಬಾಲ ಮಂದಿರಕ್ಕೆ ಕಳುಹಿಸಿ ಕೊಟ್ಟಿದ್ದಾರೆ. ಮಕ್ಕಳ ಬಳಿ ಡ್ರೈವಿಂಗ್ ಲೈಸೆನ್ಸ್ ಇಲ್ಲದಿದ್ದರೂ ಕಾರು ಕೊಡಿಸಿದ್ದಕ್ಕಾಗಿ ಪೋಷಕರನ್ನು ಬಂಧಿಸಲಾಗಿದೆ.
ಅರ್ಫಾನ್ ಮತ್ತು ಶ್ರೀನಿವಾಸ್ ದೇವರ ಚಿಕ್ಕನಹಳ್ಳಿಯ ನಿವಾಸಿಗಳು. ಅನಿರುದ್ಧ್ ಎಚ್ಎಸ್ಆರ್ ಲೇಔಟ್ ನಿವಾಸಿ. ನಗರದ ಬೇರೆ-ಬೇರೆ ಕಾಲೇಜುಗಳಲ್ಲಿ ಎಲ್ಲರೂ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಮೂವರು ಆಗಾಗ ಕಾರುಗಳಲ್ಲಿ ಜಾಲಿ ರೈಡ್ ಹೋಗುತ್ತಿದ್ದರು. ಶನಿವಾರ ಹೀಗೆ ಜಾಲಿ ರೈಡ್ ಹೋದಾಗ ಅಪಾಘಾತ ನಡೆಸಿದ್ದು, ಅರ್ಫಾನ್ ಸಲೀಂ ಮೃತಪಟ್ಟಿದ್ದಾನೆ.

ಜಾಲಿ ರೈಡ್ ಪ್ರಾಣ ತೆಗೆಯಿತು
ಶನಿವಾರ ತಡರಾತ್ರಿ 12.30ರಿಂದ ಭಾನುವಾರ ಮುಂಜಾನೆ 2.30ರ ತನಕ ಮೂವರು ಜಾಲಿ ರೈಡ್ ನಡೆಸಿದ್ದಾರೆ. ಮಡಿವಾಳ, ಎಲೆಕ್ಟ್ರಾನಿಕ್ ಸಿಟಿ ಮಾರ್ಗದಲ್ಲಿ ಹಲವು ಬಾರಿ ಇವರು ಸುತ್ತಾಟ ನಡೆಸಿದ್ದಾರೆ. ವಾಹನಗಳನ್ನು ಓವರ್ ಟೇಕ್ ಮಾಡುವ ಪೈಪೋಟಿ ನಡೆಸುವಾಗ ನಿಯಂತ್ರಣ ತಪ್ಪಿ ಅಪಘಾತ ನಡೆಸಿದೆ.

ಒಂದು ಸಾವು, ಕಾರು ಜಖಂ
ಶ್ರೀನಿವಾಸ್ ಇನ್ನೋವಾ, ಅರ್ಫಾನ್ ಸ್ಕೋಡಾ, ಅನಿರುದ್ಧ್ ಮಾರುತಿ ಡಿಸೈರ್ ಕಾರು ತೆಗೆದುಕೊಂಡು ಜಾಲಿ ರೈಡ್ ಹೋಗಿದ್ದರು. ಭಾನುವಾರ ಮುಂಜಾನೆ 2.45ರ ಸುಮಾರಿಗೆ ರೂಪೇನಾ ಅಗ್ರಹಾರ ಬಳಿ ಇನ್ನೋವಾ ಕಾರು ಉಳಿದ ಎರಡು ಕಾರುಗಳಿಗೆ ಡಿಕ್ಕಿ ಹೊಡೆದಿದ್ದು, ಅಪಘಾತವಾಗಿದೆ. ಅರ್ಫಾನ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಇಬ್ಬರ ಪ್ರಾಣ ಸೀಟ್ ಬೆಲ್ಟ್ನಿಂದ ಉಳಿಯಿತು
ಇನ್ನೋವಾ ಕಾರು ಡಿಕ್ಕಿ ಹೊಡೆಯುತ್ತಿದ್ದಂತೆ ಅನಿರುದ್ಧ್ ಮತ್ತು ಅರ್ಫಾನ್ ಇದ್ದ ಕಾರು ಮಗುಚಿ ಬಿದ್ದಿದೆ. ಇನ್ನೋವಾ ಕಾರು ಮುಂದೆ ಸಾಗಿ ಟ್ಯಾಂಕರ್ಗೆ ಗುದ್ದಿದೆ. ತಲೆಗೆ ಗಂಭೀರಗಾಯವಾಗಿದ್ದ ಅರ್ಫಾನ್ ಸ್ಥಳದಲ್ಲಿಯೇ ಮೃತಪಟ್ಟರೆ. ಸೀಟ್ ಬೆಲ್ಟ್ ಧರಿಸಿದ್ದರಿಂದ ಅನಿರುದ್ಧ್ ಮತ್ತು ಶ್ರೀನಿವಾಸ್ ಪ್ರಾಣ ಉಳಿಸಿದೆ.

'ಗೊತ್ತಿಲ್ಲದೇ ತೆಗೆದುಕೊಂಡು ಹೋಗಿದ್ದರು'
ಮಡಿವಾಳ ಸಂಚಾರಿ ಪೊಲೀಸರು ವಿಚಾರಣೆ ನಡೆಸಿದಾಗ ಪೋಷಕರು. 'ನಮಗೆ ಗೊತ್ತಿಲ್ಲದಂತೆ ಕಾರುಗಳನ್ನು ತೆಗೆದುಕೊಂಡು ಹೋಗಿದ್ದರು ಎಂದು ಮಾಹಿತಿ ನೀಡಿದ್ದಾರೆ.'. 'ಡ್ರೈವಿಂಗ್ ಲೈಸೆನ್ಸ್ ಇಲ್ಲದಿದ್ದರೂ ಕಾರು ಕೊಡಿಸಿದ ತಪ್ಪಿಗೆ ಪೋಷಕರನ್ನು ಬಂಧಿಸಲಾಗಿದೆ.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
ಏಪ್ರಿಲ್ 5ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
ಏರ್ ಕೂಲರ್ vs ಏರ್ ಕಂಡಿಷನರ್: ಬೇಸಿಗೆಯಲ್ಲಿ ನಿಮ್ಮ ಸರಿಯಾದ ಆಯ್ಕೆ ಯಾವುದು? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
ಖೇಲೋ ಇಂಡಿಯಾ ಬುಡಕಟ್ಟು ಕ್ರೀಡಾಕೂಟ: 23 ಚಿನ್ನದ ಪದಕ ಗೆದ್ದು ಸಮಗ್ರ ಚಾಂಪಿಯನ್ ಪಟ್ಟ ಅಲಂಕರಿಸಿದ ಕರ್ನಾಟಕ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು












Click it and Unblock the Notifications