Get Updates
Get notified of breaking news, exclusive insights, and must-see stories!

Journalist: ಪತ್ರಿಕೋದ್ಯಮ ಕೇವಲ ಕಾವಲು ನಾಯಿ ಅಷ್ಟೇ ಅಲ್ಲ ರಾತ್ರಿ ಕಾವಲುಗಾರನೂ ಹೌದು: ಸಿಎಂ ಬೊಮ್ಮಾಯಿ

ಪತ್ರಿಕೋದ್ಯಮ ವಾಚ್ ಡಾಗ್ ಅಷ್ಟೇ ಅಲ್ಲ. ನೈಟ್ ವಾಚಮನ್ ಕೂಡ. ಆ ರೀತಿಯ ಕೆಲಸವನ್ನು ನೀವು ಮಾಡಿದ್ದಿರಿ. ನಿಮ್ಮ ವೃತ್ತಿಧರ್ಮವನ್ನು ಇನ್ನಷ್ಟು ಗಟ್ಟಿಯಾಗಿ ಪ್ರದಿಪಾದಿಸಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರು, ಮಾರ್ಚ್ 13: ಪತ್ರಿಕೋದ್ಯಮ ವಾಚ್ ಡಾಗ್ ಅಷ್ಟೇ ಅಲ್ಲ. ನೈಟ್ ವಾಚಮನ್ ಕೂಡ. ಆ ರೀತಿಯ ಕೆಲಸವನ್ನು ನೀವು ಮಾಡಿದ್ದಿರಿ. ನಿಮ್ಮ ವೃತ್ತಿಧರ್ಮವನ್ನು ಇನ್ನಷ್ಟು ಗಟ್ಟಿಯಾಗಿ ಪ್ರದಿಪಾದಿಸಲಿ ಎಂದು ನಿಮಗೆ ಪ್ರಶಸ್ತಿ ಬಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಪುರಸ್ಕೃತರಿಗೆ ಅಭಿನಂದನೆ ತಿಳಿಸಿದರು.

Journalism is not only Watch Dog it is a Night Watchman, CM Bommai said, after award Distribution

ಬೆಂಗಳೂರಿನಲ್ಲಿ ಸೋಮವಾರ ಕರ್ನಾಟಕ ಮಾಧ್ಯಮ ಅಕಾಡೆಮಿಯ ಮತ್ತು ವಾರ್ತಾ ಇಲಾಖೆಯ ಆಯೋಜಿಸಲಾಗಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಪ್ರಶಸ್ತಿ ಸಿಗುವಂತಹದ್ದು ಇನ್ನಷ್ಟು ಹೆಚ್ಚಿನ ಜವಾಬ್ದಾರಿಯಿಂದ ಕೆಲಸ ಮಾಡಲಿ ಅಂತ ಎನ್ನುವುದು ನನ್ನ ಭಾವನೆ. ನೀವು ಒಳ್ಳೆಯ ಕೆಲಸ ಮಾಡಿದ್ದಕ್ಕೆ ಗುರುತಿಸಿರುತ್ತಾರೆ. ಪ್ರಶಸ್ತಿಯ ಪಾವಿತ್ರ್ಯತೆಯು ನಿಮ್ಮ ವೃತ್ತಿಧರ್ಮ ಇನ್ನಷ್ಟು ಗಟ್ಟಿಯಾಗಿ ಪ್ರದಿಪಾದಿಸುವಂತೆ ಸೂಚಿಸುತ್ತದೆ ಎಂದರು.

ಪತ್ರಿಕೋದ್ಯಮ ತುಂಬಾ ಹೆಳೇ ವೃತ್ತಿ. ವಿಶ್ವದ ನಾಗರಿಕತೆಯ ಬೆಳವಣಿಗೆಯಲ್ಲಿ ಬಹಳ ದೊಡ್ಡ ಪಾತ್ರ ಅದರದ್ದು. ತಂತ್ರಜ್ಞಾನ ಹೆಚ್ಚಾದಂತೆ ಪತ್ರಿಕೋದ್ಯಮದಲ್ಲಿ ದೊಡ್ಡ ಬದಲಾವಣೆ ಆಗಿದೆ. ವಿಶ್ವ ಮಹಾಯುದ್ಧ 1 ಹಾಗೂ 2 ರ ಬಳಿಕ ಮಷೀನ್ ಮ್ಯಾನುಫ್ಯಾಕ್ಚುರಿಂಗ್ ಮತ್ತು ಪತ್ರಿಕೋದ್ಯಮದಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ವರ್ಡ್ ಆರ್ಡರ್ ಕೂಡ ಬದಲಾವಣೆ ಆಗಿದೆ. ಭಾರತದಲ್ಲಿ ಸ್ವಾತಂತ್ರ್ಯ ‌ಪೂರ್ವದ ಪತ್ರಿಕೋದ್ಯಮ ಹಾಗೂ ಸ್ವಾತಂತ್ರ್ಯ ‌ನಂತರದ ಪತ್ರಿಕೋದ್ಯಮದಲ್ಲಿ ಸಾಕಷ್ಟು ಬದಲಾವಣೆಯಾಗಿದ್ದು, ಸ್ವಾತಂತ್ರ್ಯ ಹೋರಾಟದಲ್ಲಿ ಪತ್ರಿಕೋದ್ಯಮದ ಪಾತ್ರ ಮಹತ್ವದ್ದಾಗಿದೆ ಎಂದು ಅವರು ತಿಳಿಸಿದರು.

ಜಿಲ್ಲಾ ಮಟ್ಟದ ಪತ್ರಕರ್ತರಿಗೂ ಪ್ರೋತ್ಸಾಹ ನೀಡಿ

ನ್ಯಾಯಾಂಗ, ಶಾಸಕಾಂಗ ಮತ್ತು ಪತ್ರಿಕೋದ್ಯಮದಲ್ಲಿ ಪ್ರಜಾಪ್ರಭುತ್ವ ಇರಬೇಕು. ಕಾನೂನಿನ ಹೊರತಾಗಿ ಸ್ವತಂತ್ರವಾಗಿ ಕೆಲಸ ಮಾಡಿಡುವುದು ಪತ್ರಿಕೋದ್ಯಮ. ಇಲ್ಲಿ ಪ್ರಶಸ್ತಿ ಪಡೆದ ಬಹುತೇಕರು ಮೂವತ್ತು ವರ್ಷದಿಂದ ಪರಿಚಯ. ಅವರು ಎಷ್ಟೊಂದು ಕಷ್ಟ ಪಟ್ಟು ಸುದ್ದಿ ಸಂಗ್ರಹಿಸುತ್ತಿದ್ದರು ಎನ್ನುವುದು ನನಗೆ ಅರಿವಿದೆ ಎಂದು ಪುರಸ್ಕೃತರನ್ನು ಉದ್ದೇಶಿಸಿ ಅವರು ಹೇಳಿದರು.

Journalism is not only Watch Dog it is a Night Watchman, CM Bommai said, after award Distribution

ಧಾರವಾಡ, ರಾಯಚೂರು, ಮೈಸೂರಿನಲ್ಲಿ ಕೆಲಸ ಮಾಡುವ ಪತ್ರಕರ್ತರು ಎಷ್ಟು ಕೆಲಸ ಮಾಡುತ್ತಾರೆ ಎನ್ನುವುದು ನನಗೆ ಗೊತ್ತು. ವಿಜಯ ಸಂಕೇಶ್ವರ ಅವರ ಹೊಸ ಪ್ರಯತ್ನ, ಜನರ ಧ್ವನಿಯಾಗಿ ಕೆಲಸ ಮಾಡುವ ರಂಗಣ್ಣ. ಮಾಧ್ಯಮ ಅಕಾಡೆಮಿ ಕೇವಲ ಪ್ರಶಸ್ತಿ ಕೊಡುವ ಕೆಲಸ ಮಾಡದೇ, ಸಂಶೋಧನೆ, ಹೊಸ ಪತ್ರಕರ್ತರಿಗೆ ಪ್ರೋತ್ಸಾಹ, ತಾಲ್ಲೂಕು, ಜಿಲ್ಲಾ ಮಟ್ಟದ ಪತ್ರಕರ್ತರಿಗೆ ಹೆಚ್ಚಿನ ಪ್ರೊತ್ಸಾಹ ನೀಡಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಸಚಿವ ಆರ್. ಅಶೋಕ್ ಹಾಗೂ ಉದ್ಯಮಿ ವಿಜಯ ಸಂಕೇಶ್ವರ್, ಡಾ. ಸುಧಾಮೂರ್ತಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಮತ್ತಿತರರು ಪಾಲ್ಗೊಂಡಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+