ಮಣಿಕಾಂತ್ 'ಭಾವ ತೀರ ಯಾನ' ಬಿಡುಗಡೆಗೆ ಬನ್ನಿ
ಬೆಂಗಳೂರು, ಮೇ.8: ಪತ್ರಕರ್ತ ಮತ್ತು ಜನಪ್ರಿಯ ಅಂಕಣಕಾರ ಎ.ಆರ್.ಮಣಿಕಾಂತ್ ಅವರ 'ಭಾವತೀರಯಾನ'ಪುಸ್ತಕವನ್ನು ನಟ ಪ್ರಕಾಶ್ ರೈಅವರು ಮೇ. 11ರಂದು ಸಂಜೆ ಬೆಂಗಳೂರಿನ ರವಿಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಿದ್ದಾರೆ. ಪುಸ್ತಕ ಬಿಡುಗಡೆಯ ದಿನ- ಉಪಾಸನಾ ಮೋಹನ್, ಪಂಚಮ್ ಹಳಿಬಂಡಿ, ನಾಗಚಂದ್ರಿಕಾ ಭಟ್ ಮತ್ತು ವರ್ಷಾ ಸುರೇಶ ಅವರಿಂದ ಸುಮಧುರ ಭಾವಗೀತೆಗಳ ಗಾಯನ ಆಯೋಜಿಸಲಾಗಿದೆ.
ಪುಸ್ತಕ ಬಿಡುಗಡೆಯ ದಿನದಂದು ಪುಸ್ತಕ ಮಾರಾಟದಿಂದ ಸಿಗುವ ಹಣವನ್ನು ಬಹಳ ಕಷ್ಟದಲ್ಲಿ ಬದುಕುತ್ತಿರುವ 4-5 ಜನರಿಗೆ ಕೊಡಬೇಕು ಎಂಬ ಆಶಯದ ಮಣಿಕಾಂತ್ ಅವರು ಕನ್ನಡಿಗರ ಔದಾರ್ಯದಿಂದ ಮೇ 11 ರಂದು ಹೊಸ ಪುಸ್ತಕ ಭಾವತೀರಯಾನ ಮಾರಾಟವಾಗಿ ಸಿಗುವ ಹಣವನ್ನು ಕಷ್ಟದಲ್ಲಿ ಇರುವ ಸಾಹಿತಿಗಳ ಕುಟುಂಬಕ್ಕೆ/ ಅನಾರೋಗ್ಯದಿಂದ ಬಳಲುವ ಬಡ ಕುಟುಂಬಕ್ಕೆ/ ಪ್ರತಿಭಾವಂತ ವಿದ್ಯಾರ್ಥಿಗೆ ಕೊಡುವುದಾಗಿ ತಿಳಿಸಿದ್ದಾರೆ.
ಕನ್ನಡ ಪ್ರಭ ಪ್ರತ್ರಿಕೆಯ ಜನಪ್ರಿಯ ಅಂಕಣ 'ಭಾವತೀರಯಾನ'ದ ಲೇಖನಗಳ ಮೂಲಕ ನಾಡಿನ ಹಾಗು ವಿದೇಶದ ಕನ್ನಡಿಗರ ಮನಸ್ಸು ಗೆದ್ದ ಮಣಿಕಾಂತ್, ಆಟೊಮೊಬೈಲ್ ಎಂಜಿನಿಯರಿಂಗ್ ನಲ್ಲಿ ಪದವೀಧರರಾಗಿದ್ದರೂ ಒಲಿದದ್ದು ಮಾತ್ರ ಪತ್ರಿಕಾರಂಗಕ್ಕೆ.

ಭಾವ ತೀರ ಯಾನ ಬೆನ್ನುಡಿಯ ಸಾಲುಗಳು: ಸೋಲಿಸಬೇಡ, ಗೆಲಿಸಯ್ಯಾ... ಎಂಬುದು ಇವತ್ತು ಎಲ್ಲರ ಪ್ರಾರ್ಥನೆಯೂ ಆಗಿದೆ. ತಮಾಷೆಯೆಂದರೆ, ಸದಾ ಗೆಲುವನ್ನೇ ಧ್ಯಾನಿಸುವ ಮನುಷ್ಯ, ರಿಸ್ಕ್ಗೆ ಕೈಹಾಕಲು ಹಿಂಜರಿಯುತ್ತಾನೆ, ಹೆದರುತ್ತಾನೆ. ಇವತ್ತಿನ ಸಂದರ್ಭದಲ್ಲಿ, ಗೆಲ್ಲಲು ಹೊರಟ ಜನಕ್ಕೆ ಒಬ್ಬ ಹೀರೋ ಬೇಕು. ಕಣ್ಣೆದುರಿಗೆ ಒಂದು ರೋಲ್ ಮಾಡೆಲ್ ಇರಬೇಕು. ಆಗ ಮಾತ್ರ, ಮನಸ್ಸೆಂಬುದು ಕನಸೆಂಬ ಕುದುರೆಯನೇರಿಬಿಡುತ್ತದೆ.
ಗೆಲುವಿನ ಕಥೆಗಳನ್ನು ಹೆಜ್ಜೆಹೆಜ್ಜೆಗೂ ಕೇಳಲು ಆಸೆಪಡುತ್ತದೆ. ನನ್ನ ಸಂತೋಷವೆಂದರೆ, ಈ ಪುಸ್ತಕದ ಪ್ರತಿ ಪುಟದಲ್ಲೂ ಗೆಲುವಿನ ಸುವಾಸನೆಯಿದೆ. ಪರೀಕ್ಷೆಗೆ ಹೊರಟು ನಿಂತ ಮಗನ ಹಣೆಗೆ ತಿಲಕವಿಟ್ಟು, ಒಳ್ಳೆಯದಾಗುತ್ತೆ, ಹೋಗಿ ಬಾ ಎಂದು ಅಮ್ಮ ಶುಭಹಾರೈಸುತ್ತಾಳಲ್ಲ; ಅಂಥದೊಂದು ಅಕ್ಕರೆಯಿದೆ. ಪ್ರಾಮಾಣಿಕವಾಗಿ ಹೇಳುತ್ತಿದ್ದೇನೆ. ಇಲ್ಲಿರುವ ಬಹುಪಾಲು ಸಕ್ಸಸ್ ಸ್ಟೋರಿಗಳ ಮೂಲ ಇಂಟರ್ನೆಟ್. ಆದರೆ, ಅಂತರ್ಜಾಲದ ಮಾಹಿತಿಯಿಂದಲೇ ಯಾವುದೇ ಬರಹವೂ ಪೂರ್ಣವಾಗಿಲ್ಲ. ಈ ಪುಸ್ತಕದಲ್ಲಿರುವ ಎಲ್ಲ ರಿಯಲ್ ಹೀರೋಗಳೂ ಮಾತಿಗೆ ಸಿಕ್ಕಿದ್ದಾರೆ. ಗಂಟೆಗಟ್ಟಲೆ ಮಾತಾಡಿದ್ದಾರೆ.
ಸುಖ-ದುಃಖ ಹಂಚಿಕೊಂಡಿದ್ದಾರೆ. ಇಲ್ಲಿರುವ ರಿಯಲ್ ಹೀರೋಗಳ ಹಳೆಯ ಕಥೆಯನ್ನು ಬರೆಯುವಾಗೆಲ್ಲ, ಅವರಿಗೆ ಎದುರಾದ ಕ್ರೌರ್ಯ, ಅವಮಾನ, ಸಂಕಟವನ್ನು ನೆನೆದು ನಡುಗಿಹೋಗಿದ್ದೇನೆ.
ಬೇರೊಬ್ಬರ ಸಂಕಟ ನನ್ನದೇ ಆದಂತಾಗಿ, ಬರೆವ ಕೈ ತಡವರಿಸಿ, ಗಂಟಲುಬ್ಬಿ ಬಂದು, ಕಣ್ಣೀರು ಕೆನ್ನೆಗಿಳಿದ ಮೋದಕ್ಕೆ ಬೆರಗಾಗಿದ್ದೇನೆ. ಕಡೆಗೊಮ್ಮೆ, ಗೆಲುವೆಂಬುದು ಅವರ ಮನೆ ಬಾಗಿಲು ತಟ್ಟಿತು ಎಂದು ಬರೆದ ತಕ್ಷಣ ಸಕ್ಕರೆ ತಿಂದು ಸಂಭ್ರಮಿಸಿದ್ದೇನೆ. ಹೌದು, ಬರೆಯುವ ಸಂದರ್ಭದಲ್ಲಿ, ಕಣ್ಣಮುಂದೆ ಬೇರೇನೂ ಇಲ್ಲ ಎನ್ನುವಷ್ಟರ ಮಟ್ಟಿಗೆ ಇಲ್ಲಿನ ಬರಹಗಳು ನನ್ನನ್ನು ಆವರಿಸಿಕೊಂಡಿವೆ. ಗೆಲುವೆಂಬುದು, ನನ್ನ ಜೊತೆಗಿರುವ ಎಲ್ಲರಿಗೂ ದಕ್ಕಲಿ ಎಂದು ಪ್ರಾಥಿಸುವಂತೆಯೂ ಮಾಡಿವೆ.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications