ಸುಪಾರಿ ಕೇಸ್ : ರವಿಬೆಳಗೆರೆಗೆ ಮಧ್ಯಂತರ ಜಾಮೀನು ಮಂಜೂರು
Recommended Video

ಬೆಂಗಳೂರು, ಡಿಸೆಂಬರ್ 13: ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಅವರ ಹತ್ಯೆಗೆ ಸುಪಾರಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ ರವಿ ಬೆಳಗೆರೆ ಅವರಿಗೆ ಸೆಷನ್ಸ್ ನ್ಯಾಯಾಲಯದಿಂದ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರಾಗಿದೆ.
ಅನಾರೋಗ್ಯ ಹಾಗೂ ಪೊಲೀಸರಿಂದ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳುವುದರಲ್ಲಿ ಆಗಿರುವ ಲೋಪದ ಹಿನ್ನಲೆಯಲ್ಲಿ ಜಾಮೀನು ಮಂಜೂರು ಮಾಡಲಾಗಿದೆ. ಇಬ್ಬರ ಶ್ಯೂರಿಟಿ, 1 ಲಕ್ಷ ರು ಬಾಂಡ್ ಸಲ್ಲಿಸಬೇಕು, ತನಿಖೆಗೆ ಸಹಕರಿಸಬೇಕು ಎಂದು ಷರತ್ತುಗಳನ್ನು ನ್ಯಾಯಾಧೀಶ ಮದುಸೂಧನ್ ವಿಧಿಸಿದ್ದಾರೆ. ಡಿಸೆಂಬರ್ 16ರ ತನಕ ಜಾಮೀನು ನೀಡಲಾಗಿದೆ.

ರವಿ ಬೆಳಗೆರೆ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೊಳಪಡಿಸುವಂತೆ 1ನೇ ಎಸಿಎಂಎಂ ನ್ಯಾಯಾಲಯ ಆದೇಶ ನೀಡಿತ್ತು. ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ರವಿ ಬೆಳಗೆರೆ ಅವರನ್ನು ಅನಾರೋಗ್ಯ ನಿಮಿತ್ತ ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಯ ಮಧುಮೇಹ ವಿಭಾಗಕ್ಕೆ ಕರೆದೊಯ್ಯಲಾಗಿದೆ.
ಚೇತನಾ ಪ್ರತಿಕ್ರಿಯೆ: 'ಅಪ್ಪನ ಆರೋಗ್ಯ ತೀವ್ರ ಹದೆಗೆಟ್ಟಿತ್ತು. ಈಗ ಜಯದೇವದಲ್ಲಿ ಚಿಕಿತ್ಸೆ ಪಡೆದ ಬಳಿಕ ಬೇರೆ ಕಡೆ ಕರೆದೊಯ್ಯಲಾಗುವುದು, ಜಾಮೀನು ಸಿಕ್ಕಿರುವುದು ಸಂತಸ ತಂದಿದೆ' ಎಂದು ರವಿ ಅವರ ಪುತ್ರಿ ಚೇತನಾ ಅವರು ಪ್ರತಿಕ್ರಿಯಿಸಿದ್ದಾರೆ.
ಜಾಮೀನು ಮಂಜೂರು: ಇದಕ್ಕೂ ಮುನ್ನ ಅನಾರೋಗ್ಯ ಹಿನ್ನಲೆಯಲ್ಲಿ ರವಿ ಬೆಳಗೆರೆ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡುವಂತೆ ರವಿ ಬೆಳಗೆರೆ ಅವರ ವಕೀಲ ದಿವಾಕರ್ ಅವರು ಅರ್ಜಿ ಸಲ್ಲಿಸಿದರು. ಪ್ರತಿನಿತ್ಯ ಇನ್ಸುಲಿನ್ ಇಂಜೆಕ್ಷನ್ ತೆಗೆದುಕೊಳ್ಳಬೇಕು, ಕಾಲಿಗೆ ಗಾಯವಾಗಿದ್ದು, ಹೆಚ್ಚಿನ ಆರೈಕೆ ಅಗತ್ಯವಾಗಿದೆ. ತನಿಖೆಗೆ ನನ್ನ ಕಕ್ಷಿದಾರರು ಇಲ್ಲಿ ತನಕ ಸಹಕರಿಸಿದ್ದಾರೆ, ಮುಂದೆ ಕೂಡಾ ಸಹಕರಿಸುತ್ತಾರೆ.
ಆರೋಪಿಯೊಬ್ಬನ ಹೇಳಿಕೆ ಆಧಾರ ಮೇಲೆ ಪೊಲೀಸರು ಸ್ವಯಂಪ್ರೇರಿತರಾಗಿ ದೂರು ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ಯಾವುದೇ ಸರಿಯಾದ ಸಾಕ್ಷಿ ಇನ್ನೂ ಕಲೆ ಹಾಕಿಲ್ಲ ಎಂದು ವಾದಿಸಿದರು. ರವಿ ಪರ ವಕೀಲರ ವಾದವನ್ನು ಮನ್ನಿಸಿದ ನ್ಯಾಯಾಧೀಶರು ಡಿ.16ರ ತನಕ ಮಧ್ಯಂತರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದರು.
-
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ












Click it and Unblock the Notifications