ಪರಪ್ಪನ ಅಗ್ರಹಾರದಲ್ಲಿ ರವಿ ಬೆಳಗೆರೆ ಕೈದಿ ನಂ. 12785
ಬೆಂಗಳೂರು, ಡಿಸೆಂಬರ್ 11: ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಅವರನ್ನು ಕೊಲ್ಲಲು ಸುಪಾರಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಯ್ ಬೆಂಗಳೂರು ಸಂಪಾದಕ ರವಿ ಬೆಳಗೆರೆ ಅವರು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೊಳಪಟ್ಟಿದ್ದಾರೆ.
1ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ಅವರು ಡಿಸೆಂಬರ್ 23ರ ತನಕ ನ್ಯಾಯಾಂಗ ಬಂಧನ ನೀಡಿದ್ದಾರೆ. ರವಿ ಬೆಳಗರೆ ಅವರಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಅವರಿಗೆ ನ್ಯಾಯಾಂಗ ಬಂಧನದಲ್ಲೇ ಚಿಕಿತ್ಸೆ ನೀಡಲು ಆದೇಶಿಸಲಾಗಿದೆ.

ಸಿಸಿಬಿ ಕಚೇರಿಯಲ್ಲಿದ್ದ ರವಿ ಬೆಳೆಗೆರೆ ಅವರಿಗೆ ಮಲಗಲು ವಿಶೇಷ ಕೊಠಡಿ ಸೌಲಭ್ಯ ಕಲ್ಪಿಸಲಾಗಿತ್ತು. ಮಗ ಕರ್ಣ ಮತ್ತು ಪುತ್ರಿ ಚೇತನಾ ಬೆಳಗೆರೆ ಅವರು ಮನೆಯಿಂದ ಊಟ, ಉಪಾಹಾರ ತಂದುಕೊಡುತ್ತಿದ್ದರು.
ನ್ಯಾಯಾಂಗ ಬಂಧನದ ವೇಳೆ : ನ್ಯಾಯಾಂಗ ಬಂಧನದ ವೇಳೆ : ಈಗ ಇಲ್ಲಿ, ಪರಪ್ಪನ ಅಗ್ರಹಾರ ಸೆರೆಮನೆಯಲ್ಲಿ ಸಾಮಾನ್ಯ ಕೈದಿಗಳಿರುವ ಸೆಲ್ ನಲ್ಲಿ ಇರಿಸಲಾಗಿದೆ. ಕೈದಿ ನಂಬರ್ 12785 ನೀಡಲಾಗಿದೆ. ಜೈಲಿನಲ್ಲಿ ಕಾಳು ಸಾರು, ಮುದ್ದೆ ನುಂಗಿದ ರವಿ ಅವರನ್ನು ಅಲ್ಲಿನ ವೈದ್ಯರು ಪರೀಕ್ಷಿಸಿದ್ದಾರೆ. ನಂತರ ಕೊಠಡಿಗೆ ಶಿಫ್ಟ್ ಮಾಡಲಾಗಿದೆ.
* ನ್ಯಾಯಾಂಗ ಬಂಧನದ ವೇಳೆ ಪೊಲೀಸ್ ವಿಚಾರಣೆ ಇರುವುದಿಲ್ಲ.
* ಆರೋಪಿ ಪರ ವಕೀಲ, ವೈದ್ಯರು ಬಿಟ್ಟರೆ ಉಳಿದವರಿಗೆ ಸಂದರ್ಶನ ಸಿಗುವುದಿಲ್ಲ.
* ನ್ಯಾಯಾಂಗ ಬಂಧನದ ಅವಧಿಯೊಳಗೆ ಜಾಮೀನು ಅರ್ಜಿಗಾಗಿ ಅರ್ಜಿ ಸಲ್ಲಿಸಬಹುದು.
* ಮಧುಮೇಹದಿಂದ ಬಳಲುತ್ತಿರುವ ರವಿ ಬೆಳಗೆರೆಗೆ ಸೂಕ್ತ ಚಿಕಿತ್ಸೆಯ ನೆರವಿನ ಅಗತ್ಯವಿದೆ ಎಂದು ಕೇಳಿಕೊಳ್ಳಲಾಗಿದ್ದು, ಸೂಕ್ತ ವೈದ್ಯಕೀಯ ನೆರವು ಪಡೆಯಲು ಕೋರ್ಟ್ ಅನುಮತಿ ನೀಡಿದೆ.
ಆರೋಪಗಳು: ರವಿ ಬೆಳಗೆರೆ ವಿರುದ್ಧ ಈಗಾಗಲೇ ಸುಪಾರಿ ಕೇಸಿಗೆ ಸಂಬಂಧಿಸಿದಂತೆ ರವಿ ಬೆಳೆಗೆರೆ ವಿರುದ್ಧ ಐಪಿಸಿ ಸೆಕ್ಷನ್ 307 ಹಾಗೂ 120 (ಬಿ) ಅನ್ವಯ ಹಾಗೂ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆ 1958ರ ಸೆಕ್ಷನ್ 3 ಹಾಗೂ 25ರ ಅನ್ವಯ ಸುಬ್ರಮಣ್ಯಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದಲ್ಲದೆ ಕೊಲೆ ಸಂಚು ಆರೋಪದಲ್ಲಿ ಈ ಐಪಿಎಸ್ ಸೆಕ್ಷನ್ 115 ನಂತೆ ಪ್ರಕರಣ ದಾಖಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications