ಪತ್ರಕರ್ತ ಶಂಷಿಲ್ ಉದಾ ಹಂತಕರು ಸಿಕ್ಕಿಬಿದ್ದರು
ಬೆಂಗಳೂರು, ಜು. 14 : ಒಂದು ವರ್ಷದ ಹಿಂದೆ ನಡೆದ ಪತ್ರಕರ್ತ ಮತ್ತು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಶಂಷಿಲ್ ಉದಾ ಕೊಲೆ ಪ್ರಕರಣದ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ತಂಗಿಯ ಮಗಳನ್ನು ಹಣಕ್ಕಾಗಿ ಅಪಹರಿಸಿ ಕೊಲೆ ಮಾಡಿದ್ದ ದಂಪತಿಗಳು ಈ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್, ಶಂಷಿಲ್ ಉದಾ (63) ಕೊಲೆ ಪ್ರಕರಣದ ಬಗ್ಗೆ ವಿವರಣೆ ನೀಡಿದರು. ಕಳೆದ ವರ್ಷದ ಜುಲೈ 3ರಂದು ಶಂಷಿಲ್ ಅವರನ್ನು ಟ್ಯಾನರಿ ರಸ್ತೆಯ ಈದ್ಗಾ ಕಾಂಪ್ಲೆಕ್ಸ್ ನಲ್ಲಿಯ ಕ್ರೆಡಿಟ್ ಕೋ ಆಪರೇಟಿವ್ ಕಚೇರಿಯಲ್ಲಿಯೇ ಕತ್ತು ಕೊಯ್ದೆ ಕೊಲೆ ಮಾಡಲಾಗಿತ್ತು.

ತಂಗಿಯ ಮಗುವನ್ನು ಹತ್ಯೆ ಮಾಡಿದ ಆರೋಪದ ಮೇಲೆ ಅಶೋಕ ನಗರ ಪೊಲೀಸರು ಎರಡು ದಿನಗಳ ಹಿಂದೆ ಬಂಧಿಸಿರುವ ಸಯ್ಯದ್ ಸಲ್ಮಾನ್ ಷಾ (3೦) ಮತ್ತು ಈತನ ಪತ್ನಿ ಶಬರೀನ್ ತಾಜ್ (2೦) ಅವರು ಪತ್ರಕರ್ತ ಮತ್ತು ಸೊಸೈಟಿ ಅಧ್ಯಕ್ಷ ಶಂಷಿಲ್ ಉದಾ ಅವರನ್ನು ಕೊಲೆ ಮಾಡಿದ್ದರು ಎಂದು ಔರಾದ್ಕರ್ ಹೇಳಿದರು. [ಹಣಕ್ಕಾಗಿ ಮಗು ಕೊಂದಿದ್ದ ಸೋದರತ್ತೆ, ಮಾವ ಬಂಧನ]
ಚಿಕ್ಕಪ್ಪನನ್ನು ಕೊಂದಿದ್ದ : ಸಲ್ಮಾನ್ ಮತ್ತು ಶಬರಿನ್ ಪ್ರೀತಿಸಿ ಮದುವೆಯಾಗಿದ್ದರು. ಸಲ್ಮಾನ್ ಮನೆಯಲ್ಲಿ ಮದುವೆಗೆ ವಿರೋಧಿಸಿದ ಕಾರಣ ಅವನು ಕೆಲವು ಕಾಲ ಶಬರಿನ್ ಮನೆಯಲ್ಲಿ ವಾಸಿಸುತ್ತಿದ್ದರು. ಕೆಲಸವಿಲ್ಲದ ಅಳಿಯನನ್ನು ಅತ್ತೆ ಮನೆಯಲ್ಲಿ ಹೊರ ಹಾಕಿದ್ದರು.
ನಂತರ ಸಲ್ಮಾನ್ ಮತ್ತು ಶಬರಿನ್ ಅನಾಥ ಆಶ್ರಮವೊಂದರಲ್ಲಿದ್ದರು. ನಂತರ ಸಲ್ಮಾನ್ ಪತ್ನಿಯೊಂದಿಗೆ ಸೇರಿ ಚಿಕ್ಕಪ್ಪ ಶಂಷಿಲ್ ಉದಾ ಕೊಲೆಗೆ ಸಂಚು ರೂಪಿಸಿದ್ದರು. ಕೋ-ಆಪರೇಟಿವ್ ಸೊಸೈಟಿ ನಡೆಸುತ್ತಾ ಆರ್ಥಿಕವಾಗಿ ಸುಸ್ಥಿತಿಯಲ್ಲಿದ್ದ ಶಂಷಿಲ್ ಅವರನ್ನು ಕೊಂದು ಹಣ ಮಾಡುವುದು ದಂಪತಿಗಳ ಉದ್ದೇಶವಾಗಿತ್ತು.

ಅದರಂತೆ 2013ರ ಜುಲೈ 3ರಂದು ಟ್ಯಾನರಿ ರಸ್ತೆಯ ಈದ್ಗಾ ಕಾಂಪ್ಲೆಕ್ಸ್ನಲ್ಲಿರುವ ಸೊಸೈಟಿಗೆ ಬಂದ ಇಬ್ಬರು, ಚಿಕ್ಕಪ್ಪನ ಬಳಿ ಹಣ ಕೇಳಿದ್ದರು ಕೊಡಲು ನಿರಾಕರಿಸಿದಾಗ, ಹಫೀಜ್ ಅವರಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿ, 60 ಸಾವಿರ ಹಣ ಮತ್ತು ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. [ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಕಗ್ಗೊಲೆ]
ಕೊಲೆ ನಂತರ ಹೈದರಾಬಾದ್ ಗೆ ಪರಾರಿಯಾಗಿದ್ದ ದಂಪತಿಗಳು ಚಿನ್ನವನ್ನು ಅಡವಿಟ್ಟು ಹೈದರಾಬಾದ್ ನಲ್ಲಿ ವಾಸವಾಗಿದ್ದರು. ಕೆಲವು ದಿನಗಳ ಹಿಂದೆ ಬೆಂಗಳೂರಿಗೆ ಬಂದು ಭಾರತಿನಗರದ ತಿಮ್ಮಯ್ಯ ರಸ್ತೆಯಲ್ಲಿ ನೆಲೆಸಿದ್ದರು. ಕಳೆದ ಬುಧವಾರ ತಂಗಿಯ ಮಗಳನ್ನು ಅಪಹರಿಸಿ ಕೊಲೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಈ ದಂಪತಿಗಳನ್ನು ಪೊಲೀಸರು ವಿಚಾರಣೆ ನಡೆಸಿದಾಗ ಈ ಕೊಲೆಯ ಸತ್ಯ ಬಯಲಾಗಿದೆ.
ಮುಖ್ಯಮಂತ್ರಿ ಸಂತಾಪ ಸೂಚಿಸಿದ್ದರು : ಪತ್ರಕರ್ತ ಮತ್ತು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಶಂಷಿಲ್ ಉದಾ ಸಾವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications