ಎನ್ ಡಿಟಿವಿ ಮೇಲೆ ಸಿಬಿಐ ದಾಳಿ, ಬೆಂಗಳೂರಲ್ಲಿ ಪತ್ರಕರ್ತರ ಪ್ರತಿಭಟನೆ
ಬೆಂಗಳೂರು, ಜೂನ್ 6: ಎನ್ ಡಿಟಿವಿ ಸ್ಥಾಪಕ ಪ್ರಣಯ್ ರಾಯ್ ಹಾಗೂ ಅವರ ಪತ್ನಿ ಮನೆ ಮೇಲೆ ಸಿಬಿಐ ದಾಳಿ ನಡೆಸಿರುವುದನ್ನು ಖಂಡಿಸಿ ಇಲ್ಲಿನ ಪ್ರೆಸ್ ಕ್ಲಬ್ ಹೊರಭಾಗದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ಎಂಬತ್ತರಷ್ಟು ಸಂಖ್ಯೆಯಲ್ಲಿ ಪತ್ರಕರ್ತರು, ಬರಹಗಾರರು ಹಾಗೂ ಸಾಮಾಜಿಕ ಕಾರ್ಯಕರ್ತರು ಭಾಗವಹಿಸಿದ್ದರು.
ಪತ್ರಕರ್ತರ ಮೇಲೆ ದಾಳಿಗಳು ಹೆಚ್ಚಾಗುತ್ತಿವೆ ಎಂದು ಪ್ರತಿಭಟನಾನಿರತರು ಆರೋಪಿಸಿದರು. ಜರ್ನಲಿಸ್ಟ್ ಸ್ಟಡಿ ಸೆಂಟರ್ ನಿಂದ ಪ್ರತಿಭಟನೆ ಆಯೋಜಿಸಲಾಗಿತ್ತು. ಪತ್ರಿಕಾ ಸ್ವಾತಂತ್ರ್ಯವನ್ನು ದಮನಿಸುವ ಕಾರಣಕ್ಕೆ ಸರಕಾರ ಸಿಬಿಐ ದಾಳಿ ಮಾಡಿಸುವ ನಡೆ ಇಟ್ಟಿದೆ ಎಂದು ಬಿಟಿವಿ ವರದಿಗಾರ ನವೀನ್ ಸೂರಿಂಜೆ ಆರೋಪಿಸಿದರು.[ಎನ್ಡಿಟಿವಿ ಸಂಸ್ಥಾಪಕ ಪ್ರಣಯ್ ರಾಯ್ ಮನೆ ಮೇಲೆ ಸಿಬಿಐ ದಾಳಿ]

ಖಾಸಗಿ ವ್ಯಕ್ತಿಗಳ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ. ಈ ರೀತಿ ಹಿಂದೆಂದೂ ನಡೆದಿರಲಿಲ್ಲ ಎಂದರು.
ಖಾಸಗಿ ಸಾಲಕ್ಕೆ ಸಂಬಂಧಿಸಿದಂತೆ ಸಿಬಿಐ ಮಧ್ಯಪ್ರವೇಶ ಮಾಡಿರುವುದು ಇತ್ತೀಚಿನ ಸಮಯದಲ್ಲಿ ಇದೇ ಮೊದಲು. ಈ ಪ್ರಕರಣದ ಹಣಕಾಸು ಆಯಾಮದ ಬಗ್ಗೆ ನಾವು ಪ್ರಶ್ನಿಸುತ್ತಿಲ್ಲ. ಆದರೆ ಬಿಜೆಪಿಯು ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಬರಹಗಾರ ಶ್ರೀಪಾದ ಭಟ್ ಆರೋಪಿಸಿದ್ದಾರೆ.
ಎನ್ ಡಿಟಿವಿಯಲ್ಲಿ ಈಚೆಗೆ ನಡೆದ ಪ್ಯಾನಲ್ ಡಿಸ್ಕಷನ್ ವೇಳೆ ಬಿಜೆಪಿಯ ಸಂಬಿತ್ ಪಾತ್ರ ಆ ಚಾನಲ್ ಅನ್ನು ಕಾಂಗ್ರೆಸ್ ಜತೆ ನಂಟು ಹೊಂದಿರುವುದಾಗಿ ಆರೋಪಿಸಿದ್ದರು. ಆಗ ಕಾರ್ಯಕ್ರಮ ನಡೆಸಿಕೊಡುತ್ತಿದ್ದ ನಿಧಿ ರಜ್ದಾನ್ ಅವರು ಪಾತ್ರರನ್ನು ಎದ್ದು ಹೊರನಡೆಯುವಂತೆ ಹೇಳಿದ್ದರು.
ಆ ಹಿನ್ನೆಲೆಯಲ್ಲಿ ಈ ದಾಳಿ ನಡೆದಿರಬಹುದು ಎಂದು ಶ್ರೀಪಾದ್ ಹೇಳಿದರು. ಎರಡು ವರ್ಷಗಳ ಹಿಂದೆ ಎಲ್ ಕೆ ಅಡ್ವಾಣಿ ಅವರು ತುರ್ತು ಪರಿಸ್ಥಿತಿ ಮರುಕಳಿಸುವ ಬಗ್ಗೆ ಎಚ್ಚರಿಸಿದ್ದರು. ಅರುಣ್ ಶೌರಿ ಅವರು ಕೂಡ ಪತ್ರಕರ್ತರು ಧ್ವನಿ ಎತ್ತಲು ಇದು ಸರಿಯಾದ ಸಮಯ ಎಂದಿದ್ದರು ಎಂಬುದನ್ನು ಸ್ಮರಿಸಿದರು.
ಬರಹಗಾರ ಶ್ರೀಧರ್ ಪ್ರಭು, ಸಾಮಾಜಿಕ ಕಾರ್ಯಕರ್ತರಾದ ವಿದ್ಯಾ ದಿನಕರ್, ದಿನೇಶ್ ಅಮಿನ್ ಮಟ್ಟು ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications