ಪತ್ರಕರ್ತರಿಗೆ ಜೈಲು ಶಿಕ್ಷೆ ಪ್ರಕರಣದ ವಿರುದ್ಧ ಶನಿವಾರ ಪ್ರತಿಭಟನೆ
ಬೆಂಗಳೂರು, ಜೂನ್ 30: ಪತ್ರಕರ್ತರಿಬ್ಬರಿಗೆ ಜೈಲು ಶಿಕ್ಷೆ ವಿಧಿಸಿದ ಶಾಸನಸಭೆಯ ತೀರ್ಮಾನದ ಕುರಿತು ಕಳವಳ ವ್ಯಕ್ತಪಡಿಸಿರುವ ರಾಜ್ಯದ ವಿವಿಧ ಮಾಧ್ಯಮಗಳ ಸಂಘಟನೆಗಳು, ತಕ್ಷಣವೇ ಈ ತೀರ್ಮಾನವನ್ನು ಹಿಂಪಡೆಯುವಂತೆ ಆಗ್ರಹಿಸಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಲು ನಿರ್ಧರಿಸಿವೆ.
ಶನಿವಾರ ಪತ್ರಿಕಾ ದಿನಾಚರಣೆ ನಡೆಯಲಿರುವ ಹಿನ್ನೆಲೆಯಲ್ಲಿ ಪತ್ರಕರ್ತರು ಕಪ್ಪು ಪಟ್ಟಿ ಧರಿಸಿ ಸಾಂಕೇತಿಕವಾಗಿ ಪ್ರತಿಭಟಿಸಲಿದ್ದು, ತಕ್ಷಣವೇ ಸಮಸ್ಯೆಯನ್ನು ಪರಿಹರಿಸುವಂತೆ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ.

ಬೆಂಗಳೂರಿನ ಕಂದಾಯ ಭವನದಲ್ಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಸಭೆಯಲ್ಲಿ ಭಾಗವಹಿಸಿದ್ದ ಬೆಂಗಳೂರು ಪ್ರೆಸ್ ಕ್ಲಬ್, ಬೆಂಗಳೂರು ವರದಿಗಾರರ ಕೂಟ, ಟಿವಿ ಜರ್ನಲಿಸ್ಟ್ ಅಸೋಸಿಯೇಷನ್, ಹಿರಿಯಪತ್ರಕರ್ತರ ವೇದಿಕೆ ಸೇರಿದಂತೆ ಹಲ ಸಂಘಟನೆಗಳು ಪತ್ರಕರ್ತರಿಬ್ಬರಿಗೆ ಜೈಲು ಶಿಕ್ಷೆ ವಿಧಿಸಿದ ಬೆಳವಣಿಗೆಯ ಕುರಿತು ಆತಂಕ ವ್ಯಕ್ತಪಡಿಸಿದವು.
ಹಕ್ಕುಚ್ಯುತಿ ಸಮಿತಿಯ ಶಿಫಾರಸಿನ ಮೇಲೆ ಇಬ್ಬರು ಪತ್ರಕರ್ತರಿಗೆ ಜೈಲು ಶಿಕ್ಷೆ, ಹತ್ತು ಸಾವಿರ ರುಪಾಯಿ ದಂಡ ವಿಧಿಸಲಾಗಿದೆ. ರಾಜ್ಯದ ಇತಿಹಾಸದಲ್ಲೇ ಇದು ಮೊದಲ ಬಾರಿ ನಡೆದ ಘಟನೆ. ಇದು ಜಾರಿಯಾದರೆ ಮುಂದಿನ ದಿನಗಳಲ್ಲಿ ಜನಪ್ರತಿನಿಧಿಗಳಿರುವ ವಿವಿಧ ಹಂತದ ಸಾಂವಿಧಾನಿಕ ಸಂಸ್ಥೆಗಳು ರಾಜ್ಯದೆಲ್ಲೆಡೆ ಪತ್ರಕರ್ತರನ್ನು ಬಂಧಿಸುವ ಕ್ರಮಕ್ಕೆ ಮುಂದಾಗುವ ಸಾಧ್ಯತೆಗಳಿವೆ.
ಹೀಗಾಗಿ ಇದು ಇಬ್ಬರು ಪತ್ರಕರ್ತರ ಪ್ರಶ್ನೆಯಲ್ಲ. ಬದಲಿಗೆ ಇಡೀ ರಾಜ್ಯದ ಪತ್ರಕರ್ತರ ಹಿತದ ಪ್ರಶ್ನೆ. ಆದ್ದರಿಂದ ಇದು ಕಳವಳ ಮೂಡಿಸಿದೆ. ಹಾಗೆ ನೋಡಿದರೆ ಕರ್ನಾಟಕದಲ್ಲಿ ಶಾಸಕಾಂಗ ಹಾಗೂ ಮಾಧ್ಯಮ ರಂಗಗಳ ನಡುವೆ ಮುಂಚಿನಿಂದಲೂ ಸುಮಧುರ ಸಂಬಂಧವಿದೆ.
ಆದರೆ, ಇತ್ತೀಚಿನ ದಿನಗಳಲ್ಲಿ ಈ ಸಂಬಂಧಕ್ಕೆ ಧಕ್ಕೆಯಾಗುವಂತಹ ಆತಂಕಕಾರಿ ಬೆಳವಣಿಗೆಗಳು ನಡೆಯುತ್ತಿವೆ. ಕೆಲ ತಿಂಗಳ ಹಿಂದೆ ವಿಧಾನಸಭೆಯಲ್ಲಿ ಮಾಧ್ಯಮಗಳ ವಿರುದ್ಧ ಹಲ ಶಾಸಕರು ಕೆಂಡ ಕಾರಿದ್ದರು. ಮತ್ತು ಅದರ ಆಧಾರದ ಮೇಲೆ ಮಾಧ್ಯಮಗಳನ್ನು ನಿಯಂತ್ರಿಸಲು ಸದನ ಸಮಿತಿಯನ್ನು ರಚಿಸಲಾಯಿತು.
ಈ ಸದನ ಸಮಿತಿ ವರದಿ ನೀಡುವ ಮುನ್ನವೇ ಇಬ್ಬರು ಪತ್ರಕರ್ತರಿಗೆ ಜೈಲು ಶಿಕ್ಷೆ ವಿಧಿಸುವ ತೀರ್ಮಾನ ಪ್ರಕಟವಾಗಿದೆ. ಮುಂದಿನ ದಿನಗಳಲ್ಲಿ ಸದನ ಸಮಿತಿ ಯಾವ ರೀತಿಯ ವರದಿ ನೀಡಬಹುದು ಎಂಬುದಕ್ಕೆ ಇದು ಸಾಂಕೇತಿಕವಾಗಿದೆ. ಆ ಮೂಲಕ ಪತ್ರಕರ್ತರನ್ನು ಆತಂಕಕ್ಕೆ ತಳ್ಳಿದೆ.
ಈ ಮಧ್ಯೆ ಪತ್ರಕರ್ತರಿಗೆ ಯಾವ ವಿಧಿಯನ್ವಯ ಶಿಕ್ಷೆ ನೀಡಲಾಗಿದೆ? ಶಾಸಕಾಂಗವೇ ಶಿಕ್ಷೆ ನೀಡುವುದಾದರೆ ನ್ಯಾಯಾಂಗದ ವಿಷಯದಲ್ಲಿ ಹಸ್ತಕ್ಷೇಪ ಮಾಡಿದಂತಾಗುವುದಿಲ್ಲವೇ? ಹೀಗಾಗಿ ತಕ್ಷಣವೇ ಈ ತೀರ್ಮಾನವನ್ನು ಕೈ ಬಿಡಬೇಕು. ಇದಕ್ಕಾಗಿ ತುರ್ತು ಶಾಸನಸಭೆಯನ್ನು ಕರೆಯಬೇಕು ಎಂದು ಸಭೆ ಆಗ್ರಹಿಸಿತು.
ಇದೇ ರೀತಿ ಮುಂದಿನ ದಿನಗಳಲ್ಲಿ ಪತ್ರಕರ್ತರು ಎದುರಿಸುವ ಆತಂಕವನ್ನು ನಿವಾರಿಸುವ ಸಲುವಾಗಿ ವಿವಿಧ ಸಂಘಟನೆಗಳ ಪ್ರಮುಖರಿರುವ ಸಂಚಾಲನ ಸಮಿತಿಯನ್ನು ರಚಿಸಲು ಸಭೆ ತೀರ್ಮಾನ ಮಾಡಿತು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎನ್.ರಾಜು, ಉಪಾಧ್ಯಕ್ಷ ಶಿವಾನಂದ ತಗಡೂರ್, ಕಾರ್ಯದರ್ಶಿ ವೆಂಕಟೇಶ್, ಬೆಂಗಳೂರು ವರದಿಗಾರರ ಕೂಟದ ಉಪಾಧ್ಯಕ್ಷ ಆರ್.ಟಿ.ವಿಠ್ಠಲಮೂರ್ತಿ, ಬೆಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಸದಾಶಿವ ಶೆಣೈ, ಪ್ರಧಾನ ಕಾರ್ಯದರ್ಶಿ ಎಚ್.ವಿ.ಕಿರಣ್, ಟಿವಿ ಜರ್ನಲಿಸ್ಟ್ ಅಸೋಸಿಯೇಷನ್ ನ ರವೀಶ್ ಸೇರಿದಂತೆ ಹಲ ಪ್ರಮುಖರು ಸಭೆಯಲ್ಲಿ ಉಪಸ್ಥಿತರಿದ್ದರು.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ












Click it and Unblock the Notifications