ದೀನ ದಲಿತರ ಉದ್ಧಾರವೇ ಸಾಮಾಜಿಕ ನ್ಯಾಯ : ಅನ್ಸಾರಿ
ಸಾಮಾಜಿಕ ನ್ಯಾಯವೆಂದರೆ ದೀನ, ದಲಿತ, ಬುಡಕಟ್ಟು ಹಾಗೂ ನಿರ್ಲಕ್ಷಿತ ಸಮಾಜದ ಹಕ್ಕುಗಳನ್ನು ಎತ್ತಿಹಿಡಿಯುವುದು. ಅವರಿಗೆ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ನ್ಯಾಯ ಒದಗಿಸುವುದೇ ಆಗಿದೆ - ಹಮೀದ್ ಅನ್ಸಾರಿ.
ಬೆಂಗಳೂರು ಡಿಸೆಂಬರ್ 27 : ಸಾಮಾಜಿಕ ಅಸಮಾನತೆಯನ್ನು ತೊಡೆದು ಎಲ್ಲರಿಗೂ ಸಾಮಾಜಿಕ ನ್ಯಾಯ ಸಿಗುವಲ್ಲಿ ನ್ಯಾಯಾಂಗ ಶ್ರಮಿಸಬೇಕೆಂದು ಭಾರತದ ಗೌರವಾನ್ವಿತ ಉಪರಾಷ್ಟ್ರಪತಿ ಮಹಮ್ಮದ್ ಹಮೀದ್ ಅನ್ಸಾರಿ ಅವರು ತಿಳಿಸಿದ್ದಾರೆ.
ಭಾರತೀಯ ವಕೀಲರ ಸಂಘ ಮಂಗಳವಾರ ಶ್ರೀ ಜಗದ್ಗುರು ರೇಣುಕಾಚಾರ್ಯ ವಿದ್ಯಾ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ 9ನೇ ರಾಷ್ಟ್ರೀಯ ಸಮಾವೇಶದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.
ನ್ಯಾಯಾಂಗವು ಸಂವಿಧಾನದ ಮುಖ್ಯ ಅಂಗವಾಗಿದ್ದು, ಜನರಿಗೆ ಸಾಮಾಜಿಕ ನ್ಯಾಯ ಒದಗಿಸುವುದರ ನಿಟ್ಟಿನಲ್ಲಿ ಸಹಕರಿಸಬೇಕು. ಸಾಮಾಜಿಕ ನ್ಯಾಯವೆಂದರೆ ದೀನ, ದಲಿತ, ಬುಡಕಟ್ಟು ಹಾಗೂ ನಿರ್ಲಕ್ಷಿತ ಸಮಾಜದ ಹಕ್ಕುಗಳನ್ನು ಎತ್ತಿಹಿಡಿಯುವುದು. ಅವರಿಗೆ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ನ್ಯಾಯ ಒದಗಿಸುವುದೇ ಆಗಿದೆ ಎಂದರು. [ರಾಷ್ಟ್ರಗೀತೆಗೆ ಅಗೌರವ: ಹಮೀದ್ ಅನ್ಸಾರಿ ಕಚೇರಿ ಸ್ಪಷ್ಟನೆ]

ಜನರು ಸುಶಿಕ್ಷಿತರಾಗದೆ ಸಮಾಜ ಮುಂದುವರಿಯುವುದಿಲ್ಲ. ಲೈಂಗಿಕ ದೌರ್ಜನ್ಯ, ಜೀತ ಪದ್ಧತಿಯನ್ನು ತಡೆಯುವಲ್ಲಿ ನ್ಯಾಯಾಂಗ ಪಣ ತೊಡಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಸಕಾಲಕ್ಕೆ ಚಿಕಿತ್ಸೆ ನೀಡದಿರುವುದು ಸಹ ಅಪರಾಧವೇ ಎಂದು ಅವರು ಪ್ರತಿಪಾದಿಸಿದರು.
ಮಾನವ ಅಭಿವೃದ್ಧಿ ಪರಿವಿಡಿ ಅನ್ವಯ 188 ದೇಶಗಳಲ್ಲಿ ಭಾರತ 130 ನೇ ಸ್ಥಾನ ಪಡೆದಿದೆ. 2014ರಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ನೀಡಿರುವ ವರದಿ ಪ್ರಕಾರ 6.06 ಮಿಲಿಯನ್ ಮಕ್ಕಳು ಶಾಲೆಯಲ್ಲಿ ಹೊರ ಉಳಿದಿದ್ದು, ಅವರಲ್ಲಿ 4.6 ಮಿಲಿಯನ್ ಮಕ್ಕಳು ಪರಿಶಿಷ್ಟ ಜಾತಿ, ಪಂಗಡ ಹಾಗೂ ಅಲ್ಪಸಂಖ್ಯಾತದವರಾಗಿದ್ದಾರೆ ಎಂದವರು ನುಡಿದರು.
ಭಾರತದಲ್ಲಿ ಸಂಪತ್ತು ಸಹ ಕೆಲವರ ಪಾಲಾಗಿದ್ದು, ಸಾವಿರಾರು ಬಡವರ ಜೀವನಮಟ್ಟ ಸುಧಾರಣೆಗೊಳ್ಳಬೇಕಿದೆ. ದೇಶದಲ್ಲಿ ಜನರ ಸಾಮಾಜಿಕ, ಆರ್ಥಿಕ ಹಾಗೂ ಸಾಂಸ್ಕೃತಿಕ ಹಕ್ಕುಗಳನ್ನು ನ್ಯಾಯಯುತವಾಗಿ ಚಲಾಯಿಸಲು ನ್ಯಾಯಾಲಯಗಳಿದ್ದರೂ ಆದರಿಂದ ಜನರಿಗೆ ಸಿಗುವ ನ್ಯಾಯ ಪರಿಪೂರ್ಣವೆನಿಸಿಲ್ಲ ಎಂದು ಅವರು ವಿಷಾದಿಸಿದರು.

ನಂತರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಸಮ್ಮೇಳನವನ್ನು ನ್ಯಾಯಮೂರ್ತಿ ವಿ.ಆರ್. ಕೃಷ್ಣ ಅಯ್ಯರ್ ಅವರಿಗೆ ಸಮರ್ಪಿಸುತ್ತಿರುವುದು ಶ್ಲಾಘನೀಯ. ಈ ಸಮ್ಮೇಳನದ ಮುಖ್ಯ ವಿಷಯ ಸಾಮಾಜಿಕ ನ್ಯಾಯವಾಗಿದ್ದು, ಇದು ಶೋಷಿತ, ಕೆಳವರ್ಗದ ಜನರಿಗೆ ಒಂದು ದಿಟ್ಟ ಧ್ವನಿಯಾಗಲಿದೆ. ಸಾಮಾಜಿಕ ನ್ಯಾಯವು ಜನರಿಗೆ ಸಾಮಾಜಿಕ ಘನತೆ ಹೆಚ್ಚಿಸುವುದರ ಜೊತೆಗೆ, ಸಂಪನ್ಮೂಲ, ಉದ್ಯೋಗಾವಕಾಶ ಹಾಗೂ ಅಧಿಕಾರಗಳನ್ನು ಸಹ ಸಮಾನವಾಗಿ ಹಂಚುವ ನಿಟ್ಟಿನಲ್ಲಿ ಸಹಾಯವಾಗಲಿದೆ ಎಂದರು.
ಕಳೆದ ವರ್ಷ ಸರ್ಕಾರ ನಡೆಸಿದ ಜಾತಿಗಣತಿ ರಾಷ್ಟ್ರದಲ್ಲೇ ನಡೆಸಿದ ಪ್ರಥಮ ಜಾತಿವಾರು ಗಣತಿಯಾಗಿದ್ದು, ಇದರಿಂದ ಜನರ ಸಾಮಾಜಿಕ, ಆರ್ಥಿಕ ಸ್ಥಿತಿಯನ್ನು ತಿಳಿದುಕೊಳ್ಳುವಲ್ಲಿ ಬಹಳ ಸಹಕಾರಿಯಾಗಲಿದೆ. ಪ್ರತಿಯೊಬ್ಬ ಪ್ರಜೆಗೂ ಸಮಾಜಿಕ ನ್ಯಾಯ, ಆರ್ಥಿಕ ನ್ಯಾಯ ಒದಗಿಸುವುದು ಕ್ಲಿಷ್ಟವೆನಿಸಿದರೂ ಅದನ್ನು ಒದಗಿಸುವುಲ್ಲಿ ನ್ಯಾಯಾಂಗ ಅಧಿಕಾರಿಗಳ ಸಹಕಾರ ಅತ್ಯಗತ್ಯ ಎಂದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಕರ್ನಾಟಕ ರಾಜ್ಯಪಾಲ ವಜುಬಾಯಿ ವಾಲಾ, ನ್ಯಾಯಾಲಯ ಜನರಿಗೆ ನ್ಯಾಯ ಒದಗಿಸುವುದು ಎಷ್ಟು ಮುಖ್ಯವೋ ಸಕಾಲದಲ್ಲಿ ನ್ಯಾಯ ಒದಗಿಸುವುದು ಅಷ್ಟೇ ಮುಖ್ಯ. ವಿಳಂಬವಾದರೆ ನ್ಯಾಯವು ಸತ್ತಂತೆ. ಸರ್ಕಾರಗಳ ಶೇ 70ರಷ್ಟು ಪ್ರಕರಣಗಳು ವಿವಿಧ ನ್ಯಾಯಾಲಯಗಳಲ್ಲಿ ನಡೆಯುತ್ತಿದ್ದು, ಲೋಕ್ ಅದಾಲತ್ ಅನ್ನು ಸರ್ಕಾರಿ ಪ್ರಕರಣಗಳಿಗೂ ವಿಸ್ತರಿಸಬೇಕು. ಕೋರ್ಟು ಮೆಟ್ಟಿಲೇರಿದ ಪ್ರತಿಯೊಬ್ಬರಿಗೂ ಸಾಮಾಜಿಕ ನ್ಯಾಯ ಸಿಗಬೇಕೆಂದರು.
ಕಾರ್ಯಕ್ರಮದಲ್ಲಿ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಟಿ.ಬಿ. ಜಯಚಂದ್ರ, ಸರ್ವೋಚ್ಚ ನ್ಯಾಯಾಲಯದ ಹಿರಿಯ ವಕೀಲರುಗಳಾದ ಆರ್.ಎಸ್. ಚೀಮಾ, ಪಿ.ಪಿ. ರಾವ್, ಭಾರತೀಯ ವಕೀಲರ ಸಂಘದ ಅಧ್ಯಕ್ಷರಾದ ಜಿತೇಂದ್ರ ಶರ್ಮಾ ಅವರು ಉಪಸ್ಥಿತರಿದ್ದರು.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ












Click it and Unblock the Notifications