ಪದ್ಮಾವತಿ ಸಾವು : ವಿಐಪಿ ಚಿತ್ರ ತಂಡದ ವಿರುದ್ಧ ಪ್ರಕರಣ ದಾಖಲು
ಕ್ರೇಜಿ ಸ್ಟಾರ್ ರವಿಚಂದ್ರನ್ ಅವರ ಪುತ್ರ ಮನೋರಂಜನ್ ಅಭಿನಯದ 'ವಿಐಪಿ' ಚಿತ್ರದ ಚಿತ್ರೀಕರಣದ ಸಂದರ್ಭದಲಿ ಸಹನಟಿಯೊಬ್ಬರು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಚಿತ್ರತಂಡದ ವಿರುದ್ಧ ಪ್ರಕರಣ ದಾಖಲಾಗಿದೆ.
ಬೆಂಗಳೂರು, ಜನವರಿ 10 : ಕ್ರೇಜಿ ಸ್ಟಾರ್ ರವಿಚಂದ್ರನ್ ಅವರ ಪುತ್ರ ಮನೋರಂಜನ್ ಅಭಿನಯದ 'ವಿಐಪಿ' ಚಿತ್ರದ ಚಿತ್ರೀಕರಣದ ಸಂದರ್ಭದಲಿ ಸಹನಟಿಯೊಬ್ಬರು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಚಿತ್ರತಂಡದ ವಿರುದ್ಧ ಪ್ರಕರಣ ದಾಖಲಾಗಿದೆ.
ಜ್ಯೂನಿಯರ್ ಆರ್ಟಿಸ್ಟ್ ಪದ್ಮಾವತಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ನಂದ ಕಿಶೋರ್ ಸೇರಿದಂತೆ ಏಳು ಜನರ ವಿರುದ್ಧ ನಿರ್ಲಕ್ಷ್ಯ, ಜಾತಿನಿಂದನೆ ಪ್ರಕರಣ ದಾಖಲಾಗಿದೆ.

ತಮಿಳಿನ ಯಶಸ್ವಿಯಾದ ಧನುಷ್ ಅಭಿನಯದ 'ವೇಲೈ ಇಲ್ಲಾದ ಪಟ್ಟಧಾರಿ' (ವಿಐಪಿ) ಚಿತ್ರ ಕನ್ನಡ ರಿಮೇಕ್ ನಲ್ಲಿ ರವಿಚಂದ್ರನ್ ಅವರ ಪುತ್ರ ಮನೋರಂಜನ್ ಹೀರೋ ಆಗಿದ್ದಾರೆ. ನಂದಕಿಶೋರ್ ನಿರ್ದೇಶಿಸುತ್ತಿರುವ 'ವಿಐಪಿ' ಚಿತ್ರದ ಶೂಟಿಂಗ್, ಬೆಂಗಳೂರಿನ ಹೊರವಲಯದಲ್ಲಿರುವ ರಾಜಾನುಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯ ಅವಲಹಳ್ಳಿ ಬಳಿ ನಡೆಯುವಾಗ ಈ ದುರಂತ ಸಂಭವಿಸಿತ್ತು.
ಪ್ರೇಸ್ಟಿಜ್ ಸಂಸ್ಥೆಗೆ ಸೇರಿರುವ ನಿರ್ಮಾಣ ಹಂತದ ಕಟ್ಟಡದಲ್ಲಿ ಚಿತ್ರೀಕರಣ ನಡೆಸಲು ಅನುಮತಿ ಕೂಡಾ ಪಡೆದಿರಲಿಲ್ಲ ಎನ್ನಲಾಗಿದೆ. ಮೃತ ಪದ್ಮಾವತಿ ಅವರ ತಾಯಿ ಲಕ್ಷ್ಮಮ್ಮ ನೀಡಿದ ದೂರಿನ ಮೇರೆಗೆ ಚಿತ್ರದ ನಿರ್ದೇಶಕ, ಛಾಯಾಗ್ರಾಹಕ ಸತ್ಯ ಹೆಗ್ಡೆ, ಯೂನಿಟ್ ಮ್ಯಾನೇಜರ್ ಸೇರಿದಂತೆ ಏಳು ಜನರ ವಿರುದ್ಧ ಐಪಿಸಿ ಸೆಕ್ಷನ್ 143, 304 ಸೇರಿದಂತೆ ವಿವಿಧ ಸೆಕ್ಷನ್ ಗಳಡಿಯಲ್ಲಿ ಪ್ರಕರಣ ದಾಖಲಾಗಿದೆ.
ಪದ್ಮಾವತಿ ಅವರು ಚಿತ್ರೀಕರಣದ ಸಮಯದಲ್ಲೇ ಬಿದ್ದು ಸತ್ತಿದ್ದಾರಾ? ಅಥವಾ ಚಿತ್ರತಂಡ ಶೂಟಿಂಗ್ ಮುಗಿಸಿ ಹೊರಟಮೇಲೆ ಈ ಅವಘಡ ನಡೆದಿದೆಯಾ? ಎಂಬ ಯಾವ ಮಾಹಿತಿಯೂ ಇನ್ನೂ ಹೊರಬಂದಿಲ್ಲ.ಆದರೆ, ಘಟನೆ ನಡೆದ ಬಳಿಕವೂ ಚಿತ್ರಕ್ಕೆ ಸಂಬಂಧಿಸಿದವರು ಮೃತ ಪದ್ಮಾವತಿ ಅವರ ಕುಟುಂಬದವರನ್ನು ಮಾತನಾಡಿಸಲು ಬಂದಿಲ್ಲ ಎಂಬ ಆರೋಪವಿದೆ.(ಒನ್ಇಂಡಿಯಾ ಸುದ್ದಿ)
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications