ಪತ್ನಿ ಕಿರುಕುಳಕ್ಕೆ ಬೇಸತ್ತು ಬೆಂಗಳೂರು ಟೆಕ್ಕಿ ಆತ್ಮಹತ್ಯೆ; ಗಂಡಸರ ಕಷ್ಟ ಕೇಳೋದ್ಯಾರು ಎಂದ ನೆಟ್ಟಿಗರು
ಉತ್ತರ ಪ್ರದೇಶ ಮೂಲದ ಬೆಂಗಳೂರಿನ ಪ್ರತಿಷ್ಠಿತ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಟೆಕ್ಕಿಯೊಬ್ಬರು ಪತ್ನಿ ನೀಡಿದ ಕಿರುಕುಳದಿಂದ ಬೇಸತ್ತು ಜೀವ ಕಳೆದುಕೊಂಡಿದ್ದಾರೆ. ನೇಣಿಗೆ ಶರಣಾಗುವ ಮುನ್ನ 24 ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದು ಪತ್ನಿ ಕೊಟ್ಟಿರುವ ಕಿರುಕುಳದ ಬಗ್ಗೆ ಎಲ್ಲಾ ಮಾಹಿತಿ ನೀಡಿದ್ದಾರೆ. ಘಟನೆ ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದ್ದು, ಈ ದೇಶದಲ್ಲಿ ಗಂಡಸರನ್ನು ಕಾಪಾಡಲೂ ಕಾನೂನೇ ಇಲ್ಲ ಎಂದು ಆಕ್ರೋಶ ವ್ಯಕ್ತವಾಗುತ್ತಿದೆ.
ಟೆಕ್ ಉದ್ಯಮಿ 34 ವರ್ಷದ ಅತುಲ್ ಸುಭಾಷ್ ಬೆಂಗಳೂರಿನ ಮಾರತ್ತಹಳ್ಳಿಯ ತಮ್ಮ ಮನೆಯಲ್ಲಿ ನೇಣಿಗೆ ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ನೇಣಿಗೆ ಶರಣಾಗುವ ಮುನ್ನ ಎಕ್ಸ್ನಲ್ಲಿ "ಭಾರತದಲ್ಲಿ ಪುರುಷರ ಮೇಲೆ ಕಾನೂನುಬದ್ಧ ನರಮೇಧ ನಡೆಯುತ್ತಿದೆ" ಎಂದು ಬರೆದಿದ್ದಾರೆ. ಬಳಿಕ ಆ ಪೋಸ್ಟ್ ಡಿಲೀಟ್ ಮಾಡಿದ್ದಾರೆ.

24 ಪುಟಗಳ ಡೆತ್ನೋಟ್
ಖಾಸಗಿ ಸಂಸ್ಥೆಯೊಂದರಲ್ಲಿ ಉನ್ನತ ಹುದ್ದೆಯಲ್ಲಿದ್ದ ಅತುಲ್ ಸುಭಾಷ್, ಪತ್ನಿ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತಿದ್ದರು. ತನ್ನ ಪತ್ನಿ ಮತ್ತು ಆಕೆಯ ಕುಟುಂಬ ನೀಡಿದ ಕಿರುಕುಳದ ಬಗ್ಗೆ 24 ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪತ್ನಿಯಿಂದ ದೂರವಾಗಿ ಒಂಟಿಯಾಗಿದ್ದ ಅತುಲ್ ಸುಭಾಷ್, ವೈವಾಹಿಕ ಜೀವನದಿಂದ ಜೀವನದಲ್ಲಿ ಜಿಗುಪ್ಸೆಗೊಂಡಿದ್ದರು. ಇತ್ತೀಚೆಗೆ ಆತನ ಪತ್ನಿ ಉತ್ತರ ಪ್ರದೇಶದಲ್ಲಿ ಸುಭಾಷ್ ವಿರುದ್ಧ ಕೌಟುಂಬಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದರು. ಇದರಿಂದ ಸುಭಾಷ್ ತುಂಬಾ ನೊಂದಿದ್ದರು ಎಂದು 'ದಿ ಹಿಂದೂ' ವರದಿ ಮಾಡಿದೆ.
ನ್ಯಾಯ ಸಿಗಬೇಕು ಎಂದ ಅತುಲ್
ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದರು. ತನಗಾದ ಅನ್ಯಾಯದ ಬಗ್ಗೆ ಜಗತ್ತಿಗೆ ತಿಳಿಸಲು ಅವರು ಎಲ್ಲಾ ರೀತಿ ಪ್ರಯತ್ನ ಮಾಡಿದ್ದಾರೆ. ತಾವು ಬರೆದಿದ್ದ ಡೆತ್ ನೋಟ್ ಅನ್ನು ಹಲವು ವ್ಯಕ್ತಿಗಳಿಗೆ ಇಮೇಲ್ ಮಾಡಿದ್ದಾರೆ. ತಮಗಾದ ಅನ್ಯಾಯದ ಬಗ್ಗೆ ವಿಡಿಯೋ ಹಂಚಿಕೊಂಡಿದ್ದಾರೆ. ತಮಗೆ ಪರಿಚಯವಿದ್ದ ಎನ್ಜಿಒನ ವಾಟ್ಸಾಪ್ ಗ್ರೂಪ್ನಲ್ಲಿ ಕೂಡ ಅದನ್ನು ಹಂಚಿಕೊಂಡಿದ್ದು, ತಮ್ಮ ಮನೆಯಲ್ಲಿ ನ್ಯಾಯ ಸಿಗಬೇಕು ಎನ್ನುವ ಫಲಕ ನೇತುಹಾಕಿದ್ದಾರೆ.
ಆತ್ಮಹತ್ಯೆಗೆ ಮುನ್ನ ತಮ್ಮ ಡೆತ್ ನೋಟ್, ವಾಹನದ ಕೀಗಳು ಮತ್ತು ತಾವು ಪೂರ್ತಿ ಮಾಡಿರುವ ಮತ್ತು ಬಾಕಿ ಉಳಿಸಿರುವ ಕೆಲಸಗಳನ್ನು ಪಟ್ಟಿ ಮಾಡಿದ್ದು, ಅದರ ವಿವರವನ್ನು ಬೀರು ಮೇಲೆ ಅಂಟಿಸಿದ್ದಾರೆ.
ಪ್ರಕರಣ ದಾಖಲು
ಪ್ರಕರಣದ ಬಗ್ಗೆ ಮಾಹಿತಿ ನೀಡಿರುವ ಹಿರಿಯ ಪೊಲೀಸ್ ಅಧಿಕಾರಿ ಅಕ್ಕ ಪಕ್ಕದ ಮನೆಯವರ ದೂರಿನ ಆಧಾರದ ಮೇಲೆ ಸುಭಾಷ್ ಪತ್ನಿ ಮತ್ತು ಆಕೆಯ ಸಂಬಂಧಿಕರ ವಿರುದ್ಧ ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಿಸಲಾಗಿದೆ ಎಂದು ಖಚಿತಪಡಿಸಿರುವುದಾಗಿ ಪಿಟಿಐ ವರದಿ ಮಾಡಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡಿಂಗ್
ಅತುಲ್ ಸುಭಾಷ್ ಪ್ರಕರಣದ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಚರ್ಚೆ ಹುಟ್ಟುಹಾಕಿದೆ. ಈ ದೇಶದಲ್ಲಿ ಗಂಡಸರನ್ನು ಕಾಪಾಡಲು ಕಾನೂನುಗಳೇ ಇಲ್ಲ ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಣ್ಣು ಮಕ್ಕಳಿಗೆ ಅನ್ಯಾಯವಾದರೆ ಇಡೀ ಸಮಾಜ ಅದನ್ನು ಖಂಡಿಸುತ್ತದೆ, ಪೊಲೀಸರು ಕೂಡಲೇ ಸಂಬಂಧಪಟ್ಟವರನ್ನು ಬಂಧಿಸುತ್ತಾರೆ. ಆದರೆ ಗಂಡಸರು ಶೋಷಣೆಗೆ ಒಳಗಾಗಿ ಜೀವ ಕಳೆದುಕೊಂಡರೆ ಅದರ ಬಗ್ಗೆ ಸಮಾಜ ಕೂಡ ಹೆಚ್ಚಾಗಿ ಗಮನ ಹರಿಸುವುದಿಲ್ಲ ಎಂದು ಬೇಸರ ವ್ಯಕ್ತವಾಗಿದೆ.
Helplines: COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ ಸ್ನೇಹಾ ಫೌಂಡೇಷನ್ ಸಹಾಯವಾಣಿ ಇಂತಿದೆ: 04424640050, ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ 02225521111ಗೆ ಕರೆ ಮಾಡಬಹುದು.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications