ಹಲ್ಲೆಗೊಳಗಾದ ಜ್ಯೋತಿ ಉದಯ್ ಆರೋಗ್ಯದಲ್ಲಿ ಸುಧಾರಣೆ
ಬೆಂಗಳೂರು, ನ. 20 : ಮಂಗಳವಾರ ಕಾರ್ಪೋರೇಷನ್ ಬ್ಯಾಂಕ್ನ ಎಟಿಎಂನಲ್ಲಿ ಹಲ್ಲೆಗೊಳಗಾಗಿದ್ದ ಕಾರ್ಪೋರೇಷನ್ ಬ್ಯಾಂಕ್ನ ವ್ಯವಸ್ಥಾಪಕಿ ಜ್ಯೋತಿ ಉದಯ್ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಎಂದು ಬಿಜಿಎಸ್ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ. ಜ್ಯೋತಿ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಕೆಲವು ದಿನಗಲ್ಲಿ ಸುಧಾರಿಸಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ಬುಧವಾರ ಬಿಜಿಎಸ್ ಆಸ್ಪತ್ರೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಆಸ್ಪತ್ರೆಯ ವಿಭಾಗದ ಮುಖ್ಯಸ್ಥ ಡಾ.ಎನ್.ಕೆ.ವೆಂಕಟರಮಣ, ಮಂಗಳವಾರ ಜ್ಯೋತಿ ಅವರನ್ನು ಆಸ್ಪತ್ರೆಗೆ ಕರೆ ತಂದಾಗ ಅವರು ಅಧಿಕ ರಕಸ್ತಸ್ರಾವದಿಂದ ಬಳಲುತ್ತಿದ್ದರು. ಬುಧವಾರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದೆ ಎಂದು ಹೇಳಿದರು.

ಮಚ್ಚಿನಿಂದ ಹಲ್ಲೆ ಮಾಡಿದ್ದರಿಂದ ಜ್ಯೋತಿ ಅವರ ತಲೆಗೆ ಪೆಟ್ಟಾಗಿತ್ತು. ತಲೆಯ ಭಾಗದ ಒಂದು ಮೂಳೆ ಮರಿದು ಮೆದುಳಿಗೆ ಚುಚ್ಚಿಕೊಂಡಿತ್ತು. ಸದ್ಯ ಅದನ್ನು ಶಸ್ತ್ರ ಚಿಕಿತ್ಸೆ ಮೂಲಕ ತೆಗೆದಿದ್ದೇವೆ ಎಂದು ತಿಳಿಸಿದರು. ಜ್ಯೋತಿ ಅವರು ಬಲಗೈ, ಬಲಗಾಲು ಸ್ವಾಧೀನ ಕಳೆದುಕೊಂಡಿದ್ದಾರೆ. ಅವರ ಮೂಗು ಮತ್ತು ತುಟಿಯ ಮೇಲ್ಭಾಗ ತುಂಡಾಗಿತ್ತು. ಪ್ಲಾಸ್ಟಿಕ್ ಸರ್ಜರಿ ನಡೆಲಾಗಿದೆ ಎಂದು ವೆಂಕಟರಮಣ ತಿಳಿಸಿದರು.
ಔರಾದ್ಕರ್ ಭೇಟಿ : ಬೆಂಗಳೂರು ಪೊಲೀಸ್ ಆಯುಕ್ತ ರಾಘವೇಂದ್ರ ಔರಾದ್ಕರ್ ಅವರು ಬುಧವಾರ ಬಿಜಿಎಸ್ ಆಸ್ಪತ್ರೆಗೆ ಭೇಟಿ ನೀಡಿ ಜ್ಯೋತಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದರು. ನಂತರ ಮಾತನಾಡಿದ ಅವರು, ಜ್ಯೋತಿ ಅವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದರಿಂದ ಸ್ಥಿತಿ ಗಂಭೀರವಾಗಿತ್ತು. ಆದರೆ ಈಗ ಅವರ ಆರೋಗ್ಯದಲ್ಲಿ ಅಲ್ಪ ಪ್ರಮಾಣದ ಚೇತರಿಗೆ ಕಾಣಿಸುತ್ತಿದೆ. ತೀವ್ರ ರಕ್ತ ಸ್ರಾವದಿಂದಾಗಿ ಅವರು ಮಾತನಾಡಲು ಸಾಧ್ಯವಾಗುತ್ತಿಲ್ಲ ಎಂದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಯ ಪತ್ತೆಗಾಗಿ ಹಲವು ಪೊಲೀಸ್ ತಂಡಗಳನ್ನು ರಚಿಸಲಾಗಿದ್ದು, ಬೇರೆ ರಾಜ್ಯಗಳಿಗೂ ಸಹ ಪೊಲೀಸರ ತಂಡವನ್ನು ರವಾನಿಸಲಾಗಿದೆ ಎಂದು ಔರಾದ್ಕರ್ ತಿಳಿಸಿದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications