'ತೇಜಸ್ವಿ ವಿಸ್ಮಯ' ಆನ್ ಲೈನ್ ರಸಪ್ರಶ್ನೆಯಲ್ಲಿ ಗೆದ್ದವರು ಗೊತ್ತಾಯ್ತಾ?
ಬೆಂಗಳೂರು, ಸೆಪ್ಟೆಂಬರ್ 3: ಫೇಸ್ ಬುಕ್ ನಲ್ಲಿ "ಪೂರ್ಣಚಂದ್ರ ತೇಜಸ್ವಿ" (www.fb.com/PCTejaswi) ಪುಟವನ್ನು ನಡೆಸುತ್ತಿರುವ ತಂಡದವರು ತೇಜಸ್ವಿಯವರ ಹುಟ್ಟು ಹಬ್ಬದ ಸವಿ ನೆನಪಿಗಾಗಿ ಸೆಪ್ಟೆಂಬರ್ 1ರಂದು ನಡೆಸಿದ 'ತೇಜಸ್ವಿ ವಿಸ್ಮಯ' ಆನ್ ಲೈನ್ ಸ್ಪರ್ಧೆಯಲ್ಲಿ ವಿಜೇತರಾದವರ ವಿವರ ಹೀಗಿದೆ.

1ನೇ ಬಹುಮಾನ: ಅರುಣ್ ಪ್ರಭು ಬಿ. ಮೂಲತಃ ಮಂಡ್ಯ ಜಿಲ್ಲೆಯವರು, 5 ವರ್ಷಗಳ ಕಾಲ 'ಕರ್ನಾಟಕ ರಾಜ್ಯ ಪೋಲೀಸ್' ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ, ಈಗ ಸಮಾಜ ಕಲ್ಯಾಣ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದಾರೆ ಮತ್ತು ಬೆಂಗಳೂರಿನಲ್ಲಿ ನೆಲೆಸಿದ್ದಾರೆ.
2ನೇ ಬಹುಮಾನ: ಮಲ್ಲಿಕಾರ್ಜುನ್ ಬಿ ಎನ್. ಮೂಲತಃ ಹಾಸನ ಜಿಲ್ಲೆ ಚನ್ನರಾಯಪಟ್ಟಣದವರು, ಚಲನಚಿತ್ರ ನಿರ್ದೇಶಕರು, ಬೆಂಗಳೂರಿನಲ್ಲಿ ನೆಲೆಸಿದ್ದಾರೆ. 3ನೇ ಬಹುಮಾನ: ಸ್ವಾತಿ ಕೆ.ಎಚ್. ಮೂಲತಃ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನವರು, ಐ ಟಿ ಉದ್ಯೋಗಿ, ಬೆಂಗಳೂರಿನಲ್ಲಿ ನೆಲೆಸಿದ್ದಾರೆ.[ತೇಜಸ್ವಿ ಮಾಯಾಲೋಕದಿ ಅವಿರತವಾಗಿ ಕೇಳಿಕಥೆಯ]
ವೆಂಕಟೇಶ್ ಬಿ.ಎಮ್. ನಿಮ್ಹಾನ್ಸ್ ಸಂಸ್ಥೆಯಲ್ಲಿ ಮೇಲ್ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಮತ್ತು ಬೆಂಗಳೂರಿನಲ್ಲಿ ನೆಲೆಸಿದ್ದಾರೆ.
ರವಿಕುಮಾರ್ ಸಿ.ಎಸ್. ಮತ್ತು ನಂದೀಶ ಶೆಟ್ಟಿ ಅವರಿಗೆ ಸಮಾಧಾನಕರ ಬಹುಮಾನ ದೊರೆತಿದೆ. ರಸಪ್ರಶ್ನೆ ಸ್ಪರ್ಧೆಯಲ್ಲಿ 200 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ತೇಜಸ್ವಿ ಜೀವನ, ಸಾಹಿತ್ಯ ಮತ್ತು ವಿಚಾರಗಳು ಎಂಬ ಮೂರು ವಿಭಾಗಗಳನ್ನು ಒಳಗೊಂಡ 30 ಪ್ರಶ್ನೆಗಳನ್ನು ರಸಪ್ರಶ್ನೆ ಒಳಗೊಂಡಿತ್ತು. ಐವತ್ತಕ್ಕೂ ಹೆಚ್ಚು ಜನರು ಬಹುತೇಕ ಪ್ರಶ್ನೆಗಳಿಗೆ ಸರಿಯುತ್ತರವನ್ನು ನೀಡಿದ್ದಾರೆ.[ಕೆಪಿ ಪೂರ್ಣಚಂದ್ರ ತೇಜಸ್ವಿ ಸ್ಮಾರಕ ಲೋಕಾರ್ಪಣೆ]
ಮಂಡ್ಯ, ಬೆಂಗಳೂರು, ತುಮಕೂರು, ಉಡುಪಿ, ಚಿಕ್ಕಮಗಳೂರು, ಹಾವೇರಿ, ಬಾಗಲಕೋಟೆ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಿಂದ ಜನರು ಭಾಗವಹಿಸಿದ್ದರು. ವಿದ್ಯಾರ್ಥಿಗಳು, ಸಿನೆಮಾ ರಂಗದವರು, ಸರ್ಕಾರಿ ಕೆಲಸದವರು, ಐಟಿ ಉದ್ಯೋಗಿಗಳು ಹೀಗೆ ಹಲವಾರು ಕ್ಷೇತ್ರದ ಮಂದಿ ರಸಪ್ರಶ್ನೆಯಲ್ಲಿ ಭಾಗವಹಿಸಿದ್ದು ವಿಶೇಷ. ರಸಪ್ರಶ್ನೆಯಲ್ಲಿ ಗೆದ್ದವರಿಗೆ ತೇಜಸ್ವಿ ಬರಹವಿರುವ ಟೀ-ಶರ್ಟ್ ಹಾಗೂ ತೇಜಸ್ವಿ ಪುಸ್ತಕಗಳನ್ನು ಬಹುಮಾನವಾಗಿ ನೀಡಲಾಗುತ್ತದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications