'ಕಾಲಾ' ಚಿತ್ರಕ್ಕೆ ಬೆಂಗಳೂರಲ್ಲಿ ಹಿನ್ನಡೆ, ಮಾಲ್ಗಳಲ್ಲಿ ಪ್ರದರ್ಶನ ಸಾಧ್ಯತೆ
ಬೆಂಗಳೂರು, ಜೂನ್ 07: ಇಂದು ರಜನೀಕಾಂತ್ ಅಭಿನಯದ 'ಕಾಲಾ' ಚಿತ್ರ ಬಿಡುಗಡೆ ಆಗಿದ್ದು, ಬೆಂಗಳೂರಿನಲ್ಲಿ ಎಲ್ಲಾ ಮಾಲ್ಗಳು ಹಾಗೂ ಪ್ರಮುಖ ಚಿತ್ರಮಂದಿರಗಳಿಗೆ ಬಿಗಿ ಭದ್ರತೆ ನೀಡಲಾಗಿದೆ.
ಬೆಳಿಗ್ಗೆ 10 ಗಮಟೆ ವರೆಗೂ ಬೆಂಗಳೂರಿನ ಯಾವುದೇ ಚಿತ್ರಮಂದಿರಗಳಲ್ಲಿ ಕಾಲಾ ಪ್ರದರ್ಶನ ಕಂಡಿರಲಿಲ್ಲ. ಆದರೆ ಮಂತ್ರಿ ಮಾಲ್, ಲಿಡೋ ಥಿಯೇಟರ್, ಗರುಡಾ ಮಾಲ್ನಲ್ಲಿ 'ಕಾಲಾ' ಚಿತ್ರ ಪ್ರದರ್ಶನ ಮಾಡುವ ಸಾಧ್ಯತೆ ಇದೆ. ಹಾಗಾಗಿ ಈ ಮಾಲ್ಗಳಿಗೆ ಭಾರಿ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ.
ಟ್ರಿನಿಟಿ ವೃತ್ತದ ಲಿಡೋ ಚಿತ್ರಮಂದಿರದಲ್ಲಿ 'ಕಾಲಾ' ಚಿತ್ರದ ಪ್ರದರ್ಶನ ಮಾಡಲಾಗುತ್ತದೆ ಎಂಬ ಮಾಹಿತಿ ಇದ್ದ ಕಾರಣ ಕನ್ನಡ ಸಂಘಟನೆ ಹೋರಾಟಗಾರರು ಚಿತ್ರಮಂದಿರದ ಮುಂದೆ ಪ್ರತಿಭಟನೆ ಮಾಡಿದರು. ಈ ಸಮಯದಲ್ಲಿ ರಜನೀಕಾಂತ್ ಅಭಿಮಾನಿಗಳು ಹಾಗೂ ಸಂಘಟನೆ ಸದಸ್ಯರ ಜೊತೆಗೆ ವಾಗ್ವಾದ ನಡೆಯಿತು.

ಲಿಡೋದಲ್ಲಿ ಕಾಲಾ ಚಿತ್ರಕ್ಕೆ ಈಗಾಗಲೇ ಟಿಕೆಟ್ ಸಹ ವಿತರಣೆ ಮಾಡಲಾಗಿದೆ ಎಂಬ ಮಾಹಿತಿ ಇದೆ. ಲಿಡೋ ಚಿತ್ರದ ಮುಂದೆ ಪ್ರತಿಭಟನೆಗಳು ಜೋರಾಗಿದ್ದು ಪೊಲೀಸರು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ.
ತಮಿಳು ಚಿತ್ರಗಳನ್ನು ಹೆಚ್ಚಾಗಿ ಪ್ರದರ್ಶಿಸುವ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಾದ ಊರ್ವಶಿ, ನಟರಾಜ, ಸಂಪಿಗೆ, ವಿನಾಯಕ ಚಿತ್ರಮಂದಿರಗಳಲ್ಲಿ 'ಕಾಲಾ' ಪ್ರದರ್ಶನ ಮಾಡುತ್ತಿಲ್ಲ. ಆ ಚಿತ್ರಮಂದಿರಗಳಲ್ಲಿ ಬೇರೆ ಚಿತ್ರಗಳ ಪ್ರದರ್ಶನವನ್ನು ಮುಂದುವರೆಸಿವೆ.
ಬೆಂಗಳೂರಿನ ಚಿತ್ರಮಂದಿರಗಳಲ್ಲಿ 'ಕಾಲಾ'ಗೆ ಸಿಕ್ಕಿಲ್ಲ ಬಿಡುಗಡೆ ಭಾಗ್ಯ
ನಟ ರಜನೀಕಾಂತ್ ಅವರು ಕಾವೇರಿ ವಿಷಯದ ಬಗ್ಗೆ ಕನ್ನಡಿಗರಿಗೆ ನೋವಾಗುವ ರೀತಿಯಲ್ಲಿ ಹೇಳಿಕೆ ಕೊಟ್ಟಿದ್ದಾರೆಂದು ಅವರ ಅಭಿನಯದ 'ಕಾಲಾ' ಚಿತ್ರವನ್ನು ಬಿಡುಗಡೆ ಮಾಡಬಾರದೆಂದು ಕನ್ನಡಪರ ಸಂಘಟನೆಗಳು ಮತ್ತು ಇತರ ಕೆಲವು ಸಂಘಟನೆಗಳು ಹೋರಾಟ ಮಾಡುತ್ತಿವೆ.
ಕಾಲಾ ಚಿತ್ರ ಪ್ರದರ್ಶನಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದು, 1000 ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಜೊತೆಗೆ ಕೆಎಸ್ಆರ್ಪಿ ತುಕಡಿಯನ್ನೂ ಬಳಸಿಕೊಳ್ಳಲಾಗಿದೆ.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications