ಶ್ರೀನಿವಾಸ ಶೂಟೌಟ್ ಕೇಸ್ : ಇನ್ನಿಬ್ಬರು ರೌಡಿ ಶೀಟರ್ ಗಳ ಬಂಧನ
ಕಡಬಗೆರೆ ಸೀನ ಅವರ ಆಪ್ತ ಕಾಂಗ್ರೆಸ್ ಮುಖಂಡ ಟಾಟಾ ರಮೇಶ್ ಗೆ ಕೊಲೆ ಬೆದರಿಕೆ ಹಾಗೂ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಪ್ರಕರಣಕ್ಕೆ ಸಂಬಂಧಿಸಿದಂತೆ, ಗುರುವಾರದಂದು ಕೊತ್ತನೂರು ಪೊಲೀಸರು ಇಬ್ಬರು ರೌಡಿ ಶೀಟರ್ ಗಳನ್ನು ಬಂಧಿಸಿದ್ದಾರೆ
ಬೆಂಗಳೂರು, ಫೆಬ್ರವರಿ 09 : ಕಡಬಗೆರೆ ಸೀನ ಅವರ ಆಪ್ತ ಕಾಂಗ್ರೆಸ್ ಮುಖಂಡ ಟಾಟಾ ರಮೇಶ್ ಗೆ ಕೊಲೆ ಬೆದರಿಕೆ ಹಾಗೂ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಪ್ರಕರಣಕ್ಕೆ ಸಂಬಂಧಿಸಿದಂತೆ, ಗುರುವಾರದಂದು ಕೊತ್ತನೂರು ಪೊಲೀಸರು ಇಬ್ಬರು ರೌಡಿ ಶೀಟರ್ ಗಳನ್ನು ಬಂಧಿಸಿದ್ದಾರೆ ಎಂದು ಡಿಸಿಪಿ ಹರ್ಷ ಹೇಳಿದ್ದಾರೆ.
ಈ ನಡುವೆ ಈಗಾಗಲೇ ಬಂಧಿತ ರೌಡಿ ಸೈಯದ್ ಅಮಾನ್ ಅಲಿಯಾಸ್ ಬಚ್ಚನ್ ಸೇರಿ 9 ಆರೋಪಿಗಳನ್ನು ನ್ಯಾಯಾಲಯವು 14 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಸದ್ಯ ಎಲ್ಲರನ್ನು ಯಲಹಂಕ ಪೊಲೀಸರ ವಿಚಾರಣೆ ನಡೆಸಿದ್ದಾರೆ. ಅಗ್ನಿ ಶ್ರೀಧರ್ ಅವರಿಗೆ ಸಾಗರ್ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ.[ಶೂಟೌಟ್ ಕೇಸ್ : 'ಅಗ್ನಿ' ಶ್ರೀಧರ್ ಆರೋಪಿ ನಂ. 8]
ಜೀವ ಬೆದರಿಕೆ ಪ್ರಕರಣದಲ್ಲಿ ವಶಕ್ಕೆ ಪಡೆದಿದ್ದ ರೌಡಿಗಳಾದ ಕೆ.ಎಸ್.ರೋಹಿತ್ ಅಲಿಯಾಸ್ ಒಂಟೆ ಹಾಗೂ ಸುನೀಲ್ ಅಲಿಯಾಸ್ ಸೈಲೆಂಟ್ ಸುನಿ ಎಂಬಾತನನ್ನು ಯಲಹಂಕ ಪೊಲೀಸರು ಕೋರ್ಟ್ಗೆ ಹಾಜರುಪಡಿಸಿ ವಶಕ್ಕೆ ಕೋರಿದ್ದರು. ಇದಾದ ಬಳಿಕ ವಿಚಾರಣೆ ಸಂದರ್ಭದಲ್ಲಿ ರೋಹಿತ್ ಅವರು ಇನ್ನಿಬ್ಬರು ಸಹಚರರ ಬಗ್ಗೆ ಮಾಹಿತಿ ನೀಡಿದ್ದರು. ಮುಂದೇನಾಯ್ತು?..

ಒಬ್ಬ ಶೂಟರ್ ಪತ್ತೆ
ಇಲ್ಲಿ ತನಕ ಶೂಟೌಟ್ ಹಾಗೂ ಬೆದರಿಕೆ ಪ್ರಕರಣದ ಸಂಚು ರೂಪಿಸಿದವರು, ಸುಪಾರಿ ಕೊಟ್ಟವರ ಬಗ್ಗೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಆದರೆ, ಕಪ್ಪು ಬಣ್ಣದ ಪಲ್ಸರ್ ನಲ್ಲಿ ಬಂದು ಕಡಬಗೆರೆ ಸೀನನ ಮೇಲೆ ಗುಂಡಿನ ದಾಳಿ ನಡೆಸಿದವರ ಪತ್ತೆಯಾಗಿಲ್ಲ. ಬೈಕ್ ಹಿಂಬದಿ ಸವಾರ ಎಂದು ಒಬ್ಬನನ್ನು ಶಂಕಿಸಿ ವಿಚಾರಣೆ ನಡೆಸಲಾಗಿದೆ.

ಹೇಮಂತ್ ನಿಂಬಾಳ್ಕರ್ ಕರೆ
ಗುಂಪು ಕಟ್ಟಿಕೊಂಡು ಬಂದು ಬೆದರಿಕೆ ಒಡ್ಡುವವರ ವಿರುದ್ಧ ಸಾರ್ವಜನಿಕರು ಧೈರ್ಯವಾಗಿ ಸ್ಥಳೀಯ ಠಾಣೆಗೆ ದೂರು ಕೊಡಿ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ, ಇಂಥವರ ಬಗ್ಗೆ ಧೈರ್ಯವಾಗಿ ಪೊಲೀಸರಿಗೆ ತಿಳಿಸಿ ಎಂದು ನಾಗರಿಕರಿಗೆ ಎಂದು ಎಸಿಪಿ ಹೇಮಂತ್ ನಿಂಬಾಳ್ಕರ್ ಕರೆ ನೀಡಿದ್ದಾರೆ.

ಕೇಬಲ್ ಕುಮಾರ ಹಾಗೂ ಲಕ್ಕಸಂದ್ರ ವಿಜಿ ಬಂಧಿತರು
ಕಡಬಗೆರೆ ಶ್ರೀನಿವಾಸ್ ಶೂಟೌಟ್ ಘಟನೆ ನಂತರ ರೋಹಿತ್ ಅಲಿಯಾಸ್ ಒಂಟೆ ಸಹಚರರಾದ ವಿಜಿ ಹಾಗೂ ಕುಮಾರ ಅವರು ಗೋವಾಕ್ಕೆ ತೆರಳಿ ತಲೆ ಮರೆಸಿಕೊಂಡಿದ್ದರು. ಗುರುವಾರ ಜಿಕೆವಿಕೆ ಬಳಿ ಬ್ಯಾಟರಾಯನಪುರದಲ್ಲಿ ಅಡ್ಡಾಡುತ್ತಿದ್ದ ಇವರನ್ನು ಪೊಲೀಸರು ಚೇಸ್ ಮಾಡಿ ಹಿಡಿದಿದ್ದಾರೆ. ಕೇಬಲ ಕುಮಾರ ಹಾಗೂ ಲಕ್ಕಸಂದ್ರ ವಿಜಿ ಬಳಿ ಇದ್ದ ಮಾರಾಕಾಸ್ತ್ರಗಳನ್ನು ಕೊತ್ತನೂರು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಚ್ಚನ್ ಗ್ಯಾಂಗ್ ಎಲ್ಲಿದೆ?
ಜೀವ ಬೆದರಿಕೆ ಪ್ರಕರಣದಲ್ಲಿ ವಶಕ್ಕೆ ಪಡೆದಿದ್ದ ರೌಡಿಗಳಾದ ಕೆ.ಎಸ್.ರೋಹಿತ್ ಅಲಿಯಾಸ್ ಒಂಟೆ ಹಾಗೂ ಸುನೀಲ್ ಅಲಿಯಾಸ್ ಸೈಲೆಂಟ್ ಸುನಿ ಎಂಬಾತನನ್ನು ಯಲಹಂಕ ಪೊಲೀಸರು ಕೋರ್ಟ್ಗೆ ಹಾಜರುಪಡಿಸಿ ವಶಕ್ಕೆಪಡೆದಿದ್ದಾರೆ.
ಅದೇ ರೀತಿ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹ ಆರೋಪದಡಿ ಕೆ.ಎಸ್. ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದ ಸೈಯದ್ ಅಲಿಯಾಸ್ ಬಚ್ಚನ್ ಹಾಗೂ ಆತನ ಸಹಚರರಾದ ಬ್ರಿಜ್ಭೂಷಣ್ ಹುಸೇನ್ ಪಾಂಡೆ, ರಾಮ್ ಕುಮಾರ್ ರಾಯ್, ಸಾಬೀರ್ ಅಲಿ, ತನ್ವೀರ್, ಅರುಣ್ಕುಮಾರ್, ವರುಣ್ಕುಮಾರ್ನನ್ನು 14 ದಿನಗಳ ಕಾಲ ಕಸ್ಟಡಿಗೆ ನೀಡಿದೆ.
-
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications