ಕಡಲೆಕಾಯಿ ಪರಿಷೆ, ಬಿಡ್ ಕೂಗಿದ್ದ ವ್ಯಕ್ತಿ ನಾಪತ್ತೆ!
ಬೆಂಗಳೂರು, ನವೆಂಬರ್10 : ಕಡಲೆಕಾಯಿ ಪರಿಷೆಯಲ್ಲಿ ಸುಂಕ ವಸೂಲಿ ಮಾಡಲು ಟೆಂಡರ್ ಪಡೆದಿದ್ದ ವ್ಯಕ್ತಿ ನಾಪತ್ತೆಯಾಗಿದ್ದು ಮುಜರಾಯಿ ಇಲಾಖೆ ಅಧಿಕಾರಿಗಳು ಗೊಂದಲಗೊಂಡಿದ್ದಾರೆ. ನ.13ರಂದು ಐತಿಹಾಸಿಕ ಕಡಲೆಯಾಯಿ ಪರಿಷೆಗೆ ಚಾಲನೆ ಸಿಗಲಿದೆ.
ಬೆಂಗಳೂರಿನ ಬಸವನಗುಡಿಯಲ್ಲಿ ನಡೆಯುವ ಕಡಲೆಕಾಯಿ ಪರಿಷೆಯಲ್ಲಿ ಸುಂಕ ವಸೂಲಿ ಮಾಡಲು ವಿನಯ್ ಎಂಬುವವರು 9 ಲಕ್ಷ ರೂ. ಹರಾಜು ಕೂಗಿದ್ದರು. ಆದರೆ, ಹಣ ಪಾವತಿ ಮಾಡದೇ ಅವರು ನಾಪತ್ತೆಯಾಗಿದ್ದು, ಮರು ಹರಾಜು ನಡೆಸಲು ಅಧಿಕಾರಿಗಳು ಮುಂದಾಗಿದ್ದಾರೆ.

ವಿನಯ್ 2.5 ರಿಂದ 3.50 ಲಕ್ಷ ರೂ. ಮೌಲ್ಯದ ಹರಾಜನ್ನು ಬರೋಬ್ಬರಿ 9 ಲಕ್ಷ ರೂ.ಗೆ ಕೂಗಿದ್ದ. ಆದರೆ, ಬಳಿಕ ಯಾರೋ ನಷ್ಟವಾಗಲಿದೆ ಎಂದು ಹೇಳಿರುವುದರಿಂದ ನಾಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ.
ಸುಂಕ ವಸೂಲಿಗಾಗಿ 2 ಬಾರಿ ಕರೆದಿದ್ದ ಹರಾಜಿನಲ್ಲಿ 2 ಲಕ್ಷ ರೂ.ಗೆ ಬಿಡ್ ಕೂಗಲಾಗಿದೆ. ಕಳೆದ ವರ್ಷ 2.76 ಲಕ್ಷ ರೂ.ಗೆ ಹರಾಜಾಗಿತ್ತು. ಈ ವರ್ಷ 76 ಸಾವಿರ ಕಡಿಮೆಯಾಗಿದೆ.
ವಾರ್ಷಿಕ ಗುತ್ತಿಗೆ : ದೊಡ್ಡಗಣಪತಿ ದೇವಾಲಯ ಹಾಗೂ ದೊಡ್ಡ ಬಸವಣ್ಣ ದೇವಾಲಯಕ್ಕೆ ನಿತ್ಯ ನೂರಾರು ಭಕ್ತರು ಆಗಮಿಸುತ್ತಾರೆ. ಹೀಗಾಗಿ ದೇವಾಲಯದ ಹೊರಭಾಗದಲ್ಲಿ ಚಪ್ಪಲಿ ಬಿಡಲು ಅವಕಾಶ ಕಲ್ಪಿಸಲಾಗಿದ್ದು, ವರ್ಷಕ್ಕೊಮ್ಮೆ ಹರಾಜು ಮೂಲಕ ಚಪ್ಪಲಿ ಸ್ಟ್ಯಾಂಡ್ ಗುತ್ತಿಗೆ ನೀಡಲಾಗುತ್ತದೆ.
ಈ ಬಾರಿ ದೊಡ್ಡ ಬಸವಣ್ಣ ದೇವಾಲಯದಲ್ಲಿ ಚಪ್ಪಲಿ ಸ್ಟ್ಯಾಂಡ್ ಗೆ 60 ಸಾವಿರ ರೂಗೆ ಗುತ್ತಿಗೆ ನೀಡಲಾಗಿದೆ. ಇನ್ನು ದೇವಾಲಯದ ಮುಖ್ಯ ದ್ವಾರದ ಬಳಿ ಎಳನೀರು ಮಾರಾಟಕ್ಕೆಂದು 2.25 ಲಕ್ಷ ರೂ.ಗೆ ಗುತ್ತಿಗೆ ನೀಡಲಾಗಿದೆ.
ಸಿದ್ಧತಾ ಸಭೆ : ಪರಿಷೆಗೆ ಲಕ್ಷಾಂತರ ಮಂದಿ ಆಗಮಿಸುವ ಕಾರಣ ಸೂಕ್ತ ಭದ್ರತೆ ಒದಗಿಸಲು, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು, ತುರ್ತು ಆರೋಗ್ಯ ಸೇವೆ ನೀಡಲು ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲು ಹಾಗೂ ಮುಂತಾದ ವ್ಯವಸ್ಥೆಗಳನ್ನು ಕಲ್ಪಿಸುವ ಕಾರಣ ಇಂದು ಸಭೆ ನಡೆಯಲಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications