ಕಡಲೆಕಾಯಿ ಪರಿಷೆ, ಬಿಡ್ ಕೂಗಿದ್ದ ವ್ಯಕ್ತಿ ನಾಪತ್ತೆ!
ಬೆಂಗಳೂರು, ನವೆಂಬರ್10 : ಕಡಲೆಕಾಯಿ ಪರಿಷೆಯಲ್ಲಿ ಸುಂಕ ವಸೂಲಿ ಮಾಡಲು ಟೆಂಡರ್ ಪಡೆದಿದ್ದ ವ್ಯಕ್ತಿ ನಾಪತ್ತೆಯಾಗಿದ್ದು ಮುಜರಾಯಿ ಇಲಾಖೆ ಅಧಿಕಾರಿಗಳು ಗೊಂದಲಗೊಂಡಿದ್ದಾರೆ. ನ.13ರಂದು ಐತಿಹಾಸಿಕ ಕಡಲೆಯಾಯಿ ಪರಿಷೆಗೆ ಚಾಲನೆ ಸಿಗಲಿದೆ.
ಬೆಂಗಳೂರಿನ ಬಸವನಗುಡಿಯಲ್ಲಿ ನಡೆಯುವ ಕಡಲೆಕಾಯಿ ಪರಿಷೆಯಲ್ಲಿ ಸುಂಕ ವಸೂಲಿ ಮಾಡಲು ವಿನಯ್ ಎಂಬುವವರು 9 ಲಕ್ಷ ರೂ. ಹರಾಜು ಕೂಗಿದ್ದರು. ಆದರೆ, ಹಣ ಪಾವತಿ ಮಾಡದೇ ಅವರು ನಾಪತ್ತೆಯಾಗಿದ್ದು, ಮರು ಹರಾಜು ನಡೆಸಲು ಅಧಿಕಾರಿಗಳು ಮುಂದಾಗಿದ್ದಾರೆ.

ವಿನಯ್ 2.5 ರಿಂದ 3.50 ಲಕ್ಷ ರೂ. ಮೌಲ್ಯದ ಹರಾಜನ್ನು ಬರೋಬ್ಬರಿ 9 ಲಕ್ಷ ರೂ.ಗೆ ಕೂಗಿದ್ದ. ಆದರೆ, ಬಳಿಕ ಯಾರೋ ನಷ್ಟವಾಗಲಿದೆ ಎಂದು ಹೇಳಿರುವುದರಿಂದ ನಾಪತ್ತೆಯಾಗಿದ್ದಾನೆ ಎಂದು ತಿಳಿದುಬಂದಿದೆ.
ಸುಂಕ ವಸೂಲಿಗಾಗಿ 2 ಬಾರಿ ಕರೆದಿದ್ದ ಹರಾಜಿನಲ್ಲಿ 2 ಲಕ್ಷ ರೂ.ಗೆ ಬಿಡ್ ಕೂಗಲಾಗಿದೆ. ಕಳೆದ ವರ್ಷ 2.76 ಲಕ್ಷ ರೂ.ಗೆ ಹರಾಜಾಗಿತ್ತು. ಈ ವರ್ಷ 76 ಸಾವಿರ ಕಡಿಮೆಯಾಗಿದೆ.
ವಾರ್ಷಿಕ ಗುತ್ತಿಗೆ : ದೊಡ್ಡಗಣಪತಿ ದೇವಾಲಯ ಹಾಗೂ ದೊಡ್ಡ ಬಸವಣ್ಣ ದೇವಾಲಯಕ್ಕೆ ನಿತ್ಯ ನೂರಾರು ಭಕ್ತರು ಆಗಮಿಸುತ್ತಾರೆ. ಹೀಗಾಗಿ ದೇವಾಲಯದ ಹೊರಭಾಗದಲ್ಲಿ ಚಪ್ಪಲಿ ಬಿಡಲು ಅವಕಾಶ ಕಲ್ಪಿಸಲಾಗಿದ್ದು, ವರ್ಷಕ್ಕೊಮ್ಮೆ ಹರಾಜು ಮೂಲಕ ಚಪ್ಪಲಿ ಸ್ಟ್ಯಾಂಡ್ ಗುತ್ತಿಗೆ ನೀಡಲಾಗುತ್ತದೆ.
ಈ ಬಾರಿ ದೊಡ್ಡ ಬಸವಣ್ಣ ದೇವಾಲಯದಲ್ಲಿ ಚಪ್ಪಲಿ ಸ್ಟ್ಯಾಂಡ್ ಗೆ 60 ಸಾವಿರ ರೂಗೆ ಗುತ್ತಿಗೆ ನೀಡಲಾಗಿದೆ. ಇನ್ನು ದೇವಾಲಯದ ಮುಖ್ಯ ದ್ವಾರದ ಬಳಿ ಎಳನೀರು ಮಾರಾಟಕ್ಕೆಂದು 2.25 ಲಕ್ಷ ರೂ.ಗೆ ಗುತ್ತಿಗೆ ನೀಡಲಾಗಿದೆ.
ಸಿದ್ಧತಾ ಸಭೆ : ಪರಿಷೆಗೆ ಲಕ್ಷಾಂತರ ಮಂದಿ ಆಗಮಿಸುವ ಕಾರಣ ಸೂಕ್ತ ಭದ್ರತೆ ಒದಗಿಸಲು, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು, ತುರ್ತು ಆರೋಗ್ಯ ಸೇವೆ ನೀಡಲು ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲು ಹಾಗೂ ಮುಂತಾದ ವ್ಯವಸ್ಥೆಗಳನ್ನು ಕಲ್ಪಿಸುವ ಕಾರಣ ಇಂದು ಸಭೆ ನಡೆಯಲಿದೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು












Click it and Unblock the Notifications