ಪರಿಷೆ ಸಂಭ್ರಮ: ಸಂಚಾರ ಬದಲಿ ಮಾರ್ಗ, ಪಾರ್ಕಿಂಗ್ ಎಲ್ಲಿ?
ಬೆಂಗಳೂರು, ನವೆಂಬರ್ 13: ಐತಿಹಾಸಿಕ ಕಡಲೆಕಾಯಿ ಪರಿಷೆ ಸೋಮವಾರ(ನವೆಂಬರ್ 13) ದಿಂದ ಆರಂಭವಾಗಲಿದ್ದು, ಬಸವನಗುಡಿ ಸುತ್ತಮುತ್ತಲಿನ ಪ್ರದೇಶದಲ್ಲಿ ವಾಹನ ಸಂಚಾರಕ್ಕೆ ಬದಲಿ ಮಾರ್ಗ ಹಾಗೂ ವಾಹನ ನಿಲುಗಡೆ ತಾಣಗಳನ್ನು ಸೂಚಿಸಿ ಟ್ರಾಫಿಕ್ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ.
ಈ ಬಾರಿಯ ಕಡಲೆಕಾಯಿ ಪರಿಷೆಗೆ 4 ಲಕ್ಷ ಭಕ್ತರು ಸೇರುವ ನಿರೀಕ್ಷೆ ಇದೆ. ಇದಕ್ಕೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಬಸವನಗುಡಿಯ ಪರಿಸರ ಮಾಲಿನ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಮುಜರಾಯಿ ಇಲಾಖೆ ಕ್ರಿಯಾಯೋಜನೆ ರೂಪಿಸಿದೆ. ಇದಕ್ಕೆ ಬಿಬಿಎಂಪಿ ಹಾಗೂ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು ಕೂಡಾ ಸಾಥ್ ನೀಡಿದೆ.

ವಾಹನ ನಿಲುಗಡೆ: 'ನ್ಯಾಷನಲ್ ಕಾಲೇಜು ಆಟದ ಮೈದಾನ, ಗವಿಪುರದ ಹಯವದನ ರಸ್ತೆಯ ಕೋಹಿನೂರು ಆಟದ ಮೈದಾನ ಹಾಗೂ ದೊಡ್ಡಗಣಪತಿ ದೇವಸ್ಥಾನ ರಸ್ತೆಯ ಸಾಯಿರಂಗಾ ಆಟದ ಮೈದಾನದಲ್ಲಿ ಸಾರ್ವಜನಿಕರ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ' ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.
ಲಾಲ್ಬಾಗ್ ಪಶ್ಚಿಮ ಗೇಟ್, ವಾಣಿ ವಿಲಾಸ್ ರಸ್ತೆ, ಚಾಮರಾಜಪೇಟೆಯ 5ನೇ ಮುಖ್ಯರಸ್ತೆ ಹಾಗೂ ಗಾಂಧಿಬಜಾರ್ ಮುಖ್ಯರಸ್ತೆ ಕಡೆಯಿಂದ ಹನುಮಂತನಗರಕ್ಕೆ ಹೋಗುವ ವಾಹನಗಳು, ರಾಮಕೃಷ್ಣ ಆಶ್ರಮದ ವೃತ್ತದಲ್ಲಿ ಬಲತಿರುವು ಪಡೆದು ಹಯವದನ ರಸ್ತೆ ಗವಿಪುರ 3ನೇ ಅಡ್ಡರಸ್ತೆ, ಮೌಂಟ್ ಜಾಯ್ ಮೂಲಕ ಸಂಚರಿಸಬಹುದು.
ದೊಡ್ಡಗಣಪತಿ ದೇವಸ್ಥಾನ ರಸ್ತೆಯ ಶೇಖರ್ ಆಸ್ಪತ್ರೆ ಜಂಕ್ಷನ್ನಿಂದ ಅಯ್ಯಂಗಾರ್ ರಸ್ತೆ, ಗವಿಪುರದ 3ನೇ ಅಡ್ಡರಸ್ತೆ ಮೂಲಕವೂ ಹನುಮಂತನಗರಕ್ಕೆ ಹೋಗಬಹುದು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications