ಬೆಂಗಳೂರಿನಲ್ಲಿಂದು ಕಲಾ ಯಾತ್ರೆ: ಭವ್ಯ ಉತ್ಸವಕ್ಕೆ ಚಾಲನೆ
ಬೆಂಗಳೂರು ಡಿಸೆಂಬರ್ 7: ಬೆಂಗಳೂರಿನಲ್ಲಿಂದು ಮೊದಲ ಬಾರಿಗೆ ಕಲಾ ಯಾತ್ರೆಯನ್ನು ಆಯೋಜಿಸಲಾಗಿದೆ. ಬುಡಕಟ್ಟು ಮತ್ತು ಜಾನಪದ ಕಲೆಗಳನ್ನು ಉಳಿಸುವಲ್ಲಿ ಎದುರಾಗುತ್ತಿರುವ ಸವಾಲುಗಳನ್ನು ಪರಿಹರಿಸಲು ಕಲಾ ಯಾತ್ರೆಯನ್ನು ನಡೆಸಲಾಗುತ್ತಿದೆ. ಇನ್ಫೋಸಿಸ್ ಫೌಂಡೇಶನ್ ಮತ್ತು ಭಾರತೀಯ ವಿದ್ಯಾಭವನ ಒಟ್ಟಾಗಿ ಸೇರಿ ಈ ಯಾತ್ರೆಯನ್ನು ನಡೆಸಲು ನಿರ್ಧರಿಸಿವೆ.
ಸುಮಾರು 25 ವರ್ಷಗಳಿಂದ ಭಾರತೀಯ ವಿದ್ಯಾ ಭವನದಲ್ಲಿ ಸಣ್ಣ ಮಟ್ಟದಲ್ಲಿ ಇದನ್ನು ಆಯೋಜಿಸಲಾಗುತ್ತಿತ್ತು. ಆದರೆ ಈ ವರ್ಷ ನಾವು ಇದನ್ನು ದೊಡ್ಡ ಉತ್ಸವವನ್ನಾಗಿ ಮಾಡಲು ನಿರ್ಧರಿಸಿದ್ದೇವೆ. ಇದೇ ರೀತಿ ಪ್ರತೀ ವರ್ಷ ಕೂಡ ಆಯೋಜನೆ ಮಾಡುತ್ತೇವೆ ಎಂದು ಭಾರತೀಯ ವಿದ್ಯಾಭವನದ ನಿರ್ದೇಶಕ ಎಚ್ ಎನ್ ಸುರೇಶ್ ಹೇಳಿದರು.

ಉತ್ಸವಕ್ಕೂ ಮುನ್ನ ಇತಿಹಾಸಕಾರರು ಮತ್ತು ಕಲಾವಿದರು ಒಂದೆಡೆ ಸೇರಿ ಜಾನಪದ ಮತ್ತು ಬುಡಕಟ್ಟು ಜನಾಂಗದ ಕಲಾ ಪ್ರಕಾರಗಳನ್ನು ಉಳಿಸಿಕೊಂಡು ಹೋಗುವ ಕುರಿತು ಚರ್ಚಿಸಿದರು. ಇದಕ್ಕೆ ಕರ್ನಾಟಕ ಜಾನಪದ ಪರಿಷತ್ತು, ಕರ್ನಾಟಕ ಜಾನಪದ ಅಕಾಡೆಮಿ ಮತ್ತು ಕರ್ನಾಟಕ ಚಿತ್ರಕಲಾ ಪರಿಷತ್ತಿನ ಸಂಶೋಧನಾ ಕೇಂದ್ರ ಸಹಕರಿಸಿದವು.
ಇಂದು ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಹೆಚ್ ಸಿ ಬೋರಲಿಂಗಯ್ಯ ಉತ್ಸವವನ್ನು ಉದ್ಘಾಟಿಸಿದರು. ಇಂದು ಬೆಳಗಿನ ಕಾರ್ಯಕ್ರಮದಲ್ಲಿ ಕಲಾ ಇತಿಹಾಸ ತಜ್ಞ ಚೂಡಾಮಣಿ ನಂದಗೋಪಾಲ್, ಧತ್ತು ಪುಟ್ಟಲಿಕಾ ತಿಯೇಟರ್ ನಿರ್ದೇಶಕಿ ಅನುಪಮಾ ಹೊಸಕೆರೆ, ಕರ್ನಾಟಕ ಚಿತ್ರಕಲಾ ಪರಿಷತ್ ಮ್ಯೂಸಿಯಂನ ಕ್ಯುರೇಟರ್ ವಿಜಯಶ್ರೀ ಸಿ.ಎಸ್., ದ್ರಾವಿಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಎಂ.ಎನ್.ವೆಂಕಟೇಶ್, ಲಲಿತಕಲಾ ಮಹಾವಿದ್ಯಾಲಯದ ಪ್ರಾಂಶುಪಾಲ ಗೋಮತಿಗೌಡ ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ರವಿಂದ್ರ ಸಿರಿವಾರ ಭಾಗವಹಿಸಿದ್ದರು.
ಬೆಳಗಿನ ಕಲಾಪ್ರಬಂಧದ ನಂತರ ಮಧ್ಯಾಹ್ನ ವಿಶೇಷ ಚರ್ಚೆ ನಡೆಯಲಿದ್ದು, ಕಲೆಗಳ ಭವಿಷ್ಯದ ಬಗ್ಗೆ ಇತಿಹಾಸಕಾರರು, ಕಲಾವಿದರು ಮತ್ತು ಶ್ರೋತರು ತಮ್ಮ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ. ಜಾನಪದ ಮತ್ತು ಬುಡಕಟ್ಟು ಕಲೆ ಹಾಗೂ ಜಾನಪದವು ನಮ್ಮ ನಾಡಿನ ಸಾಂಸ್ಕೃತಿಕ ಗುರುತಿನ ಅವಿಭಾಜ್ಯ ಭಾಗವಾಗಿದೆ. ಅವುಗಳ ಉಳಿವಿಗಾಗಿ ಪರಿಸರ ವ್ಯವಸ್ಥೆಯನ್ನು ರಚಿಸುವುದು ಮುಖ್ಯವಾಗಿದೆ. ಇದು ಉತ್ಸವದ ಹಿಂದಿನ ಮೂಲ ಕಲ್ಪನೆ ಎಂದು ಸುರೇಶ್ ಹೇಳಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications