BLR Airport: ಬೆಂಗಳೂರು ಏರ್ಪೋರ್ಟ್ನಲ್ಲಿ 'ಕಲಾಲೋಕ': ಕರ್ನಾಟಕದ ಬ್ರ್ಯಾಂಡ್ ಉತ್ಪನ್ನಗಳು ಲಭ್ಯ
ಬೆಂಗಳೂರು, ಜುಲೈ 08: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಟರ್ಮಿನಲ್-2ರಲ್ಲಿ ಕರ್ನಾಟಕದ ಅಸ್ಮಿತೆ ಸಾರುವ 6 ಮತ್ತು ಜಿ.ಐ. ಟ್ಯಾಗ್ ಹೊಂದಿರುವ 28 ಉತ್ಪನ್ನಗಳ ಮಾರಾಟ ಮತ್ತು ಪ್ರದರ್ಶನ ವ್ಯವಸ್ಥೆ ಇರುವ ಆಕರ್ಷಕ 'ಕಲಾಲೋಕ' ಮಳಿಗೆ ಸಿದ್ಧವಾಗುತ್ತಿದೆ. ಇದನ್ನು ಸೆಪ್ಟೆಂಬರ್ ತಿಂಗಳಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.
ಇಂದು ಮಂಗಳವಾರ ಸರ್ಕಾರಿ ಸ್ವಾಮ್ಯದ ವಿಶ್ವೇಶ್ವರಯ್ಯ ಟ್ರೇಡ್ ಪ್ರೊಮೋಶನ್ ಸೆಂಟರ್ (ವಿಟಿಪಿಸಿ) ಸೇರಿದಂತೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಪ್ರಮುಖ ಅಧಿಕಾರಿಗಳೊಂದಿಗೆ ಈ ಯೋಜನೆಯ ಪ್ರಗತಿಯ ಸಂಬಂಧ ಪರಿಶೀಲನಾ ಸಭೆ ನಡೆಸಿದರು. ಬಳಿಕ ಈ ಬಗ್ಗೆ ಅವರು ಮಹತ್ವದ ಮಾಹಿತಿ ನೀಡಿದರು.

KIA ನಲ್ಲಿ ಯಾವೆಲ್ಲ ಉತ್ಪನ್ನಗಳು ಸಿಗುತ್ತವೆ?
ಕಲಾಲೋಕ ಮಳಿಗೆಯಲ್ಲಿ ರಾಜ್ಯದ ಅಸ್ಮಿತೆ ಸಾರುವ ಕಾಫಿ, ಮೈಸೂರು ಸಿಲ್ಕ್ಸ್, KSDL ಉತ್ಪನ್ನಗಳಾದ ಗಂಧದ ಸಾಬೂನು ಇತ್ಯಾದಿ, ಲಿಡ್ಕರ್ ಉತ್ಪನ್ನಗಳು, ಕರಕುಶಲ ನಿಗಮದ ವಸ್ತುಗಳು ಮತ್ತು ಕೈಮಗ್ಗ ನಿಗಮದ ಉತ್ಪನ್ನಗಳು ಇರಲಿವೆ. ಇವುಗಳ ಜೊತೆಗೆ ಚನ್ನಪಟ್ಟಣದ ಬೊಂಬೆಯಂಥ 28 ಜಿ.ಐ. ಉತ್ಪನ್ನಗಳನ್ನೂ ಇಡಲಾಗುವುದು. ಇವುಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ಯಾಕಿಂಗ್ ವಿನ್ಯಾಸ ಮತ್ತು ಬ್ರ್ಯಾಂಡಿಂಗ್ ಮಾಡಿ, ಪ್ರದರ್ಶನ ಮತ್ತು ಮಾರಾಟ ನಡೆಸಲಾಗುವುದು. ಜಾಗತಿಕ ಮಟ್ಟದ ಗ್ರಾಹಕರನ್ನು ಸೆಳೆಯುವುದು ಇದರ ಉದ್ದೇಶವಾಗಿದೆ ಎಂದು ವಿವರಿಸಿದರು.
ಏರ್ಪೋರ್ಟ್ ಲಾಂಜ್ ನಲ್ಲಿ 'ಕಲಾಲೋಕ' ಮಳಿಗೆ
ಮುಂದಿನ ದಿನಗಳಲ್ಲಿ ಇಂಟರ್ನ್ಯಾಷನಲ್ ಲಾಂಜ್ ನಲ್ಲಿ ಕೂಡ 'ಕಲಾಲೋಕ' ಮಳಿಗೆ ತೆರೆಯಲಾಗುವುದು. ಇದಕ್ಕಾಗಿ ಟೆಂಡರ್ ಆಹ್ವಾನಿಸಲಾಗುವುದು. ಈಗ ಸಿದ್ಧವಾಗುತ್ತಿರುವ ಮೊದಲ ಮಳಿಗೆಯು 130 ಚದರ ಮೀಟರ್ ವಿಸ್ತೀರ್ಣ ಹೊಂದಿದ್ದು, ಆಗಸ್ಟ್ ಕೊನೆಯ ಹೊತ್ತಿಗೆ ಸಂಪೂರ್ಣವಾಗಿ ಇದರ ಕೆಲಸಗಳು ಮುಗಿಯಲಿವೆ. ಕೆಂಪೇಗೌಡ ವಿಮಾನ ನಿಲ್ದಾಣವು ಇದಕ್ಕೆ ನಿಗದಿತ ಬಾಡಿಗೆಯಲ್ಲಿ ಶೇಕಡ 50ರಷ್ಟು ರಿಯಾಯಿತಿ ಕೊಟ್ಟಿದೆ ಎಂದು ಪಾಟೀಲರು ತಿಳಿಸಿದರು.

ಪ್ರಗತಿ ಪರಿಶೀಲನೆ ವೇಳೆ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ವಿಶ್ವೇಶ್ವರಯ್ಯ ಟ್ರೇಡ್ ಪ್ರೊಮೋಶನ್ ಸೆಂಟರ್ (ವಿಟಿಪಿಸಿ) ವ್ಯವಸ್ಥಾಪಕ ನಿರ್ದೇಶಕ ಶಿವಕುಮಾರ್ ಸೇರಿದಂತೆ ಇತರರು ಸಚಿವರಿಗೆ ಮಾಹಿತಿ ನೀಡಿದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications