ಸಿಹಿ ಸುದ್ದಿ: ಕಲಬುರಗಿ ಬೆಂಗಳೂರು ವಂದೇ ಭಾರತ್ ರೈಲಿಗೆ ಮತ್ತೊಂದು ನಿಲುಗಡೆ ವಿವರ
ಬೆಂಗಳೂರು, ಏಪ್ರಿಲ್.05: ಕಲಬುರಗಿ ಬೆಂಗಳೂರು ವಂದೇ ಭಾರತ್ ರೈಲು ಯಾದಗಿರಿಯಲ್ಲಿ ನಿಲುಗಡೆ ನೀಡಬೇಕು ಎಂಬ ಬೇಡಿಕೆ ಹಲವು ದಿನಗಳಿಂದಲೇ ಕೇಳಿ ಬರುತ್ತಿತ್ತು. ಸ್ದಯ ಪ್ರಯಾಣಿಕರಿಗೆ ಸಿಹಿ ಸುದ್ದ ಸಿಕ್ಕಿದ್ದು, ಯಾದಗಿರಿಯಲ್ಲಿ ವಂದೇ ಭಾರತ್ ಮತ್ತೊಂದು ನಿಲುಗಡೆ ನೀಡಲಿದೆ.
ಈ ಬಗ್ಗೆ ಸಚಿವ ಉಮೇಶ್ ಜಾದವ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ, ವಂದೇ ಭಾರತ್ ರೈಲು ಪ್ರಾರಂಭವಾದ ದಿನದಿಂದ ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ಪ್ರತಿಷ್ಠಿತ ರೈಲನ್ನು ನಿಲ್ಲಿಸಲು ಸಾಮಾನ್ಯ ಜನರಿಂದ ಹಿಡಿದು ಎಲ್ಲಾ ಜನಪ್ರತಿನಿಧಿಗಳು ಈ ರೈಲು ನಿಲ್ಲಿಸಲು ಒತ್ತಾಯಿಸಿದರು. ಹೀಗಾಗಿ ಪ್ರಯಾಣಿಕರ ಒತ್ತಡಕ್ಕ ಮಣಿದು ಯಾದಗಿರಿಯಲ್ಲಿ ವಂದೇ ಭಾರತ್ ನಿಲುಗಡೆಗೆ ರೈಲ್ವೆ ಸಚಿವಾಲಯ ಒಪ್ಪಿಗೆ ಸೂಚಿಸಿದೆ.

ವಂದೇ ಭಾರತ್ ಪ್ರಾರಂಭವಾದ ದಿನದಂದು ರೈಲ್ವೆ ಇಲಾಖೆ ಜೊತೆಗೆ ಮಾತನಾಡಿ ಈ ವಿಷಯ ಕುರಿತು ಕ್ರಮ ಕೈಗೊಳ್ಳಲು ಮನವಿ ಮಾಡಿದೆ. ಇದರ ಪ್ರತಿಫಲವಾಗಿ ಇಂದು ಕೇಂದ್ರದ ರೈಲ್ವೆ ಇಲಾಖೆ ಆದೇಶವನ್ನು ಹೊರಡಿಸಿದೆ. ಕಲ್ಬುರ್ಗಿಯಿಂದ ಬೆಂಗಳೂರಿಗೆ ಹೊರಟಿದ್ದ ರೈಲು ಯಾದಗಿರಿ ನಿಲ್ದಾಣ ರೈಲ್ವೆ ನಿಲ್ದಾಣದಲ್ಲಿ ಈ ರೈಲು ಬೆಳಗ್ಗೆ 05:54 ನಿಮಿಷಕ್ಕೆ ಬಂದು 05:55 ನಿಮಿಷಕ್ಕೆ ಹೊರಡಲಿದೆ. ಬೆಂಗಳೂರಿನಿಂದ ಬರುವಾಗ ರಾತ್ರಿ 09:44 ನಿಮಿಷಕ್ಕೆ ತಲುಪಲಿದ್ದು 09:45 ನಿಮಿಷಕ್ಕೆ ಕಲಬುರಗಿ ಕಡೆ ಹೊರಡಲಿದೆ ಎಂದು ಉಮೇಶ್ ಜಾಧವ್ ಮಾಹಿತಿ ನೀಡಿದ್ದಾರೆ.
ಈ ರೈಲು ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ನಿಲುವಿಕೆಯಿಂದ ನಮ್ಮ ಭಾಗದ ಜನರಿಗೆ ಅನುಕೂಲ ಮಾಡಿಕೊಟ್ಟಿದ್ದು ಕೇಂದ್ರ ಸರ್ಕಾರದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ನಮ್ಮ ನೆಚ್ಚಿನ ಪ್ರಧಾನಿಯವರಿಗೆ ನಾನು ಧನ್ಯವಾದವನ್ನು ಹೇಳಲು ಬಯಸುತ್ತೇನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಕಲಬುರಗಿ- ಬೆಂಗಳೂರು ಸಾಪ್ತಾಹಿಕ ರೈಲು ವಿಳಂಬ
ಬಿಸಿಲ ನಾಡು ಕಲಬುರಗಿಯಿಂದ ಬೆಂಗಳೂರಿಗೆ ನೂತನ ಸಾಪ್ತಾಹಿಕ ರೈಲಿಗೆ ಕಳೆದ ತಿಂಗಳು ಕಲಬುರಗಿ ಸಂಸದ ಉಮೇಶ ಜಾಧವ್ ಹಸಿರು ನಿಶಾನೆ ತೋರಿದ್ದರು. ಇಂದಿನಿಂದ ವಾರಕ್ಕೆ ಮೂರು ಬಾರಿ ಸೇವೆ ಸಲ್ಲಿಸಬೇಕಿತ್ತು. ಆದರೆ, ತಾಂತ್ರಿಕ ಕಾರಣದಿಂದಾಗಿ ರೈಲು ಕಾರ್ಯಾಚರಣೆ ಆರಂಭಿಸಿಲ್ಲ.
ಈ ವಿಶೇಷ ಸಾಪ್ತಾಹಿಕ ರೈಲು (01111) ಸಂಜೆ 5.10ಕ್ಕೆ ಕಲಬುರಗಿ ನಿಲ್ದಾಣದಿಂದ ಹೊರಟು ಮರುದಿನ ಬೆಳಗ್ಗೆ 4.15ಕ್ಕೆ ಬೈಯಪ್ಪನಹಳ್ಳಿಯಲ್ಲಿರುವ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ಗೆ ತಲುಪಲಿದೆ. ಈ ವಿಶೇಷ ರೈಲು ಶಹಾಬಾದ್, ವಾಡಿ, ಯಾದಗಿರಿ ಮತ್ತು ರಾಯಚೂರು ಸೇರಿದಂತೆ ವಿವಿಧ ನಿಲ್ದಾಣಗಳಲ್ಲಿ ರೈಲು ನಿಲುಗಡೆಯಾಗಲಿದೆ.

ರೈಲ್ವೇ ಇಲಾಖೆಯು ಈ ರೈಲನ್ನು ಏಪ್ರಿಲ್ 4 ರಿಂದ ವಾರಕ್ಕೆ ಮೂರು ಬಾರಿ ಓಡಿಸಲು ಒಪ್ಪಿಕೊಂಡಿತ್ತು. ಹೊಸ ರೈಲು ಬೆಂಗಳೂರಿಗೆ ಆಗಾಗ್ಗೆ ಪ್ರಯಾಣಿಸುವ ಜನರಿಗೆ ಅನುಕೂಲಕರವಾಗಿರುತ್ತದೆ. ಜೊತೆಗೆ ಇದು ಈ ಪ್ರದೇಶದ ಅಭಿವೃದ್ಧಿಗೆ ಉತ್ತೇಜನ ನೀಡುತ್ತದೆ ಎಂದು ಉಮೇಶ್ ಜಾಧವ್ ಹೇಳಿದ್ದರು.
ಆದರೆ, "ಕೆಲ ತಾಂತ್ರಿಕ ಕಾರಣಗಳಿಂದ ದಿನಾಂಕ 05.04.2024 ರಂದು ಪ್ರಾರಂಭವಾಗಬೇಕಾಗಿದ್ದ ಬೆಂಗಳೂರು ಕಲಬುರಗಿ ಸಪ್ತಾಹಿಕ ವಿಶೇಷ ರೈಲು ಇಂದು ಹೊರಡಲು ಸಾಧ್ಯವಾಗಲಿಲ್ಲ. ಈ ನಿಟ್ಟಿನಲ್ಲಿ ಬೆಳಗ್ಗೆಯಿಂದ ಸತತ ದೆಹಲಿ ಮತ್ತು ಬೆಂಗಳೂರು ರೈಲ್ವೆ ವಿಭಾಗದ ಅಧಿಕಾರಿಗಳ ಜೊತೆ ಸಂಪರ್ಕ ಸಾಧಿಸಿ ಈ ವಿಶೇಷ ರೈಲು ಮುಂದಿನ ವಾರ 12.04.24ರಂದು ಮುಂಚೆ ನಿರ್ಧರಿಸಿದ ಸಮಯಕ್ಕೆ ನಡೆಯಲಿದೆ ಎಂದು ರೈಲ್ವೆ ಇಲಾಖೆಯು ಆದೇಶ ಹೊರಡಿಸಿದೆ" ಎಂದು ಹೊಸ ಮಾಹಿತಿ ಹಂಚಿಕೊಂಡಿದ್ದಾರೆ ಉಮೇಶ್ ಜಾಧವ್.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Vande Bharat Sleeper: ಉತ್ಪಾದನೆ ಗುರಿ ತಲುಪದ ಬೆಂಗಳೂರು-ಚೆನ್ನೈ ಕಂಪನಿಗಳು, ಸ್ಲೀಪರ್ ರೈಲು ವಿತರಣೆ ವಿಳಂಬ












Click it and Unblock the Notifications