ಕಲ್ಯಾಣನಗರ: ತಡೆಗೊಡೆ ಇಲ್ಲದ ರಾಜಕಾಲುವೆಗೆ ಕಾವಲು ಯಾರು?: ಆತಂಕದಲ್ಲಿ ಜನ ಸಂಚಾರ
ರಾಜಕಾಲುವೆಗೆ ತಡೆಗೋಡೆ ಇಲ್ಲದ ಕಾರಣ ನಿತ್ಯ ವಾಹನ ಸವಾರರು ಪ್ರಾಣ ಪಕ್ಷಿ ಕೈಯಲ್ಲಿಡಿದುಕೊಂಡು ಓಡಾಡುವಂತ ಪರಿಸ್ಥಿತಿ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ನಿರ್ಮಾಣವಾಗಿದೆ. ಕಲ್ಯಾಣನಗರ ಮುಖ್ಯರಸ್ತೆಯ ಇಕ್ಕೆಲುಗಳಲ್ಲಿ ರಾಜಕಾಲುವೆಗೆ ತಡೆಗೋಡೆ ಇಲ್ಲದ ಕಾರಣ ನಿತ್ಯ ವಾಹನ ಸವಾರರು ಸ್ವಲ್ಪ ಯಾಮಾರಿದರೂ ಬಾಯಿ ತೆರೆದುಕೊಂಡಿರುವ ರಾಜಕಾಲುವೆಗೆ ಪಾಲಾಗುತ್ತಿದ್ದಾರೆ ಎಂದು ಸ್ಥಳೀಯರು ಅಳಲು ತೋಡಿಕೊಂಡಿದ್ದಾರೆ.
ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರು ಹಿಡಿ ಶಾಪ ಹಾಕಿದ್ದಾರೆ. ರಸ್ತೆಯ ಬದಿಯಲ್ಲಿರುವ ರಾಜಕಾಲುವೆಗೆ ಈವರೆಗೆ ತಡೆಗೋಡೆ ನಿರ್ಮಿಸಿಲ್ಲ. ಈಸ್ವ್ವೆಸ್ಟ್ ಶಾಲೆ, ಟ್ರಿಬೈ ಪ್ರಾವಿಡೆಂಟ್ ಅಪಾರ್ಟ್ಮೆಂಟ್, ಲಿಂಗಧೀರನಹಳ್ಳಿ ಹಾಗೂ ಕಲ್ಯಾಣನಗರದ ನಿವಾಸಿಗಳು ಸೇರಿ ನೂರಾರು ನಾಗರಿಕರು, ಮಕ್ಕಳು ಹಾಗೂ ಹಿರಿಯರು ಈ ರಸ್ತೆಯಲ್ಲಿ ಸಂಚರಿಸುವುದೇ ದುಸ್ಸಾಹಸವಾಗಿದೆ. ರಾತ್ರಿ ವೇಳೆ ರಸ್ತೆ ಬದಿಯ ರಾಜಕಾಲುವೆ ಗೋಚರಿಸುವುದೇ ಇಲ್ಲ. ಇದರಿಂದ ವಾಹನ ಸವಾರರು ನೇರವಾಗಿ ಚರಂಡಿ ಪಾಲಾಗುತ್ತಿದ್ದಾರೆ ಎಮದು ಸ್ಥಳೀಯರು ಅಳಲು ತೋಡಿಕೊಂಡಿದ್ದಾರೆ.
ಈ ಬಗ್ಗೆ ಮಾತನಾಡಿದ ಪಾಲಿಕೆ ಮಾಜಿ ಸದಸ್ಯ ಎ.ಎಂ.ಹನುಮಂತೇಗೌಡ, 'ರಸ್ತೆ ಅಭಿವೃದ್ಧಿ ಮಾಡಿದರೆ ಸಾಲದು ರಸ್ತೆಗೆ ಹೊಂದಿಕೊಂಡಂತಿರುವ ರಾಜಕಾಲುವೆ, ಹಳ್ಳ ಹಾಗೂ ಕೆರೆ ಏರಿಗಳಿಗೆ ತಡೆಗೋಡೆ ನಿರ್ಮಾಣ ಮಾಡಬೇಕು. ಇಲ್ಲವಾದಲ್ಲಿ ಅನಾಹುತಗಳು ತಪ್ಪಿದ್ದಲ್ಲ' ಎಂದು ಎಚ್ಚರಿಸಿದ್ದಾರೆ.

ಸಿಂಡಿಕೇಟ್ ಬ್ಯಾಂಕ್ ಕಾಲೋನಿ, ಹೇರೋಹಳ್ಳಿ ಭಾಗದಿಂದ ಪ್ರತಿನಿತ್ಯ ಶಾಲಾ ವಾಹನಗಳು, ಮಕ್ಕಳನ್ನು ಶಾಲೆಗೆ ಬಿಡಲು ನೂರಾರು ಪೋಷಕರು ಅದರಲ್ಲೂ ಶಾಲಾ ನಿರ್ಮಾಣ ಮಾಡಬೇಕೆಮದು ಡಿ ಗ್ರೂಪ್ ನಿವಾಸಿ ಆರ್.ಚಂದ್ರಶೇಖರ್ ಒತ್ತಾಯಿಸಿದರು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications