ಬೆಂಗಳೂರಿನ ನೂತನ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ನೇಮಕ
ಬೆಂಗಳೂರು, ಜುಲೈ 31: ಬೆಂಗಳೂರಿನ ನೂತನ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ನೇಮಕವಾಗಿದ್ದಾರೆ.
ಆಗಸ್ಟ್ 2 ಕ್ಕೆ ಭಾಸ್ಕರ್ ರಾವ್ ಅವರ ಒಂದು ವರ್ಷ ಅವಧಿ ಮುಗಿಯುವುದರಿಂದ ಕಮಲ್ ಪಂತ್ಅವರನ್ನು ನೂತನ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.ಭಾಸ್ಕರ್ ರಾವ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಭಾಸ್ಕರ್ ರಾವ್ ಅವರ ಬ್ಯಾಚ್ ಮೇಟ್ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ರಾಜ್ಯ ಗುಪ್ತಚರ ಇಲಾಖೆ ಹೆಚ್ಚುವರಿ ಎಡಿಜಿಪಿ ಕಮಲ್ ಪಂತ್ ನೇಮಕ ಮಾಡಿದ್ದಾರೆ ಭಾಸ್ಕರ್ ರಾವ್ ಮತ್ತು ಪಂಥ್ 1990 ರ ಐಪಿಎಸ್ ಬ್ಯಾಚ್ ನವರು.

ನಗರ ಪೊಲೀಸ್ ಆಯುಕ್ತ ಹುದ್ದೆಗೆ ಮೂವರು ಅಧಿಕಾರಿಗಳು ಮುಂಚೂಣಿಯಲ್ಲಿದ್ದರು, ಪಂತ್ ಅವರ ಜೊತೆಗೆ ಸುನೀಲ್ ಅಗರ್ ವಾಲ್ ಮತ್ತು ಅಮೃತ್ ಪೌಲ್ ಕೂಡ ಆಕಾಂಕ್ಷಿಗಳಾಗಿದ್ದರು.
ಎಡಿಜಿಪಿ ಬಿ. ದಯಾನಂದ ಅವರನ್ನು ಗುಪ್ತದಳಕ್ಕೆ ವರ್ಗಾಯಿಸಲಾಗಿದೆ. ರಾಜ್ಯ ಗುಪ್ತಚರ ಇಲಾಖೆ ಎಡಿಜಿಪಿ ಆಗಿದ್ದ ಕಮಲ್ ಪಂತ್ ಹೆಸರು ಕಳೆದ ಬಾರಿಯೇ ಕಮಿಷನರ್ ಹುದ್ದೆ ರೇಸ್ನಲ್ಲಿ ಚಾಲ್ತಿಯಲ್ಲಿತ್ತು.
Kamal Pant appointed new Bengaluru Police Commissioner appointed. Bhaskar Rao transferred to role of ADGP, Internal Security Division. pic.twitter.com/GrHQI2I3Dz
— Prajwal (@prajwalmanipal) July 31, 2020
ಆದರೆ ಒಂದು ವರ್ಷದ ಅವಧಿಗಾಗಿ ಭಾಸ್ಕರ್ ರಾವ್ ಅವರನ್ನು ನೇಮಲಕ ಮಾಡಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಯಸಿದ್ದರು. ಮತ್ತು ಒಂದು ವರ್ಷದ ಬಳಿಕ ಕಮಲ್ ಪಂತ್ ಅವರಿಗೆ ಅವಕಾಶ ನೀಡುವ ಬಗ್ಗೆಯೂ ಭರವಸೆ ನೀಡಿದ್ದರು.
ಅಮೃತ್ ಪೌಲ್ ಅವರನ್ನು ಇದೇ ವರ್ಷದ ಜನವರಿ ಅಂತ್ಯದಲ್ಲಿ ಎಡಿಜಿಪಿಯಾಗಿ ಬಡ್ತಿ ನೀಡಲಾಗಿತ್ತು.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ












Click it and Unblock the Notifications