ನಾಡಧ್ವಜ ವಿನ್ಯಾಸಗೊಳಿಸಿದ ರಾಮಮೂರ್ತಿಯವರ ಪತ್ನಿಗೆ ಪಿಂಚಣಿ ನಿರಾಕರಣೆ
ಬೆಂಗಳೂರು ಡಿಸೆಂಬರ್ 28: 60 ರ ದಶಕದ ಆರಂಭದಲ್ಲಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಹಳದಿ-ಕೆಂಪು ಕನ್ನಡ ಧ್ವಜವನ್ನು ವಿನ್ಯಾಸಗೊಳಿಸಿದ ರಾಮಮೂರ್ತಿ ಅವರ ಪತ್ನಿ ಕಮಲಮ್ಮ ರಾಮಮೂರ್ತಿ (95) ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ವೃದ್ಧಾಪ್ಯ ವೇತನವನ್ನು ನಿರಾಕರಿಸಿದೆ.
ಕನ್ನಡ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ ರಾಮಮೂರ್ತಿ ಅವರ ಪತ್ನಿ ಕಮಲಮ್ಮ. ಇವರು ಸದ್ಯ ಬೆಂಗಳೂರಿನಲ್ಲಿ ವಾಸವಿದ್ದಾರೆ. ನಂಜನಗೂಡಿನವರಾದ ಕಮಲಮ್ಮ ವಿವಾಹದ ನಂತರ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಇವರು ಅರಿಶಿನ ಮತ್ತು ಕುಂಕುಮವನ್ನು ಭಾರತದಲ್ಲಿ ಪವಿತ್ರವೆಂದು ಪರಿಗಣಿಸಲಾಗುತ್ತಿದ್ದು, ಈ ಹಳದಿ (ಅರಿಶಿನ) ಮತ್ತು ಕೆಂಪು (ಕುಂಕುಮ) ಬಣ್ಣವನ್ನು ಬಳಸಿ ರಾಮಮೂಪ್ಕಿ.ವಪು ಕರ್ನಾಟಕಕ್ಕೆ ಪ್ರತ್ಯೇಕ ಧ್ವಜವನ್ನು ವಿನ್ಯಾಸಗೊಳಿಸಿದ್ದರು.
ಇದನ್ನು ಜನಪ್ರಿಯಗೊಳಿಸುವಲ್ಲಿ ರಾಮಮೂರ್ತಿ ಅವರ ಶ್ರಮ ಮಾತಿನಲ್ಲಿ ಹೇಳಲಾಗದು. ಕಮಲಮ್ಮ ಅವರು ವಿನ್ಯಾಸಗೊಳಿಸಿದ ಹಳದಿ-ಕೆಂಪು ಕನ್ನಡ ಧ್ವಜವನ್ನು ಹಿಡಿದು ರಾಮಮೂರ್ತಿ ಅವರು ಪ್ರತಿದಿನವೂ ನಗರದಾದ್ಯಂತ ಸಂಚರಿಸುತ್ತಿದ್ದರು. ಆದರೆ 60ರ ದಶಕದಲ್ಲಿ ರಾಮಮೂರ್ತಿ ಅವರು ಹೊಲದಲ್ಲಿ ಕೊಳವೆಬಾವಿ ತೋಡಿಸುತ್ತಿದ್ದ ವೇಳೆ ಭೂಕುಸಿತದಿಂದ ಮಕ್ಕಳ ಜತೆಗೆ ಮರಣ ಹೊಂದಿದ್ದರು. ಈ ದುರಂತದಲ್ಲಿ ರಾಮಮೂರ್ತಿ ಹಾಗೂ ಅವರ ಪುತ್ರರು ಸಾವನ್ನಪ್ಪಿದರು. ಈ ದುರಂತಕ್ಕೆ 50 ವರ್ಷ ಕಳೆದಿದೆ. ಪತಿ ಹಾಗೂ ಪುತ್ರರ ಸಾವಿನ ಬಳಿಕ ಕಮಲಮ್ಮ ಅವರು ಬೆಂಗಳೂರಿನ ಆಶ್ರಮವೊಂದರಲ್ಲಿ ವಾಸವಿದ್ದಾರೆ.

ಮಹಾನ್ ವ್ಯಕ್ತಿ ರಾಮಮೂರ್ತಿಯವರಿಗೆ ಗೌರವಾರ್ಥವಾಗಿ, ಪೂರ್ವ ಬೆಂಗಳೂರಿನ ಒಂದು ಪ್ರದೇಶಕ್ಕೆ ರಾಮಮೂರ್ತಿನಗರ ಎಂಬ ಹೆಸರನ್ನು ಇಡಲಾಗಿದೆ. ಕನ್ನಡ ಹೋರಾಟಗಾರ ರಾಮಮೂರ್ತಿ ಅವರ ಪತ್ನಿ ಕಮಲಮ್ಮ ಅನಾಥರಾಗಿದ್ದಾರೆ. ಅನಾಥರಾಗಿರುವ ಇವರಿಗೆ ಸಹಾಯಕರ ಅಗತ್ಯವಿದೆ. ಆದರೆ, ವೃದ್ಧಾಪ್ಯ ವೇತನವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರಾಕರಿಸಿದೆ ಎಂದು ಹೇಳಲಾಗುತ್ತಿದೆ.
ಕಮಲಮ್ಮ ಅವರ ಚಿಕಿತ್ಸಾ ವೆಚ್ಚಕ್ಕೆ ಆರ್ಥಿಕ ನೆರವು ನೀಡುವಂತೆ ಒತ್ತಾಯಿಸಿ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ಸೋಮವಾರ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆಂದು ತಿಳಿದುಬಂದಿದೆ. ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ಅವರನ್ನು ಸಂಪರ್ಕಿಸಿದಾಗ, ಈ ಬಗ್ಗೆ ನನಗೆ ತಿಳಿದಿಲ್ಲ, ಪರಿಶೀಲಿಸುವುದಾಗಿ ಹೇಳಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications