ಅಶ್ವಿನಿ ಅವರ ಬೆಳಕು ಶಾಲೆ ಜೂ.6ಕ್ಕೆ ಲೋಕಾರ್ಪಣೆ
ಬೆಂಗಳೂರು, ಜೂನ್ 3 : ವಿಶ್ವಸಂಸ್ಥೆಯ ಗೌರವಕ್ಕೆ ಪಾತ್ರವಾಗಿರುವ ಅಂಧ ಸಾಧಕಿ ಅಶ್ವಿನಿ ಅಂಗಡಿ ಅವರು ದೃಷ್ಟಿಹೀನ ಮಕ್ಕಳಿಗಾಗಿ ತೆರೆಯುತ್ತಿರುವ ಉಚಿತ ಶಾಲೆ 'ಬೆಳಕು' ಕೋಣನಕುಂಟೆಯಲ್ಲಿ ಉದ್ಘಾಟನೆಗೊಳ್ಳಲಿದೆ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಚಂದ್ರಶೇಖರ ಕಂಬಾರ ಈ ಬೆಳಕು ಶಾಲೆಯನ್ನು ಉದ್ಘಾಟಿಸಲಿದ್ದಾರೆ.
ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅಶ್ವಿನಿ ಅಂಗಡಿ, ಬೆಳಕು ಶಾಲೆಯ ಉದ್ಘಾಟನೆ ಬಗ್ಗೆ ಮಾಹಿತಿ ನೀಡಿದ್ದು, ಜೂನ್ 6ರಂದು ಕೋಣನಕುಂಟೆಯ ಸುಪ್ರಜನಗರ 7ನೇ ಕ್ರಾಸ್ ನಲ್ಲಿರುವ ಶಾಲೆಗಾಗಿ 'ಅಶ್ವಿನಿ ಅಂಗಡಿ ಟ್ರಸ್ಟ್' ಹಾಗೂ 'ಬೆಳಕು ಅಕಾಡೆಮಿ'ಗಳನ್ನು ಆರಂಭಿಸಲಾಗುತ್ತಿದೆ ಎಂದರು.

ಜೂ.6ರಂದು ಶಾಲೆಯನ್ನು ಶಿಕ್ಷಣ ತಜ್ಞೆ ರಾಧಾ ಕುಲಕರ್ಣಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಅವರು ಉದ್ಘಾಟಿಸಲಿದ್ದಾರೆ ಎಂದು ಅಶ್ವಿನಿ ಅಂಗಡಿ ಹೇಳಿದರು. ಐದರಿಂದ 12 ವರ್ಷದವರೆಗಿನ ಮಕ್ಕಳಿಗೆ ಈ ಶಾಲೆಯಲ್ಲಿ ಉಚಿತ ಶಿಕ್ಷಣ ನೀಡಲಾಗುವುದು. ವರ್ಷಕ್ಕೆ ಮೂವತ್ತು ವಿದ್ಯಾರ್ಥಿಗಳ ಮಿತಿಯಲ್ಲಿ ಮಾತ್ರ ತರಗತಿಗಳನ್ನು ನಡೆಸಲಾಗುವುದು ಎಂದು ಹೇಳಿದರು.
ತಮ್ಮ ಶಾಲಾ ದಿನಗಳನ್ನು ನೆನಪು ಮಾಡಿಕೊಂಡ ಅಶ್ವಿನಿ ಅಂಗಡಿ ಅವರು, "ನಾನು ಶಾಲೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಅಂಧ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳ ಕೊರತೆ ಇತ್ತು. ಈ ಕೊರತೆ ಮುಂದಿನ ಪೀಳಿಗೆಯನ್ನು ಕಾಡಬಾರದೆಂಬ ಉದ್ದೇಶದಿಂದ ಈ ಶಾಲೆ ಆರಂಭಿಸುತ್ತಿದ್ದೇನೆ" ಎಂದರು.[ಅಶ್ವಿನಿ ಅಂಗಡಿ ಯಾರು?]
ತಾಂತ್ರಿಕವಾಗಿ ಪರಿಣತಿ ಹೊಂದಿರುವ ಶಿಕ್ಷಕರಿಂದ ಮಕ್ಕಳಿಗೆ ಮಾರ್ಗದರ್ಶನ ನೀಡುವ ಉದ್ದೇಶವಿದೆ. ಆದ್ದರಿಂದ ಇದಕ್ಕೆ ಹೆಚ್ಚಿನ ಹಣದ ಅಗತ್ಯವಿದ್ದು, ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳಿಂದ ಹಣಕಾಸಿನ ನೆರವು ನಿರೀಕ್ಷಿಸುತ್ತಿರುವುದಾಗಿ ಅಶ್ವಿನಿ ಅಂಗಡಿ ತಿಳಿಸಿದರು.
ಬೆಳಕು ಶಾಲೆಗೆ ಸಹಾಯ ಮಾಡಲು ಇಚ್ಚಿಸುತ್ತಿರುವ ದಾನಿಗಳು ಕಾರ್ಪೊರೆಷನ್ ಬ್ಯಾಂಕ್ ಅಕೌಂಟ್ ನಂ : 014401601000930, ಐಎಫ್ಎಸ್ಸಿ ಕೋಡ್ : ಸಿಒಆರ್ಪಿ 00144, ಐಎನ್ಆರ್ಪಿ ಕೋಡ್: 044077 ಗೆ ತಮ್ಮ ದೇಣಿಗೆ ನೀಡಬಹುದಾಗಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications