ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಕೊಲೆ ಯತ್ನ : ಮೂರು ವಿಶೇಷ ತನಿಖಾ ತಂಡ ರಚನೆ
ಬೆಂಗಳೂರು, ಜು. 30: ಕ್ಯಾಮ್ಸ್ ನ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್ ಕೊಲೆಗೆ ಯತ್ನಿಸಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಆರೋಪಿಗಳ ಪತ್ತೆಗಾಗಿ ಮೂರು ತನಿಖಾ ತಂಡ ರಚನೆ ಮಾಡಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ ಧರ್ಮೇಂದ್ರ ಕುಮಾರ್ ಮೀನಾ ತಿಳಿಸಿದ್ದಾರೆ.
ಶಶಿಕುಮಾರ್ ಕಾರಿನಿಂದ ಇಳಿಯುತ್ತಿದ್ದಂತೆ ನಾಲ್ವರು ದಾಳಿ ಮಾಡಿದ್ದಾರೆ. ತಕ್ಷಣ ಲೈಸನ್ಸ್ ಗನ್ ಹೊರ ತೆಗೆದಿದ್ದರಿಂದ ಆರೋಪಿಗಳು ಪರಾರಿಯಾಗಿದ್ದಾರೆ. ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ದಾಳಿ ನಡೆದಿರುವ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ. ಆರ್ಟಿಐ ಕಾರ್ಯಕರ್ತನ ಜತೆಗೆ ವೈಷಮ್ಯ ಹೊಂದಿದ್ದ ಶಶಿಕುಮಾರ್ ಮೇಲೆ ಎರಡು ವರ್ಷದ ಹಿಂದೆಯೂ ಹಲ್ಲೆಗೆ ಯತ್ನ ನಡೆದಿತ್ತು. ಶಶಿಕುಮಾರ್ ಹೇಳಿಕೆ ಪಡೆದಿದ್ದು, ಮೂರು ವಿಶೇಷ ತನಿಖಾ ತಂಡ ರಚಿಸಿ ಎಲ್ಲ ಆಯಾಮದಲ್ಲೂ ತನಿಖೆ ನಡೆಸಲಾಗುತ್ತಿದೆ ಎಂದು ಡಿಸಿಪಿ ಸ್ಪಷ್ಟನೆ ನೀಡಿದ್ದಾರೆ.

Recommended Video
ಯಾರು ಎನ್ನುವ ಸ್ಪಷ್ಟತೆ ಇರಲಿಲ್ಲ: ರಾತ್ರಿ ವೇಳೆ ನನ್ನ ಮೇಲೆ ದಾಳಿ ಮಾಡಿದ ವ್ಯಕ್ತಿಗಳ ಬಗ್ಗೆ ಸ್ಪಷ್ಟತೆ ಇಲ್ಲ. ಬೆದರಿಕೆ ಇರುವುದು ನಿಜ. ಆರ್ಟಿಐ, ಆರ್ಟಿಇ, ಕೆಲ ಖಾಸಗಿ ಶಾಲಾ ಸಂಸ್ಥೆಗಳ ಒಕ್ಕೂಟದ ಹೆಸರಿನಲ್ಲಿ ಬೆದರಿಕೆಗಳು ಬಂದಿವೆ. ಕತ್ತಲು ಆಗಿದ್ದರಿಂದ ಆರೋಪಿಗಳ ಚಹರೆ ಪತ್ತೆ ಮಾಡಲು ಸಾಧ್ಯವಾಗಲಿಲ್ಲ. ಕೇವಲ ಐದಾರು ಸೆಕೆಂಡಿನಲ್ಲಿ ಘಟನೆ ನಡೆದಿದ್ದು ಎಲ್ಲವನ್ನು ಪೊಲೀಸರಿಗೆ ತಿಳಿಸಿದ್ದೇನೆ ಎಂದು ಶಶಿಕುಮಾರ್ ತಿಳಿಸಿದ್ದಾರೆ.
-
Bengaluru-Hyderabad ಬುಲೆಟ್ ಟ್ರೈನ್: ಕೇವಲ 2 ಗಂಟೆ ಪ್ರಯಾಣ, 626 ಕಿಮೀ ಉದ್ದದ ಹಾದಿಯಲ್ಲಿ 12 ನಿಲ್ದಾಣಗಳು -
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ -
Karnataka Weather: ರಾಜ್ಯದಲ್ಲಿ ಏರುತ್ತಿದೆ ಬಿಸಿಲಿನ ಝಳ; ಬೆಂಗಳೂರಿನ ತಾಪಮಾನ 34 ಡಿಗ್ರಿಗೆ ಏರಿಕೆ -
ಜೈಲಲ್ಲಿರುವ ಪವಿತ್ರಾ ಗೌಡಗೆ ಮನೆ ಊಟ ವ್ಯವಸ್ಥೆಗೆ ಬ್ರೇಕ್ ಹಾಕಿದ ಹೈಕೋರ್ಟ್ -
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ












Click it and Unblock the Notifications