ಬೇಕಿರುವುದು ಜಾತಿ ಭೇದ ಪ್ರತಿಪಾದಿಸುವ ಹಿಂದುತ್ವ ಅಲ್ಲ: ಸಿದ್ದರಾಮಯ್ಯ
ಬೆಂಗಳೂರು, ನವೆಂಬರ್ 26: ನಾಡಿಗೆ ಜಾತ್ಯತೀತತೆಯ ಸಂದೇಶವನ್ನು ಸಾರಿದ ದಾಸ ಶ್ರೇಷ್ಠರಲ್ಲಿ ಒಬ್ಬರಾದ ಕನಕದಾಸರ ಜಯಂತಿ ಇಂದು (ನ.26).
13ನೇ ಶತಮಾನದಲ್ಲಿ ದಾಸಸಾಹಿತ್ಯ ಪರಂಪರೆಯ ಮೂಲಕ ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದವರಲ್ಲಿ ಕನಕದಾಸರ ಕೊಡುಗೆ ಮಹತ್ವದ್ದು. ಅವರ 'ಮೋಹನ ತರಂಗಿಣಿ', 'ನಳ ಚರಿತ್ರೆ', 'ಹರಿಭಕ್ತಸಾರ', 'ರಾಮಧಾನ್ಯ ಚರಿತೆ' ಕೃತಿಗಳು ಅವರ ವೈವಿಧ್ಯಮಯ ಸಾಹಿತ್ಯ ಪ್ರತಿಭೆಗೆ ಸಾಕ್ಷಿ.
ಪ್ರತಿ ವರ್ಷ ಕನಕದಾಸ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲಾಗುತ್ತಿತ್ತು. ಸರ್ಕಾರದ ವತಿಯಿಂದ ಕನಕದಾಸ ಜಯಂತಿ ಆಚರಣೆಗೆ ಸಕಲ ಸಿದ್ಧತೆಗಳು ನಡೆದಿದ್ದವು. ಆದರೆ, ಅಂಬರೀಶ್ ನಿಧನದ ಹಿನ್ನೆಲೆಯಲ್ಲಿ ಮನರಂಜನಾ ಕಾರ್ಯಕ್ರಮಗಳನ್ನು ನಡೆಸದೆ ಸರಳವಾಗಿ ಆಚರಿಸುವಂತೆ ಸೂಚಿಸಲಾಗಿತ್ತು.
ಆದರೆ, ಅಂತ್ಯ ಸಂಸ್ಕಾರ ಸೋಮವಾರ ನಡೆಸುವುದಾಗಿ ತೀರ್ಮಾನಿಸಿದ್ದರಿಂದ ಜಯತಿ ಆಚರಣೆಯನ್ನು ಮುಂದೂಡುವಂತೆ ಎಲ್ಲ ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕನಕದಾಸರನ್ನು ಹೊಗಳುತ್ತಾ, ಅವರ ಜಾತ್ಯತೀತ ತತ್ವಗಳನ್ನು ನೆನಪಿಸಿಕೊಂಡಿದ್ದಾರೆ.
| Array |
ಕನಕದಾಸ ಜಯಂತಿ ಶುಭಾಶಯ
ಐದುನೂರು ವರ್ಷಗಳ ಹಿಂದೆಯೇ ಕುಲಕುಲ ಕುಲವೆಂದು ಹೊಡೆದಾಡದಿರಿ, ನಿಮ್ಮ ಕುಲದ ನೆಲೆಯನ್ನೇನಾದರೂ ಬಲ್ಲಿರಾ? ಎಂದು ವರ್ಣಾಶ್ರಮ ವ್ಯವಸ್ಥೆ ಸೃಷ್ಟಿಸಿರುವ ಜಾತಿ ನರಕವನ್ನು ದಿಟ್ಟತನದಿಂದ ಪ್ರಶ್ನಿಸಿ ಆತ್ಮಾವಲೋಕನಕ್ಕೆ ಕರೆಕೊಟ್ಟ ಸಂತ ಕನಕದಾಸರ ಜಯಂತಿಗೆ ನಾಡಬಾಂಧವರಿಗೆ ಶುಭಾಶಯಗಳು.
| Array |
ಕನಕದಾಸರು ಇಂದಿಗೂ ಪ್ರಸ್ತುತ
ಸ್ವಾತಂತ್ರ್ಯ ಸಿಕ್ಕಿ 70 ವರ್ಷಗಳು ಕಳೆದರೂ, ಸಮಾನತೆಯ ಆಧಾರದ ಸಮಾಜ ನಿರ್ಮಾಣದ ಆಶಯದ ಸಂವಿಧಾನವನ್ನು ಒಪ್ಪಿಕೊಂಡ ನಂತರವೂ ಕನಕದಾಸರು 500 ವರ್ಷಗಳ ಹಿಂದೆ ಎತ್ತಿರುವ ಪ್ರಶ್ನೆ ಈಗಲೂ ಪ್ರಸ್ತುತ ಎಂದು ಅನಿಸಲು ಕಾರಣಗಳೇನೆಂಬುದನ್ನು ನಾವು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
|
ಜಾತಿ, ಧರ್ಮಕ್ಕೆ ಸೀಮಿತರಲ್ಲ
ಕನಕದಾಸರ ಜಯಂತಿ ಎಂದರೆ ಅವರ ವೈಯಕ್ತಿಕ ವೈಭವೀಕರಣ ಅಲ್ಲ, ಅವರನ್ನು ಒಂದು ಜಾತಿ ಇಲ್ಲವೆ,ಧರ್ಮಕ್ಕೆ ಸೀಮಿತಗೊಳಿಸುವುದೂ ಅಲ್ಲ. ಕನಕದಾಸರ ಸಾಮಾಜಿಕ ಚಿಂತನೆ, ಸಮಾನತೆಯ ಸಮಾಜದ ಆಶಯಹೊಂದಿರುವ ಎಲ್ಲ ಜಾತಿ-ಧರ್ಮಗಳಿಗೂ ಆದರ್ಶಪ್ರಾಯವಾಗಿರುವಂತಹದ್ದು ಎಂಬುದನ್ನು ನಾವು ತಿಳಿದುಕೊಳ್ಳಬೇಕು ಎಂದಿದ್ದಾರೆ.
|
ಭೇದ ಪ್ರತಿಪಾದಿಸುವ ಹಿಂದುತ್ವ ಬೇಡ
ನಮಗೆ ಇಂದು ಬೇಕಾಗಿರುವುದು ಕನಕದಾಸರು ಪ್ರತಿಪಾದಿಸಿದ ಜಾತಿಭೇದ, ವರ್ಣಭೇದ ಲಿಂಗಭೇದ ಮತ್ತು ವರ್ಗ ಭೇದ ಇಲ್ಲದ ಹಿಂದುತ್ವವೇ ಹೊರತು ಮನು ಪ್ರಣೀತ ಜಾತಿವ್ಯವಸ್ಥೆಯನ್ನು ಸಮರ್ಥಿಸುವ, ಜಾತಿ, ಲಿಂಗ ಭೇದವನ್ನು ಪ್ರತಿಪಾದಿಸುವ ಹಿಂದುತ್ವ ಅಲ್ಲ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications