ಗಡೀಪಾರು ಸುದ್ದಿ: ನಟ ಚೇತನ್ ಅಹಿಂಸಾ ಫೇಸ್ ಬುಕ್ ಪೋಸ್ಟ್
ಬೆಂಗಳೂರು, ಮಾರ್ಚ್ 14: ಅಮೆರಿಕಾದ ಗ್ರೀನ್ ಕಾರ್ಡ್ ಹೋಲ್ಡರ್ ಆಗಿರುವ ಆ ದಿನಗಳು ಚಲನಚಿತ್ರ ಖ್ಯಾತಿಯ ನಟ ಚೇತನ್ ಕುಮಾರ್, ಗಡೀಪಾರು ವಿಚಾರದ ಬಗ್ಗೆ ಸಾಮಾಜಿಕ ತಾಣದಲ್ಲಿ ಬರೆದುಕೊಂಡಿದ್ದಾರೆ.
ಬೇರೆ ದೇಶದ ಪ್ರಜೆಯಾಗಿ ಭಾರತದಲ್ಲಿ ಹೋರಾಟ ನಡೆಸುತ್ತಿರುವುದಕ್ಕಾಗಿ ಕಾನೂನಿನ ಉಲ್ಲಂಘನೆ ಆರೋಪ ಚೇತನ್ ವಿರುದ್ದ ಕೇಳಿ ಬಂದಿದೆ. ಈ ಸಂಬಂಧ, ಬೆಂಗಳೂರು ಪೊಲೀಸರು ರಾಜ್ಯ ಸರಕಾರಕ್ಕೆ ವಿಸ್ತೃತವಾದ ವರದಿಯನ್ನು ಸಲ್ಲಿಸಿದ್ದರು. ಈ ಬಗ್ಗೆ ಫೇಸ್ ಬುಕ್ ನಲ್ಲಿ ಚೇತನ್ ಬರೆದುಕೊಂಡಿದ್ದು ಹೀಗೆ:
"ಮೂರು ವಾರಗಳ ನಂತರ ಸಾಮಾಜಿಕ ತಾಣಕ್ಕೆ ಮತ್ತೆ ಮರಳಿದ್ದೇನೆ. ಕರ್ನಾಟಕದಲ್ಲಿ, ಭಾರತದಲ್ಲಿ ಮತ್ತು ವಿದೇಶಗಳಿಂದಲೂ ಗಟ್ಟಿ ಕಾರಣವಿರದ ನ್ಯಾಯಾಂಗ ಬಂಧನದ ಸಮಯದಲ್ಲಿ ನನ್ನ ಜೊತೆಗಿದ್ದು ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳು"

"ಸದ್ಯದ ನನ್ನ ಗಡಿಪಾರಿನ ವರದಿಗಳೆಲ್ಲ ಆಧಾರವಿಲ್ಲದ ಅತಿರೇಕದ ಸುದ್ದಿಗಳು. ಈ ತರದ ಸರ್ಕಾರಿ ಬೆಂಬಲಿತ ದಾಳಿಗಳು ನಮ್ಮ ಸತ್ಯ ಮತ್ತು ಸಮಾನತೆಯ ಪರದ ಧ್ವನಿಗಳು ಹೆಚ್ಚಾಗುತ್ತಿರುವುದನ್ನ ತೋರಿಸುತ್ತದೆ"ಎಂದು ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಚೇತನ್ ಅಹಿಂಸಾ ಬರೆದುಕೊಂಡಿದ್ದಾರೆ.
ಚೇತನ್ ಅವರ ಈ ಪೋಸ್ಟಿಗೆ ನೂರಾರು ಕಾಮೆಂಟುಗಳು ಬಂದಿವೆ. "ಅಧಿಕಾರ ಅನ್ನೋದು ನಿಜವಾಗ್ಲೂ ನಿಮ್ಮಂಥವರಿಗೆ ಸಿಗಬೇಕು. ಸಾಮಾನ್ಯ ಜ್ಞಾನ ಇಲ್ಲದವರು, ಕಾಂಜಿ ಪಿಂಜಿಗಳೆಲ್ಲ ಅಧಿಕಾರ ಅನುಭವಿಸುತ್ತಿದ್ದಾರೆ, ನಿಮ್ಮ ಮುಂದೆ ಅವರೆಲ್ಲ ಶೂನ್ಯ ಅಣ್ಣ" ಎಂದು ಅವರ ಅಭಿಮಾನಿಗಳು ಚೇತನ್ ಅವರಿಗೆ ಸ್ವಾಗತ ಕೋರಿದ್ದಾರೆ.
"ನಿನ್ನ ಬಿಡುಗಡೆಗೆ ಬೆಂಬಲಿಸಿದವರಲ್ಲಿ ಬಹುತೇಕರು ಮಹಾತ್ಮ ಗಾಂಧಿ ಯಾವ ಅಭಿಮಾನಿಗಳು. ಇನ್ನಾದರೂ ಗಾಂಧಿಯನ್ನು ನಿಂದಿಸುವ ನಿನ್ನ ಮತಿಗೆಟ್ಟ ಬುದ್ದಿಗೆ ತಿಲಾಂಜಲಿಯಿಟ್ಟು ಮಾನವನಾಗು" ಎನ್ನುವ ಬುದ್ದಿಮಾತುಗಳೂ ಇವರ ಪೋಸ್ಟಿಗೆ ಬಂದಿದೆ.
ಸಾಗರೋತ್ತರ ಭಾರತೀಯ ನಾಗರಿಕ ಪತ್ರ (Overseas Citizenship of India) ಕಾನೂನಿನ ಪ್ರಕಾರ, ಚೇತನ್ ಕಾನೂನನ್ನು ಉಲ್ಲಂಘಿಸಿದ್ದಾರೆ ಎನ್ನುವ ವರದಿಯನ್ನು ಬೆಂಗಳೂರು ಪೊಲೀಸರು, ರಾಜ್ಯ ಗೃಹ ಸಚಿವಾಲಯಕ್ಕೆ ನೀಡಿದ್ದಾರೆ. ಈ ಕಾನೂನಿನ ಪ್ರಕಾರ, ಈ ಕಾರ್ಡ್ ಅನ್ನು ಹೊಂದಿರುವವರು ಸ್ಥಳೀಯ ಕಾನೂನು ಉಲ್ಲಂಘನೆ, ಹೋರಾಟ, ಪ್ರತಿಭಟನೆ ನಡೆಸುವಂತಿಲ್ಲ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications