ಗಡೀಪಾರು ಸುದ್ದಿ: ನಟ ಚೇತನ್ ಅಹಿಂಸಾ ಫೇಸ್ ಬುಕ್ ಪೋಸ್ಟ್
ಬೆಂಗಳೂರು, ಮಾರ್ಚ್ 14: ಅಮೆರಿಕಾದ ಗ್ರೀನ್ ಕಾರ್ಡ್ ಹೋಲ್ಡರ್ ಆಗಿರುವ ಆ ದಿನಗಳು ಚಲನಚಿತ್ರ ಖ್ಯಾತಿಯ ನಟ ಚೇತನ್ ಕುಮಾರ್, ಗಡೀಪಾರು ವಿಚಾರದ ಬಗ್ಗೆ ಸಾಮಾಜಿಕ ತಾಣದಲ್ಲಿ ಬರೆದುಕೊಂಡಿದ್ದಾರೆ.
ಬೇರೆ ದೇಶದ ಪ್ರಜೆಯಾಗಿ ಭಾರತದಲ್ಲಿ ಹೋರಾಟ ನಡೆಸುತ್ತಿರುವುದಕ್ಕಾಗಿ ಕಾನೂನಿನ ಉಲ್ಲಂಘನೆ ಆರೋಪ ಚೇತನ್ ವಿರುದ್ದ ಕೇಳಿ ಬಂದಿದೆ. ಈ ಸಂಬಂಧ, ಬೆಂಗಳೂರು ಪೊಲೀಸರು ರಾಜ್ಯ ಸರಕಾರಕ್ಕೆ ವಿಸ್ತೃತವಾದ ವರದಿಯನ್ನು ಸಲ್ಲಿಸಿದ್ದರು. ಈ ಬಗ್ಗೆ ಫೇಸ್ ಬುಕ್ ನಲ್ಲಿ ಚೇತನ್ ಬರೆದುಕೊಂಡಿದ್ದು ಹೀಗೆ:
"ಮೂರು ವಾರಗಳ ನಂತರ ಸಾಮಾಜಿಕ ತಾಣಕ್ಕೆ ಮತ್ತೆ ಮರಳಿದ್ದೇನೆ. ಕರ್ನಾಟಕದಲ್ಲಿ, ಭಾರತದಲ್ಲಿ ಮತ್ತು ವಿದೇಶಗಳಿಂದಲೂ ಗಟ್ಟಿ ಕಾರಣವಿರದ ನ್ಯಾಯಾಂಗ ಬಂಧನದ ಸಮಯದಲ್ಲಿ ನನ್ನ ಜೊತೆಗಿದ್ದು ಬೆಂಬಲಿಸಿದ ಎಲ್ಲರಿಗೂ ಧನ್ಯವಾದಗಳು"

"ಸದ್ಯದ ನನ್ನ ಗಡಿಪಾರಿನ ವರದಿಗಳೆಲ್ಲ ಆಧಾರವಿಲ್ಲದ ಅತಿರೇಕದ ಸುದ್ದಿಗಳು. ಈ ತರದ ಸರ್ಕಾರಿ ಬೆಂಬಲಿತ ದಾಳಿಗಳು ನಮ್ಮ ಸತ್ಯ ಮತ್ತು ಸಮಾನತೆಯ ಪರದ ಧ್ವನಿಗಳು ಹೆಚ್ಚಾಗುತ್ತಿರುವುದನ್ನ ತೋರಿಸುತ್ತದೆ"ಎಂದು ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಚೇತನ್ ಅಹಿಂಸಾ ಬರೆದುಕೊಂಡಿದ್ದಾರೆ.
ಚೇತನ್ ಅವರ ಈ ಪೋಸ್ಟಿಗೆ ನೂರಾರು ಕಾಮೆಂಟುಗಳು ಬಂದಿವೆ. "ಅಧಿಕಾರ ಅನ್ನೋದು ನಿಜವಾಗ್ಲೂ ನಿಮ್ಮಂಥವರಿಗೆ ಸಿಗಬೇಕು. ಸಾಮಾನ್ಯ ಜ್ಞಾನ ಇಲ್ಲದವರು, ಕಾಂಜಿ ಪಿಂಜಿಗಳೆಲ್ಲ ಅಧಿಕಾರ ಅನುಭವಿಸುತ್ತಿದ್ದಾರೆ, ನಿಮ್ಮ ಮುಂದೆ ಅವರೆಲ್ಲ ಶೂನ್ಯ ಅಣ್ಣ" ಎಂದು ಅವರ ಅಭಿಮಾನಿಗಳು ಚೇತನ್ ಅವರಿಗೆ ಸ್ವಾಗತ ಕೋರಿದ್ದಾರೆ.
"ನಿನ್ನ ಬಿಡುಗಡೆಗೆ ಬೆಂಬಲಿಸಿದವರಲ್ಲಿ ಬಹುತೇಕರು ಮಹಾತ್ಮ ಗಾಂಧಿ ಯಾವ ಅಭಿಮಾನಿಗಳು. ಇನ್ನಾದರೂ ಗಾಂಧಿಯನ್ನು ನಿಂದಿಸುವ ನಿನ್ನ ಮತಿಗೆಟ್ಟ ಬುದ್ದಿಗೆ ತಿಲಾಂಜಲಿಯಿಟ್ಟು ಮಾನವನಾಗು" ಎನ್ನುವ ಬುದ್ದಿಮಾತುಗಳೂ ಇವರ ಪೋಸ್ಟಿಗೆ ಬಂದಿದೆ.
ಸಾಗರೋತ್ತರ ಭಾರತೀಯ ನಾಗರಿಕ ಪತ್ರ (Overseas Citizenship of India) ಕಾನೂನಿನ ಪ್ರಕಾರ, ಚೇತನ್ ಕಾನೂನನ್ನು ಉಲ್ಲಂಘಿಸಿದ್ದಾರೆ ಎನ್ನುವ ವರದಿಯನ್ನು ಬೆಂಗಳೂರು ಪೊಲೀಸರು, ರಾಜ್ಯ ಗೃಹ ಸಚಿವಾಲಯಕ್ಕೆ ನೀಡಿದ್ದಾರೆ. ಈ ಕಾನೂನಿನ ಪ್ರಕಾರ, ಈ ಕಾರ್ಡ್ ಅನ್ನು ಹೊಂದಿರುವವರು ಸ್ಥಳೀಯ ಕಾನೂನು ಉಲ್ಲಂಘನೆ, ಹೋರಾಟ, ಪ್ರತಿಭಟನೆ ನಡೆಸುವಂತಿಲ್ಲ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion












Click it and Unblock the Notifications