ಬೆಂಗ್ಳೂರಿನಲ್ಲಿ ಕೇಂದ್ರದ ವಿರುದ್ಧ ಹರಿಹಾಯ್ದ ಕನ್ಹಯ್ಯ
ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಗುರುವಾರ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ
ಬೆಂಗಳೂರು, ಜನವರಿ 19: ಕಳೆದ ಮೂರು ವರ್ಷಗಳಲ್ಲಿ ದೇಶದ ಉನ್ನತ ಶಿಕ್ಷಣ, ಕೃಷಿ ಮತ್ತು ಆರ್ಥಿಕ ಕ್ಷೇತ್ರಗಳು ದಯನೀಯ ಸ್ಥಿತಿ ತಲುಪಿದ್ದು, ಜನರ ಗಮನ ಬೇರೆಡೆ ಸೆಳೆಯಲು ಪ್ರತಿನಿತ್ಯ ಹೊಸದೊಂದು ನೀತಿ ಜಾರಿಗೊಳಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಜೆಎನ್ಯು ವಿದ್ಯಾರ್ಥಿ ಕನ್ಹಯ್ಯಕುಮಾರ್ ಕಳವಳ ವ್ಯಕ್ತಪಡಿಸಿದರು.
ಪ್ರೆಸ್ಕ್ಲಬ್ನಲ್ಲಿ ಗುರುವಾರ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿ, ದೇಶದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಕೇಂದ್ರ ಸರ್ಕಾರ ನೇರ ಹಸ್ತಕ್ಷೇಪ ಮಾಡುತ್ತಿದೆ. ಐಐಎಂ, ಐಐಟಿ, ಕೇಂದ್ರೀಯ ವಿಶ್ವವಿದ್ಯಾಲಯಗಳಂತಹ ಮಹತ್ವದ ಶೈಕ್ಷಣಿಕ ಸಂಸ್ಥೆಗಳಲ್ಲಿ ಅಧಿಕಾರದಲ್ಲಿರುವ ರಾಜಕಾರಣಿಗಳು ನೇರ ರಾಜಕೀಯ ಮಾಡುತ್ತಿದ್ದಾರೆ. ಮತ್ತೊಂದೆಡೆ ಉನ್ನತ ಶಿಕ್ಷಣಕ್ಕೆ ನೀಡಲಾಗುತ್ತಿದ್ದ ಅನುದಾನವನ್ನು ಶೇ.೭೦ರಷ್ಟು ಕಡಿತಗೊಳಿಸಲಾಗಿದೆ. ಆರ್ಎಸ್ಎಸ್ ಸಿದ್ಧಾಂತದ ಮೇಲೆ ಸಂಸ್ಥೆಗಳು ನಡೆಯಬೇಕೆಂಬ ಹುನ್ನಾರ ಕೇಂದ್ರ ಸರ್ಕಾರದ ಹಸ್ತಕ್ಷೇಪದ ಹಿಂದಿನ ಹುನ್ನಾರವಾಗಿದೆ ಎಂದು ಆರೋಪಿಸಿದರು.
ದೇಶದ ಕೃಷಿ ಕ್ಷೇತ್ರದ ಬೆಳವಣಿಗೆ ಶೇ.೪೨ರಷ್ಟು ಕುಸಿತವಾಗಿದೆ ಎಂಬುದನ್ನು ಒಪ್ಪಿಕೊಳ್ಳಲು ಪ್ರಧಾನಿ ಮೋದಿ ಸಿದ್ಧರಿಲ್ಲ. ಬದಲಾಗಿ ವ್ಯಾಪಾರಸ್ಥರಿಗೆ ಅನುಕೂಲ ಮಾಡಿಕೊಡಲು ಗೋದಿ ಆಮದು ಮೇಲಿನ ಸುಂಕವನ್ನು ಇಳಿಕೆ ಮಾಡಲಾಗಿದೆ. ಇದರಿಂದ ದೇಶದ ರೈತರು ದಿಕ್ಕುತಪ್ಪಿದಂತಾಗಿದ್ದಾರೆ. ಕೃಷಿಕರ ರಕ್ಷಣೆಗಾಗಿ ನೀತಿಗಳಿರಬೇಕು ಎಂಬ ದೇಶದ ಸಂವಿಧಾನ ತತ್ವಗಳಿಗೂ ಕೇಂದ್ರ ಸರ್ಕಾರದ ನಡತೆಗೂ ತಾಳೆಯಾಗುತ್ತಿಲ್ಲ ಎಂದು ದೂರಿದರು.

ಅಧ್ಯಯನಕ್ಕಾಗಿ ಬಳಸಲ್ಪಡಬೇಕಾದ ವಿಶ್ವವಿದ್ಯಾಲಯಗಳು ಕುತಂತ್ರದಿಂದ ರಾಜಕೀಯ ಚಟುವಟಿಕೆ ಕೇಂದ್ರಗಳಾಗಿ ಮಾರ್ಪಡುತ್ತಿವೆ ಆರ್ಎಸ್ಎಸ್ನ ಚಟುವಟಿಕೆಗಳು ದೇಶದ ಸಂವಿಧಾನದ ವಿರುದ್ಧವಾಗಿವೆ ಎಂದ ಅವರು, ಇಂತಹ ಚಟುವಟಿಕೆಗಳಿಂದ ಸಮಾಜದಲ್ಲಿನ ವ್ಯವಸ್ಥೆ ಹಾಳಾಗುತ್ತಿದೆ.
ನಮ್ಮ ಸುತ್ತ ಏನು ನಡೆಯುತ್ತಿದೆ ಎನ್ನುವುದನ್ನು ಅರಿತುಕೊಳ್ಳದಷ್ಟು ಮಟ್ಟಕ್ಕೆ ವಿದ್ಯಾರ್ಥಿಗಳು ತಲುಪಿದ್ದಾರೆ ಎಂದರು.
ಪ್ರಧಾನಮಂತ್ರಿಗಳಾಗಲಿ, ಆರ್ಎಸ್ಎಸ್ ಆಗಲಿ ದೇಶವಲ್ಲ, ಅವರು ದೇಶದ ಒಂದು ಭಾಗ ಮಾತ್ರ ಶ್ವದ್ಯಾನಿಲಯಗಳು ಸಂಪೂರ್ಣ ಸ್ವಾಯತತ್ತೆುಂದ ಕೂಡಿರಬೇಕು.
ರಾಜಕೀಯವನ್ನು ಶಿಕ್ಷಣದಲ್ಲಿ ಲೀನಗೊಳಿಸಬಾರದು ಎಂದರು. ಕಪ್ಪು ಹಣ ನಿಗ್ರಹಕ್ಕಾಗಿ ಕೈಗೊಂಡ ನೋಟು ನಿಷೇಧ ಕ್ರಮದಿಂದ ಯಾವುದೇ ಬದಲಾವಣೆಗಳಾಗಿಲ್ಲ. ದೇಶದ ೨೦ ಲಕ್ಷಕ್ಕೂ ಅಧಿಕ ಜನ ನೋಟು ನಿಷೇಧದಿಂದ ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಪ್ರಜೆಗಳ ರಕ್ಷಣೆ, ಜವಾಬ್ದಾರಿ ಸರ್ಕಾರದ ಮೇಲಿದೆ ಎಂದರು.
ಆದರೆ, ಸರ್ಕಾರದ ರೀತಿ- ನೀತಿಗಳು ಸಮಾಜದಲ್ಲಿನ ರಾಜಕೀಯ ವ್ಯವಸ್ಥೆಗಳು ದೇಶದ ಪರಿಸ್ಥಿತಿಯನ್ನು ಹದಗೆಡಿಸುತ್ತಿವೆ ಎಂದ ಅವರು, ದೇಶದಲ್ಲಿನ ನಿರುದ್ಯೋಗ ಸಮಸ್ಯೆ ನಿವಾರಿಸುವಲ್ಲಿ ಸರ್ಕಾರ ಸಂಪೂರ್ಣವಾಗಿ ಫಲವಾಗಿದೆ ಎಂದರು. ೩೫ ವರ್ಷದೊಳಗಿನ ಶೇ. ೬೫ರಷ್ಟು ಯುವಕರು ನಿರುದ್ಯೋಗಿಗಳಾಗಿದ್ದಾರೆ.
ನಿರುದ್ಯೋಗ ನಿವಾರಣೆಗಾಗಿ ಸರ್ಕಾರಗಳು ಬಜೆಟ್ನಲ್ಲಿ ಯಾವುದೇ ಯೋಜನೆಗಳನ್ನು ಘೋಸದಿರುವುದು ನಿರುದ್ಯೋಗ ಸಮಸ್ಯೆ ಹೆಚ್ಚಳಕ್ಕೆ ಪ್ರಮುಖ ಕಾರಣ ಎಂದ ಆಶಾವಾದ ರಾಜಕೀಯಕ್ಕೆ ಯುವಕರು ಬಲಿಯಾಗುತ್ತಿದ್ದಾರೆ ಎಂದು ದೂರಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications